Homeಕರ್ನಾಟಕನಿಷೇದಾಜ್ಞೆ ಧಿಕ್ಕರಿಸಿ, CAA, NRC ವಿರುದ್ಧ ಶಾಂತಿಯುತ ಪ್ರತಿಭಟನೆ: ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳ ಬಂಧನ..

ನಿಷೇದಾಜ್ಞೆ ಧಿಕ್ಕರಿಸಿ, CAA, NRC ವಿರುದ್ಧ ಶಾಂತಿಯುತ ಪ್ರತಿಭಟನೆ: ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳ ಬಂಧನ..

ಇದು ಮಹಮ್ಮದ್‌ ಅಲಿ ಜಿನ್ನಾ ಮತ್ತು ಸಾವರ್ಕರ್‌ರವರ ದೇಶ ಅಲ್ಲ. ಬದಲಿಗೆ ಮಹಾತ್ಮ ಗಾಂಧಿ, ಮೌಲನಾ ಅಬ್ದುಲ್‌, ಭಗತ್‌ ಸಿಂಗ್‌ ಸೇರಿದಂತೆ ಈ ದೇಶದ ಸ್ವಾತಂತ್ರ ಚಳವಳಿಯಲ್ಲಿ ಹಿಂದೂ ಮುಸ್ಲಿಂರು ಸೇರಿದಂತೆ ಎಲ್ಲ ಧರ್ಮಿಯರು ಭಾಗವಹಿಸಿದ್ದ ದೇಶ.

- Advertisement -
- Advertisement -

ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನ ಟೌನ್‌ ಹಾಲ್‌ ಎದುರು ಶಾಂತಿಯುತ ಪ್ರತಿಭಟನೆ ನಡೆದಿದೆ. ಈ ವೇಳೆ ನಿಷೇದಾಜ್ಞೆ ಉಲ್ಲಂಘಿಸಿದ ಕಾರಣಕ್ಕಾಗಿ ಪೊಲೀಸರು ಪ್ರತಿಭಟನಾಕಾರರನ್ನು ಎಳೆದಾಡಿ, ಹಲ್ಲೆ ನಡೆಸಿ ಡಾ.ವಾಸು ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ನಿಗಧಿಯಂತೆ ಪುರ್ವಾನುಮತಿ ಪಡೆದು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಡಾ.ಎಚ್.ವಿ ವಾಸು, ಸಂಜಯ್, ಮಲ್ಲಿಗೆ ಸ್ವರಾಜ್ ಇಂಡಿಯಾದ ಮನೋಹರ್ ಇಳವರ್ತಿ, ವಕೀಲರಾದ, ನರಸಿಂಹಮೂರ್ತಿ, ವಿನಯ್ ಶ್ರೀನಿವಾಸನ್ ಸೇರಿದಂತೆ ಹಲವು ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಎಚ್‌.ವಿ ವಾಸು “ಈ ದೇಶದ ಮೂಲ ಪರಿಕಲ್ಪನೆ ಎಲ್ಲಾ ಧರ್ಮೀಯರನ್ನು ಸಮಾನವಾಗಿ ಕಾಣುವಂತೆ ನಮ್ಮ ಸಂವಿಧಾನ ಹೇಳುತ್ತದೆ. ಧರ್ಮದ ಆಧಾರದ ಮೇಲೆ ದೇಶ ಒಡೆಯುವ ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿಯನ್ನು ನಾವು ವಿರೋಧಿಸುತ್ತೇವೆ. ಇದು ಮಹಮ್ಮದ್‌ ಅಲಿ ಜಿನ್ನಾ ಮತ್ತು ಸಾವರ್ಕರ್‌ರವರ ದೇಶ ಅಲ್ಲ ಇದು. ಮಹಾತ್ಮ ಗಾಂಧಿ, ಮೌಲನಾ ಅಬ್ದುಲ್‌, ಭಗತ್‌ ಸಿಂಗ್‌ ಸೇರಿದಂತೆ ಈ ದೇಶದ ಸ್ವಾತಂತ್ರ ಚಳವಳಿಯಲ್ಲಿ ಹಿಂದೂ ಮುಸ್ಲಿಂರು ಸೇರಿದಂತೆ ಎಲ್ಲ ಧರ್ಮಿಯರು ಭಾಗವಹಿಸಿದ್ದಾರೆ ಎಂಬುದನ್ನು ನಾವು ಮರೆಯಬಾರದು. 1927 ಡಿಸೆಂಬರ್ 19 ರಂದು ಪ್ರಾಣ ಸ್ನೇಹಿತರಾಗಿದ್ದ ಅಶ್ವಾಕುಲ್ಲಾ ಖಾನ್ ಮತ್ತು ರಾಮಪ್ರಸಾದ್ ಬಿಸ್ಮಿಲ್ ಭಾರತದ ಸ್ವಾತಂತ್ರಕ್ಕಾಗಿ ಹುತಾತ್ಮರಾದ ದಿನ ಇಂದು. ಹಾಗಾಗಿ ಅನ್ಯಾಯವೇ ಕಾನೂನಾಗುತ್ತಿರುವಾಗ ಪ್ರತಿರೋಧಿಸುವುದು ನಮ್ಮ ಕರ್ತವ್ಯ ಎಂದು ತಿಳಿದು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ” ಎಂದರು.

ಪೊಲೀಸರ ಈ ದೌರ್ಜನ್ಯವನ್ನು ಖಂಡಿಸುತ್ತೇವೆ. ಬಂಧಿಸಿದ ಮಾತ್ರಕ್ಕೆ ಪ್ರತಿಭಟನೆ ನಿಲ್ಲುವುದಿಲ್ಲ. ರಾಜ್ಯದ್ಯಂತ ಪ್ರತಿಭಟನೆ ಇನ್ನು ತೀವ್ರವಾಗಲಿದೆ. ನೋ ವೈಲೆನ್ಸ್‌, ನೋ ಸೈಲೆನ್ಸ್‌ ಎಂದು ಡಾ.ವಾಸು ಎಚ್‌.ವಿ ಹೇಳಿದ್ದಾರೆ.

ಪೊಲೀಸರು ಮಹಿಳೆಯರು, ಮಕ್ಕಳು ಎಂಬುದನ್ನು ನೋಡದೇ ಪ್ರತಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಪ್ರತಿಭಟನೆಗೆ ಅನುಮತಿ ಪಡೆದಿದ್ದರಲ್ಲ ಎಂಬ ಪ್ರಶ್ನೆಗೆ ನಾನು ಮೊದಲು ಪ್ರತಿಭಟನೆಗೆ ಅನುಮತಿ ಕೊಟ್ಟಿದ್ದು ನಿಜ. ಆದರೆ ನಿಷೇದಾಜ್ಞೆ ಘೋಷಣೆಯಾದ ಮೇಲೆ ಎಲ್ಲಾ ಅನುಮತಿಗಳನ್ನು ರದ್ದುಗೊಳಿಸಿದ್ದೇವೆ. ಪ್ರತಿಭಟನಾಕಾರರ ಮೇಲೆ ಕ್ರಮಜರುಗಿಸುವುದಾಗಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಉಮೇಶ್‌ ಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...