Homeಕರ್ನಾಟಕನಿಷೇದಾಜ್ಞೆ ಧಿಕ್ಕರಿಸಿ, CAA, NRC ವಿರುದ್ಧ ಶಾಂತಿಯುತ ಪ್ರತಿಭಟನೆ: ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳ ಬಂಧನ..

ನಿಷೇದಾಜ್ಞೆ ಧಿಕ್ಕರಿಸಿ, CAA, NRC ವಿರುದ್ಧ ಶಾಂತಿಯುತ ಪ್ರತಿಭಟನೆ: ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳ ಬಂಧನ..

ಇದು ಮಹಮ್ಮದ್‌ ಅಲಿ ಜಿನ್ನಾ ಮತ್ತು ಸಾವರ್ಕರ್‌ರವರ ದೇಶ ಅಲ್ಲ. ಬದಲಿಗೆ ಮಹಾತ್ಮ ಗಾಂಧಿ, ಮೌಲನಾ ಅಬ್ದುಲ್‌, ಭಗತ್‌ ಸಿಂಗ್‌ ಸೇರಿದಂತೆ ಈ ದೇಶದ ಸ್ವಾತಂತ್ರ ಚಳವಳಿಯಲ್ಲಿ ಹಿಂದೂ ಮುಸ್ಲಿಂರು ಸೇರಿದಂತೆ ಎಲ್ಲ ಧರ್ಮಿಯರು ಭಾಗವಹಿಸಿದ್ದ ದೇಶ.

- Advertisement -
- Advertisement -

ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನ ಟೌನ್‌ ಹಾಲ್‌ ಎದುರು ಶಾಂತಿಯುತ ಪ್ರತಿಭಟನೆ ನಡೆದಿದೆ. ಈ ವೇಳೆ ನಿಷೇದಾಜ್ಞೆ ಉಲ್ಲಂಘಿಸಿದ ಕಾರಣಕ್ಕಾಗಿ ಪೊಲೀಸರು ಪ್ರತಿಭಟನಾಕಾರರನ್ನು ಎಳೆದಾಡಿ, ಹಲ್ಲೆ ನಡೆಸಿ ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ನಿಗಧಿಯಂತೆ ಪುರ್ವಾನುಮತಿ ಪಡೆದು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಡಾ.ಎಚ್.ವಿ ವಾಸು, ಸಂಜಯ್, ಮಲ್ಲಿಗೆ ಸ್ವರಾಜ್ ಇಂಡಿಯಾದ ಮನೋಹರ್ ಇಳವರ್ತಿ, ವಕೀಲರಾದ, ನರಸಿಂಹಮೂರ್ತಿ, ವಿನಯ್ ಶ್ರೀನಿವಾಸನ್ ಸೇರಿದಂತೆ ಹಲವು ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಎಚ್‌.ವಿ ವಾಸು “ಈ ದೇಶದ ಮೂಲ ಪರಿಕಲ್ಪನೆ ಎಲ್ಲಾ ಧರ್ಮೀಯರನ್ನು ಸಮಾನವಾಗಿ ಕಾಣುವಂತೆ ನಮ್ಮ ಸಂವಿಧಾನ ಹೇಳುತ್ತದೆ. ಧರ್ಮದ ಆಧಾರದ ಮೇಲೆ ದೇಶ ಒಡೆಯುವ ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿಯನ್ನು ನಾವು ವಿರೋಧಿಸುತ್ತೇವೆ. ಇದು ಮಹಮ್ಮದ್‌ ಅಲಿ ಜಿನ್ನಾ ಮತ್ತು ಸಾವರ್ಕರ್‌ರವರ ದೇಶ ಅಲ್ಲ ಇದು. ಮಹಾತ್ಮ ಗಾಂಧಿ, ಮೌಲನಾ ಅಬ್ದುಲ್‌, ಭಗತ್‌ ಸಿಂಗ್‌ ಸೇರಿದಂತೆ ಈ ದೇಶದ ಸ್ವಾತಂತ್ರ ಚಳವಳಿಯಲ್ಲಿ ಹಿಂದೂ ಮುಸ್ಲಿಂರು ಸೇರಿದಂತೆ ಎಲ್ಲ ಧರ್ಮಿಯರು ಭಾಗವಹಿಸಿದ್ದಾರೆ ಎಂಬುದನ್ನು ನಾವು ಮರೆಯಬಾರದು. 1927 ಡಿಸೆಂಬರ್ 19 ರಂದು ಪ್ರಾಣ ಸ್ನೇಹಿತರಾಗಿದ್ದ ಅಶ್ವಾಕುಲ್ಲಾ ಖಾನ್ ಮತ್ತು ರಾಮಪ್ರಸಾದ್ ಬಿಸ್ಮಿಲ್ ಭಾರತದ ಸ್ವಾತಂತ್ರಕ್ಕಾಗಿ ಹುತಾತ್ಮರಾದ ದಿನ ಇಂದು. ಹಾಗಾಗಿ ಅನ್ಯಾಯವೇ ಕಾನೂನಾಗುತ್ತಿರುವಾಗ ಪ್ರತಿರೋಧಿಸುವುದು ನಮ್ಮ ಕರ್ತವ್ಯ ಎಂದು ತಿಳಿದು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ” ಎಂದರು.

ಪೊಲೀಸರ ಈ ದೌರ್ಜನ್ಯವನ್ನು ಖಂಡಿಸುತ್ತೇವೆ. ಬಂಧಿಸಿದ ಮಾತ್ರಕ್ಕೆ ಪ್ರತಿಭಟನೆ ನಿಲ್ಲುವುದಿಲ್ಲ. ರಾಜ್ಯದ್ಯಂತ ಪ್ರತಿಭಟನೆ ಇನ್ನು ತೀವ್ರವಾಗಲಿದೆ. ನೋ ವೈಲೆನ್ಸ್‌, ನೋ ಸೈಲೆನ್ಸ್‌ ಎಂದು ಡಾ.ವಾಸು ಎಚ್‌.ವಿ ಹೇಳಿದ್ದಾರೆ.

ಪೊಲೀಸರು ಮಹಿಳೆಯರು, ಮಕ್ಕಳು ಎಂಬುದನ್ನು ನೋಡದೇ ಪ್ರತಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಪ್ರತಿಭಟನೆಗೆ ಅನುಮತಿ ಪಡೆದಿದ್ದರಲ್ಲ ಎಂಬ ಪ್ರಶ್ನೆಗೆ ನಾನು ಮೊದಲು ಪ್ರತಿಭಟನೆಗೆ ಅನುಮತಿ ಕೊಟ್ಟಿದ್ದು ನಿಜ. ಆದರೆ ನಿಷೇದಾಜ್ಞೆ ಘೋಷಣೆಯಾದ ಮೇಲೆ ಎಲ್ಲಾ ಅನುಮತಿಗಳನ್ನು ರದ್ದುಗೊಳಿಸಿದ್ದೇವೆ. ಪ್ರತಿಭಟನಾಕಾರರ ಮೇಲೆ ಕ್ರಮಜರುಗಿಸುವುದಾಗಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಉಮೇಶ್‌ ಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...