Homeಕರ್ನಾಟಕನಿಷೇದಾಜ್ಞೆ ಧಿಕ್ಕರಿಸಿ, CAA, NRC ವಿರುದ್ಧ ಶಾಂತಿಯುತ ಪ್ರತಿಭಟನೆ: ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳ ಬಂಧನ..

ನಿಷೇದಾಜ್ಞೆ ಧಿಕ್ಕರಿಸಿ, CAA, NRC ವಿರುದ್ಧ ಶಾಂತಿಯುತ ಪ್ರತಿಭಟನೆ: ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳ ಬಂಧನ..

ಇದು ಮಹಮ್ಮದ್‌ ಅಲಿ ಜಿನ್ನಾ ಮತ್ತು ಸಾವರ್ಕರ್‌ರವರ ದೇಶ ಅಲ್ಲ. ಬದಲಿಗೆ ಮಹಾತ್ಮ ಗಾಂಧಿ, ಮೌಲನಾ ಅಬ್ದುಲ್‌, ಭಗತ್‌ ಸಿಂಗ್‌ ಸೇರಿದಂತೆ ಈ ದೇಶದ ಸ್ವಾತಂತ್ರ ಚಳವಳಿಯಲ್ಲಿ ಹಿಂದೂ ಮುಸ್ಲಿಂರು ಸೇರಿದಂತೆ ಎಲ್ಲ ಧರ್ಮಿಯರು ಭಾಗವಹಿಸಿದ್ದ ದೇಶ.

- Advertisement -
- Advertisement -

ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನ ಟೌನ್‌ ಹಾಲ್‌ ಎದುರು ಶಾಂತಿಯುತ ಪ್ರತಿಭಟನೆ ನಡೆದಿದೆ. ಈ ವೇಳೆ ನಿಷೇದಾಜ್ಞೆ ಉಲ್ಲಂಘಿಸಿದ ಕಾರಣಕ್ಕಾಗಿ ಪೊಲೀಸರು ಪ್ರತಿಭಟನಾಕಾರರನ್ನು ಎಳೆದಾಡಿ, ಹಲ್ಲೆ ನಡೆಸಿ ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ನಿಗಧಿಯಂತೆ ಪುರ್ವಾನುಮತಿ ಪಡೆದು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಡಾ.ಎಚ್.ವಿ ವಾಸು, ಸಂಜಯ್, ಮಲ್ಲಿಗೆ ಸ್ವರಾಜ್ ಇಂಡಿಯಾದ ಮನೋಹರ್ ಇಳವರ್ತಿ, ವಕೀಲರಾದ, ನರಸಿಂಹಮೂರ್ತಿ, ವಿನಯ್ ಶ್ರೀನಿವಾಸನ್ ಸೇರಿದಂತೆ ಹಲವು ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಎಚ್‌.ವಿ ವಾಸು “ಈ ದೇಶದ ಮೂಲ ಪರಿಕಲ್ಪನೆ ಎಲ್ಲಾ ಧರ್ಮೀಯರನ್ನು ಸಮಾನವಾಗಿ ಕಾಣುವಂತೆ ನಮ್ಮ ಸಂವಿಧಾನ ಹೇಳುತ್ತದೆ. ಧರ್ಮದ ಆಧಾರದ ಮೇಲೆ ದೇಶ ಒಡೆಯುವ ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿಯನ್ನು ನಾವು ವಿರೋಧಿಸುತ್ತೇವೆ. ಇದು ಮಹಮ್ಮದ್‌ ಅಲಿ ಜಿನ್ನಾ ಮತ್ತು ಸಾವರ್ಕರ್‌ರವರ ದೇಶ ಅಲ್ಲ ಇದು. ಮಹಾತ್ಮ ಗಾಂಧಿ, ಮೌಲನಾ ಅಬ್ದುಲ್‌, ಭಗತ್‌ ಸಿಂಗ್‌ ಸೇರಿದಂತೆ ಈ ದೇಶದ ಸ್ವಾತಂತ್ರ ಚಳವಳಿಯಲ್ಲಿ ಹಿಂದೂ ಮುಸ್ಲಿಂರು ಸೇರಿದಂತೆ ಎಲ್ಲ ಧರ್ಮಿಯರು ಭಾಗವಹಿಸಿದ್ದಾರೆ ಎಂಬುದನ್ನು ನಾವು ಮರೆಯಬಾರದು. 1927 ಡಿಸೆಂಬರ್ 19 ರಂದು ಪ್ರಾಣ ಸ್ನೇಹಿತರಾಗಿದ್ದ ಅಶ್ವಾಕುಲ್ಲಾ ಖಾನ್ ಮತ್ತು ರಾಮಪ್ರಸಾದ್ ಬಿಸ್ಮಿಲ್ ಭಾರತದ ಸ್ವಾತಂತ್ರಕ್ಕಾಗಿ ಹುತಾತ್ಮರಾದ ದಿನ ಇಂದು. ಹಾಗಾಗಿ ಅನ್ಯಾಯವೇ ಕಾನೂನಾಗುತ್ತಿರುವಾಗ ಪ್ರತಿರೋಧಿಸುವುದು ನಮ್ಮ ಕರ್ತವ್ಯ ಎಂದು ತಿಳಿದು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ” ಎಂದರು.

ಪೊಲೀಸರ ಈ ದೌರ್ಜನ್ಯವನ್ನು ಖಂಡಿಸುತ್ತೇವೆ. ಬಂಧಿಸಿದ ಮಾತ್ರಕ್ಕೆ ಪ್ರತಿಭಟನೆ ನಿಲ್ಲುವುದಿಲ್ಲ. ರಾಜ್ಯದ್ಯಂತ ಪ್ರತಿಭಟನೆ ಇನ್ನು ತೀವ್ರವಾಗಲಿದೆ. ನೋ ವೈಲೆನ್ಸ್‌, ನೋ ಸೈಲೆನ್ಸ್‌ ಎಂದು ಡಾ.ವಾಸು ಎಚ್‌.ವಿ ಹೇಳಿದ್ದಾರೆ.

ಪೊಲೀಸರು ಮಹಿಳೆಯರು, ಮಕ್ಕಳು ಎಂಬುದನ್ನು ನೋಡದೇ ಪ್ರತಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಪ್ರತಿಭಟನೆಗೆ ಅನುಮತಿ ಪಡೆದಿದ್ದರಲ್ಲ ಎಂಬ ಪ್ರಶ್ನೆಗೆ ನಾನು ಮೊದಲು ಪ್ರತಿಭಟನೆಗೆ ಅನುಮತಿ ಕೊಟ್ಟಿದ್ದು ನಿಜ. ಆದರೆ ನಿಷೇದಾಜ್ಞೆ ಘೋಷಣೆಯಾದ ಮೇಲೆ ಎಲ್ಲಾ ಅನುಮತಿಗಳನ್ನು ರದ್ದುಗೊಳಿಸಿದ್ದೇವೆ. ಪ್ರತಿಭಟನಾಕಾರರ ಮೇಲೆ ಕ್ರಮಜರುಗಿಸುವುದಾಗಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಉಮೇಶ್‌ ಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....