Homeಕರ್ನಾಟಕಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

ಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರ ನಿರಂತರವಾಗಿ ಇಂಧನ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ, ಕೂಡಲೇ ಹೆಚ್ಚಳವಾಗಿರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರವನ್ನು ವಾಪಸ್ ಪಡೆಯುಬೇಕೆಂದು ಆಗ್ರಹಿಸಿ ಇಂದು ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು, ಮುಖಂಡರು ತುಮಕೂರು ನಗರದ ಬಿ.ಎಸ್.ಎನ್.ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಅಶೋಕ ರಸ್ತೆಯ ಬಿ.ಎಸ್.ಎನ್.ಎಲ್. ಕಚೇರಿ ಎದುರು ಸಮಾವೇಶಗೊಂಡಿದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ದ್ವಿಚಕ್ರ ವಾಹನಕ್ಕೆ ಬಿಳಿ ಬಟ್ಟೆ ಹೊದಿಸಿ, ಅಣುಕ ಶವಯಾತ್ರೆ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್, ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾದಿಂದಾಗಿ ಜನ ಸಾಮಾನ್ಯರ ಕಷ್ಟ ಹೇಳತೀರದಾಗಿದೆ. ಜನರ ಕಷ್ಟವನ್ನು ತಗ್ಗಿಸುವ ಬದಲು ಸರಕಾರ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ದೂರಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂಧನಗಳ ಮೇಲೆ ಶೇ30ರಷ್ಟು ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರು ಬದುಕಿಗೆ ಕೊಳ್ಳಿ ಇಡಲು ಹೊರಟಿವೆ. ಇಂಧನ ಬೆಲೆ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಳದಿಂದಾಗಿ ಸಾರಿಗೆ ವೆಚ್ಚ ಹೆಚ್ಚಲಿದೆ. ಇದರ ಪರಿಣಾಮ ದಿನನಿತ್ಯದ ದಿನಸಿ ಸೇರಿದಂತೆ ಗೃಹೋಪಯೋಗಿ ವಸ್ತುಗಳ ಬೆಲೆಗಳು ಹೆಚ್ಚಳವಾಗುವ ಮೂಲಕ ಜನರ ಬದುಕು ಅದೋಗತಿಗೆ ಇಳಿಯಲಿದೆ. ಆದ್ದರಿಂದ ಸರಕಾರ ಕೂಡಲೇ ಇಂಧನ ಬೆಲೆಗಳನ್ನು ಇಳಿಸಬೇಕು ಎಂದು ಆಗ್ರಹಿಸಿದರು.

ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮಾತನಾಡಿ, ಇಂಧನ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು ತೊಂದರೆಗೀಡಾದರೂ, ಯುಪಿಎ ಸರಕಾರದ ವಿರುದ್ದ ಗುಡುಗಿದ್ದ ಬಿಜೆಪಿ ಪಕ್ಷದ ಯಾವ ಮುಖಂಡರು, ಮಹಿಳಾ ಮಣಿಗಳು ಬಾಯಿ ಬೀಡುತ್ತಿಲ್ಲ. ಅಲ್ಲದೆ ರೈತರ ಹೆಸರಿನಲ್ಲಿ ಸೆಸ್ ಹಾಕಿ ಹಾವನ್ನು ಹೊಡೆದು ಹದ್ದಿಗೆ ಹಾಕುವಂತಹ ಕೆಲಸವನ್ನು ಕೇಂದ್ರ ಸರಕಾರ ಮಾಡಲು ಹೊರಟಿದೆ. ಇದರ ವಿರುದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾ ಮುಂದಿನ ದಿನಗಳಲ್ಲಿ ಉಗ್ರಹೋರಾಟ ನಡೆಸಲಿದೆ ಎಂದರು.

ದಸಂಸ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ “ಹಳ್ಳಿಯ ಕಡೆ ಒಂದು ಗಾದೆ ಇದೆ. ಆಡೋ ಹುಡುಗನ ಕೈಗೆ ಮನೆ ಅಧಿಕಾರ ಕೊಟ್ಟರೆ, ಒಡೆ ಬಂದ ಹೊಲ ಕೊಯ್ದು ಒಟ್ಟಿದ” ಅನ್ನುವ ಹಾಗೇ ಸಂಸಾರದ ಗಂಧ ಗಾಳಿಯೂ ಗೊತ್ತಿಲ್ಲದ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ರಂತಹವರ ಕೈಗೆ ಅಧಿಕಾರ ನೀಡಿದ ಪರಿಣಾಮ ಜನ ಸಮಾನ್ಯರ ಕಷ್ಟಗಳೇ ಅರ್ಥವಾಗುತ್ತಿಲ್ಲ. ತಾವು ಮಾಡಿದ್ದೇ ಕಾನೂನು ಎಂಬಂತೆ ವರ್ತಿಸುತ್ತಿದ್ದಾರೆ. ಧರ್ಮ, ದೇವರ ಹೆಸರಿನಲ್ಲಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆದು ತಮ್ಮ ಹಿಡನ್ ಅಜೆಂಡಾಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಜನರ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿದ್ದ ಸಾರ್ವಜನಿಕ ಸಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ, ನೌಕರರನ್ನು ಉಳ್ಳುವರ ಗುಲಾಮರನ್ನಾಗಿಸುತ್ತಿದ್ದಾರೆ. ಜನಸಾಮಾನ್ಯರು ಇಂತಹವರಿಗೆ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಜೀಜ್ ಜಾಗಿರ್ದಾರ್, ಪರಮೇಶ್ವರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...