Homeಕರ್ನಾಟಕಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

ಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರ ನಿರಂತರವಾಗಿ ಇಂಧನ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ, ಕೂಡಲೇ ಹೆಚ್ಚಳವಾಗಿರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರವನ್ನು ವಾಪಸ್ ಪಡೆಯುಬೇಕೆಂದು ಆಗ್ರಹಿಸಿ ಇಂದು ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು, ಮುಖಂಡರು ತುಮಕೂರು ನಗರದ ಬಿ.ಎಸ್.ಎನ್.ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಅಶೋಕ ರಸ್ತೆಯ ಬಿ.ಎಸ್.ಎನ್.ಎಲ್. ಕಚೇರಿ ಎದುರು ಸಮಾವೇಶಗೊಂಡಿದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ದ್ವಿಚಕ್ರ ವಾಹನಕ್ಕೆ ಬಿಳಿ ಬಟ್ಟೆ ಹೊದಿಸಿ, ಅಣುಕ ಶವಯಾತ್ರೆ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್, ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾದಿಂದಾಗಿ ಜನ ಸಾಮಾನ್ಯರ ಕಷ್ಟ ಹೇಳತೀರದಾಗಿದೆ. ಜನರ ಕಷ್ಟವನ್ನು ತಗ್ಗಿಸುವ ಬದಲು ಸರಕಾರ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ದೂರಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂಧನಗಳ ಮೇಲೆ ಶೇ30ರಷ್ಟು ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರು ಬದುಕಿಗೆ ಕೊಳ್ಳಿ ಇಡಲು ಹೊರಟಿವೆ. ಇಂಧನ ಬೆಲೆ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಳದಿಂದಾಗಿ ಸಾರಿಗೆ ವೆಚ್ಚ ಹೆಚ್ಚಲಿದೆ. ಇದರ ಪರಿಣಾಮ ದಿನನಿತ್ಯದ ದಿನಸಿ ಸೇರಿದಂತೆ ಗೃಹೋಪಯೋಗಿ ವಸ್ತುಗಳ ಬೆಲೆಗಳು ಹೆಚ್ಚಳವಾಗುವ ಮೂಲಕ ಜನರ ಬದುಕು ಅದೋಗತಿಗೆ ಇಳಿಯಲಿದೆ. ಆದ್ದರಿಂದ ಸರಕಾರ ಕೂಡಲೇ ಇಂಧನ ಬೆಲೆಗಳನ್ನು ಇಳಿಸಬೇಕು ಎಂದು ಆಗ್ರಹಿಸಿದರು.

ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮಾತನಾಡಿ, ಇಂಧನ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು ತೊಂದರೆಗೀಡಾದರೂ, ಯುಪಿಎ ಸರಕಾರದ ವಿರುದ್ದ ಗುಡುಗಿದ್ದ ಬಿಜೆಪಿ ಪಕ್ಷದ ಯಾವ ಮುಖಂಡರು, ಮಹಿಳಾ ಮಣಿಗಳು ಬಾಯಿ ಬೀಡುತ್ತಿಲ್ಲ. ಅಲ್ಲದೆ ರೈತರ ಹೆಸರಿನಲ್ಲಿ ಸೆಸ್ ಹಾಕಿ ಹಾವನ್ನು ಹೊಡೆದು ಹದ್ದಿಗೆ ಹಾಕುವಂತಹ ಕೆಲಸವನ್ನು ಕೇಂದ್ರ ಸರಕಾರ ಮಾಡಲು ಹೊರಟಿದೆ. ಇದರ ವಿರುದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾ ಮುಂದಿನ ದಿನಗಳಲ್ಲಿ ಉಗ್ರಹೋರಾಟ ನಡೆಸಲಿದೆ ಎಂದರು.

ದಸಂಸ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ “ಹಳ್ಳಿಯ ಕಡೆ ಒಂದು ಗಾದೆ ಇದೆ. ಆಡೋ ಹುಡುಗನ ಕೈಗೆ ಮನೆ ಅಧಿಕಾರ ಕೊಟ್ಟರೆ, ಒಡೆ ಬಂದ ಹೊಲ ಕೊಯ್ದು ಒಟ್ಟಿದ” ಅನ್ನುವ ಹಾಗೇ ಸಂಸಾರದ ಗಂಧ ಗಾಳಿಯೂ ಗೊತ್ತಿಲ್ಲದ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ರಂತಹವರ ಕೈಗೆ ಅಧಿಕಾರ ನೀಡಿದ ಪರಿಣಾಮ ಜನ ಸಮಾನ್ಯರ ಕಷ್ಟಗಳೇ ಅರ್ಥವಾಗುತ್ತಿಲ್ಲ. ತಾವು ಮಾಡಿದ್ದೇ ಕಾನೂನು ಎಂಬಂತೆ ವರ್ತಿಸುತ್ತಿದ್ದಾರೆ. ಧರ್ಮ, ದೇವರ ಹೆಸರಿನಲ್ಲಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆದು ತಮ್ಮ ಹಿಡನ್ ಅಜೆಂಡಾಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಜನರ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿದ್ದ ಸಾರ್ವಜನಿಕ ಸಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ, ನೌಕರರನ್ನು ಉಳ್ಳುವರ ಗುಲಾಮರನ್ನಾಗಿಸುತ್ತಿದ್ದಾರೆ. ಜನಸಾಮಾನ್ಯರು ಇಂತಹವರಿಗೆ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಜೀಜ್ ಜಾಗಿರ್ದಾರ್, ಪರಮೇಶ್ವರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...