Homeಕರ್ನಾಟಕನಿಷೇದಾಜ್ಞೆ ಧಿಕ್ಕರಿಸಿ, CAA, NRC ವಿರುದ್ಧ ಶಾಂತಿಯುತ ಪ್ರತಿಭಟನೆ: ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳ ಬಂಧನ..

ನಿಷೇದಾಜ್ಞೆ ಧಿಕ್ಕರಿಸಿ, CAA, NRC ವಿರುದ್ಧ ಶಾಂತಿಯುತ ಪ್ರತಿಭಟನೆ: ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳ ಬಂಧನ..

ಇದು ಮಹಮ್ಮದ್‌ ಅಲಿ ಜಿನ್ನಾ ಮತ್ತು ಸಾವರ್ಕರ್‌ರವರ ದೇಶ ಅಲ್ಲ. ಬದಲಿಗೆ ಮಹಾತ್ಮ ಗಾಂಧಿ, ಮೌಲನಾ ಅಬ್ದುಲ್‌, ಭಗತ್‌ ಸಿಂಗ್‌ ಸೇರಿದಂತೆ ಈ ದೇಶದ ಸ್ವಾತಂತ್ರ ಚಳವಳಿಯಲ್ಲಿ ಹಿಂದೂ ಮುಸ್ಲಿಂರು ಸೇರಿದಂತೆ ಎಲ್ಲ ಧರ್ಮಿಯರು ಭಾಗವಹಿಸಿದ್ದ ದೇಶ.

- Advertisement -
- Advertisement -

ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನ ಟೌನ್‌ ಹಾಲ್‌ ಎದುರು ಶಾಂತಿಯುತ ಪ್ರತಿಭಟನೆ ನಡೆದಿದೆ. ಈ ವೇಳೆ ನಿಷೇದಾಜ್ಞೆ ಉಲ್ಲಂಘಿಸಿದ ಕಾರಣಕ್ಕಾಗಿ ಪೊಲೀಸರು ಪ್ರತಿಭಟನಾಕಾರರನ್ನು ಎಳೆದಾಡಿ, ಹಲ್ಲೆ ನಡೆಸಿ ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ನಿಗಧಿಯಂತೆ ಪುರ್ವಾನುಮತಿ ಪಡೆದು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಡಾ.ಎಚ್.ವಿ ವಾಸು, ಸಂಜಯ್, ಮಲ್ಲಿಗೆ ಸ್ವರಾಜ್ ಇಂಡಿಯಾದ ಮನೋಹರ್ ಇಳವರ್ತಿ, ವಕೀಲರಾದ, ನರಸಿಂಹಮೂರ್ತಿ, ವಿನಯ್ ಶ್ರೀನಿವಾಸನ್ ಸೇರಿದಂತೆ ಹಲವು ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಎಚ್‌.ವಿ ವಾಸು “ಈ ದೇಶದ ಮೂಲ ಪರಿಕಲ್ಪನೆ ಎಲ್ಲಾ ಧರ್ಮೀಯರನ್ನು ಸಮಾನವಾಗಿ ಕಾಣುವಂತೆ ನಮ್ಮ ಸಂವಿಧಾನ ಹೇಳುತ್ತದೆ. ಧರ್ಮದ ಆಧಾರದ ಮೇಲೆ ದೇಶ ಒಡೆಯುವ ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿಯನ್ನು ನಾವು ವಿರೋಧಿಸುತ್ತೇವೆ. ಇದು ಮಹಮ್ಮದ್‌ ಅಲಿ ಜಿನ್ನಾ ಮತ್ತು ಸಾವರ್ಕರ್‌ರವರ ದೇಶ ಅಲ್ಲ ಇದು. ಮಹಾತ್ಮ ಗಾಂಧಿ, ಮೌಲನಾ ಅಬ್ದುಲ್‌, ಭಗತ್‌ ಸಿಂಗ್‌ ಸೇರಿದಂತೆ ಈ ದೇಶದ ಸ್ವಾತಂತ್ರ ಚಳವಳಿಯಲ್ಲಿ ಹಿಂದೂ ಮುಸ್ಲಿಂರು ಸೇರಿದಂತೆ ಎಲ್ಲ ಧರ್ಮಿಯರು ಭಾಗವಹಿಸಿದ್ದಾರೆ ಎಂಬುದನ್ನು ನಾವು ಮರೆಯಬಾರದು. 1927 ಡಿಸೆಂಬರ್ 19 ರಂದು ಪ್ರಾಣ ಸ್ನೇಹಿತರಾಗಿದ್ದ ಅಶ್ವಾಕುಲ್ಲಾ ಖಾನ್ ಮತ್ತು ರಾಮಪ್ರಸಾದ್ ಬಿಸ್ಮಿಲ್ ಭಾರತದ ಸ್ವಾತಂತ್ರಕ್ಕಾಗಿ ಹುತಾತ್ಮರಾದ ದಿನ ಇಂದು. ಹಾಗಾಗಿ ಅನ್ಯಾಯವೇ ಕಾನೂನಾಗುತ್ತಿರುವಾಗ ಪ್ರತಿರೋಧಿಸುವುದು ನಮ್ಮ ಕರ್ತವ್ಯ ಎಂದು ತಿಳಿದು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ” ಎಂದರು.

ಪೊಲೀಸರ ಈ ದೌರ್ಜನ್ಯವನ್ನು ಖಂಡಿಸುತ್ತೇವೆ. ಬಂಧಿಸಿದ ಮಾತ್ರಕ್ಕೆ ಪ್ರತಿಭಟನೆ ನಿಲ್ಲುವುದಿಲ್ಲ. ರಾಜ್ಯದ್ಯಂತ ಪ್ರತಿಭಟನೆ ಇನ್ನು ತೀವ್ರವಾಗಲಿದೆ. ನೋ ವೈಲೆನ್ಸ್‌, ನೋ ಸೈಲೆನ್ಸ್‌ ಎಂದು ಡಾ.ವಾಸು ಎಚ್‌.ವಿ ಹೇಳಿದ್ದಾರೆ.

ಪೊಲೀಸರು ಮಹಿಳೆಯರು, ಮಕ್ಕಳು ಎಂಬುದನ್ನು ನೋಡದೇ ಪ್ರತಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಪ್ರತಿಭಟನೆಗೆ ಅನುಮತಿ ಪಡೆದಿದ್ದರಲ್ಲ ಎಂಬ ಪ್ರಶ್ನೆಗೆ ನಾನು ಮೊದಲು ಪ್ರತಿಭಟನೆಗೆ ಅನುಮತಿ ಕೊಟ್ಟಿದ್ದು ನಿಜ. ಆದರೆ ನಿಷೇದಾಜ್ಞೆ ಘೋಷಣೆಯಾದ ಮೇಲೆ ಎಲ್ಲಾ ಅನುಮತಿಗಳನ್ನು ರದ್ದುಗೊಳಿಸಿದ್ದೇವೆ. ಪ್ರತಿಭಟನಾಕಾರರ ಮೇಲೆ ಕ್ರಮಜರುಗಿಸುವುದಾಗಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಉಮೇಶ್‌ ಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....