Homeಕರ್ನಾಟಕಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

ಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರ ನಿರಂತರವಾಗಿ ಇಂಧನ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ, ಕೂಡಲೇ ಹೆಚ್ಚಳವಾಗಿರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರವನ್ನು ವಾಪಸ್ ಪಡೆಯುಬೇಕೆಂದು ಆಗ್ರಹಿಸಿ ಇಂದು ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು, ಮುಖಂಡರು ತುಮಕೂರು ನಗರದ ಬಿ.ಎಸ್.ಎನ್.ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಅಶೋಕ ರಸ್ತೆಯ ಬಿ.ಎಸ್.ಎನ್.ಎಲ್. ಕಚೇರಿ ಎದುರು ಸಮಾವೇಶಗೊಂಡಿದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ದ್ವಿಚಕ್ರ ವಾಹನಕ್ಕೆ ಬಿಳಿ ಬಟ್ಟೆ ಹೊದಿಸಿ, ಅಣುಕ ಶವಯಾತ್ರೆ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್, ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾದಿಂದಾಗಿ ಜನ ಸಾಮಾನ್ಯರ ಕಷ್ಟ ಹೇಳತೀರದಾಗಿದೆ. ಜನರ ಕಷ್ಟವನ್ನು ತಗ್ಗಿಸುವ ಬದಲು ಸರಕಾರ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ದೂರಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂಧನಗಳ ಮೇಲೆ ಶೇ30ರಷ್ಟು ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರು ಬದುಕಿಗೆ ಕೊಳ್ಳಿ ಇಡಲು ಹೊರಟಿವೆ. ಇಂಧನ ಬೆಲೆ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಳದಿಂದಾಗಿ ಸಾರಿಗೆ ವೆಚ್ಚ ಹೆಚ್ಚಲಿದೆ. ಇದರ ಪರಿಣಾಮ ದಿನನಿತ್ಯದ ದಿನಸಿ ಸೇರಿದಂತೆ ಗೃಹೋಪಯೋಗಿ ವಸ್ತುಗಳ ಬೆಲೆಗಳು ಹೆಚ್ಚಳವಾಗುವ ಮೂಲಕ ಜನರ ಬದುಕು ಅದೋಗತಿಗೆ ಇಳಿಯಲಿದೆ. ಆದ್ದರಿಂದ ಸರಕಾರ ಕೂಡಲೇ ಇಂಧನ ಬೆಲೆಗಳನ್ನು ಇಳಿಸಬೇಕು ಎಂದು ಆಗ್ರಹಿಸಿದರು.

ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮಾತನಾಡಿ, ಇಂಧನ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು ತೊಂದರೆಗೀಡಾದರೂ, ಯುಪಿಎ ಸರಕಾರದ ವಿರುದ್ದ ಗುಡುಗಿದ್ದ ಬಿಜೆಪಿ ಪಕ್ಷದ ಯಾವ ಮುಖಂಡರು, ಮಹಿಳಾ ಮಣಿಗಳು ಬಾಯಿ ಬೀಡುತ್ತಿಲ್ಲ. ಅಲ್ಲದೆ ರೈತರ ಹೆಸರಿನಲ್ಲಿ ಸೆಸ್ ಹಾಕಿ ಹಾವನ್ನು ಹೊಡೆದು ಹದ್ದಿಗೆ ಹಾಕುವಂತಹ ಕೆಲಸವನ್ನು ಕೇಂದ್ರ ಸರಕಾರ ಮಾಡಲು ಹೊರಟಿದೆ. ಇದರ ವಿರುದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾ ಮುಂದಿನ ದಿನಗಳಲ್ಲಿ ಉಗ್ರಹೋರಾಟ ನಡೆಸಲಿದೆ ಎಂದರು.

ದಸಂಸ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ “ಹಳ್ಳಿಯ ಕಡೆ ಒಂದು ಗಾದೆ ಇದೆ. ಆಡೋ ಹುಡುಗನ ಕೈಗೆ ಮನೆ ಅಧಿಕಾರ ಕೊಟ್ಟರೆ, ಒಡೆ ಬಂದ ಹೊಲ ಕೊಯ್ದು ಒಟ್ಟಿದ” ಅನ್ನುವ ಹಾಗೇ ಸಂಸಾರದ ಗಂಧ ಗಾಳಿಯೂ ಗೊತ್ತಿಲ್ಲದ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ರಂತಹವರ ಕೈಗೆ ಅಧಿಕಾರ ನೀಡಿದ ಪರಿಣಾಮ ಜನ ಸಮಾನ್ಯರ ಕಷ್ಟಗಳೇ ಅರ್ಥವಾಗುತ್ತಿಲ್ಲ. ತಾವು ಮಾಡಿದ್ದೇ ಕಾನೂನು ಎಂಬಂತೆ ವರ್ತಿಸುತ್ತಿದ್ದಾರೆ. ಧರ್ಮ, ದೇವರ ಹೆಸರಿನಲ್ಲಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆದು ತಮ್ಮ ಹಿಡನ್ ಅಜೆಂಡಾಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಜನರ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿದ್ದ ಸಾರ್ವಜನಿಕ ಸಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ, ನೌಕರರನ್ನು ಉಳ್ಳುವರ ಗುಲಾಮರನ್ನಾಗಿಸುತ್ತಿದ್ದಾರೆ. ಜನಸಾಮಾನ್ಯರು ಇಂತಹವರಿಗೆ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಜೀಜ್ ಜಾಗಿರ್ದಾರ್, ಪರಮೇಶ್ವರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...