Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ..

- Advertisement -
- Advertisement -

ಹಾಸ್ಟೆಲ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳ ವಿರೋಧಿಸಿ ಹೋರಾಡುತ್ತಿದ್ದ JNU ವಿದ್ಯಾರ್ಥಿಗಳ ಮೇಲಿನ ಪೊಲೀಸ್‌ ದಾಳಿ ಖಂಡಿಸಿ ಕರ್ನಾಟಕದ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ SFI, AISF, AIDSO ಮತ್ತು KVS ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಲಿದ್ದು ಜೆಎನ್‌ಯು ವಿದ್ಯಾಥಿ೯ಗಳ ಪರ ದನಿ ಎತ್ತಲಿದ್ದಾರೆ.

ಹಾಸ್ಟಲ್ ಶುಲ್ಕವೂ ಸೇರಿದಂತೆ ವಿದ್ಯಾರ್ಥಿಗಳ ಮೇಲೆ ಶುಲ್ಕದ ಹೊರೆಯನ್ನು ಹೇರುವ ಮೂಲಕ ಬಹುಸಂಖ್ಯಾತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ಹೊರಗಿಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ವಿರೋಧಿಸಿ, ಶುಲ್ಕ ಹೆಚ್ಚಳದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ಕ್ರೂರ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಹೇಳಿವೆ.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ತರಲೊರಟಿರುವ ಹೊಸ ಶಿಕ್ಷಣ ನೀತಿ 2019ನ್ನು ಸಹ ಕರ್ನಾಟಕದ ವಿದ್ಯಾರ್ಥಿ ಒಕ್ಕೂಟಗಳು ವಿರೋಧಿಸಿವೆ. ಸಮರ್ಪಕ ಚರ್ಚೆಯ ನಂತರವೇ ಅಂಗೀಕರಿಸಬೇಕೆಂದು ಒತ್ತಾಯಿಸಿವೆ.

ಜೆಎನ್‌ಯು ಮೇಲಿನ ದಾಳಿ ಕ್ರೂರ ಮನಸ್ಥಿತಿಯದ್ದಾಗಿದೆ. ಮೋದಿ ಮತ್ತು ಆರ್‌ಎಸ್‌ಎಸ್‌ ಎಲ್ಲಾ ಕಡೆ ದೇಶವನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ. ಆದರೆ ಫ್ಯಾಸಿಸಂನ ಮತಾಂಧತೆಗೆ ಜೆಎನ್‌ಯು ತಡೆಯಾಗಿದೆ. ಪ್ರಜಾಪ್ರಭುತ್ವವನ್ನು, ಕ್ಯಾಂಪಸ್‌ ಡೆಮಾಕ್ರಸಿಯನ್ನು ಉಳಿಸುತ್ತಿರುವುದು ಜೆಎನ್‌ಯು ಆಗಿದೆ. ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ಜೆಎನ್‌ಯುನಲ್ಲಿ ಶುಲ್ಕ ಹೆಚ್ಚಳದ ವಿರುದ್ಧ ನ್ಯಾಯಯುತ ಹೋರಾಟವನ್ನು ಹತ್ತಿಕ್ಕಲಾಗಿದೆ. ಇದು ಯಾವ ನ್ಯಾಯ? ಎಂದು ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

ಕರ್ನಾಟಕದ ಹಂಪಿ ವಿಶ್ವವಿದ್ಯಾಲಯ ಎರಡು ವರ್ಷಗಳಿಂದ ದಲಿತ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ಸಿಕ್ಕಿಲ್ಲ ಅದಕ್ಕಾಗಿಯೂ ಹೋರಾಟ ನಡೆಯುತ್ತಿದೆ. ಉಚಿತ, ಗುಣಮಟ್ಟದ ಕಡ್ಡಾಯ ಶಿಕ್ಷಣಕ್ಕಾಗಿ ದೇಶದ ಎಲ್ಲಾ ಕಡೆ ಹೋರಾಟಗಳಾಗಬೇಕಿದ್ದು ಅದಕ್ಕಾಗಿ ಬೆಂಗಳೂರಿನಲ್ಲಿ ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ, ಪ್ರಜ್ಞಾವಂತರೆಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡಿದ್ದಾರೆ.

ಕೇಂದ್ರದ ಅನೈತಿಕ ನಡೆಗಳಿಗೆ ಜೆಎನ್‌ಯು ಮಗ್ಗುಲು ಮುಳ್ಳಾಗಿ ಕಾಡುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಜೆಎನ್‌ಯುವನ್ನೇ ಇಲ್ಲವಾಗಿಸಲು ಹೊರಟಿದೆ. ದಲಿತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬಾರದೆಂಬುದು ಕೇಂದ್ರದ ನಿಲುವಾಗಿದೆ. ಅದಕ್ಕಾಗಿ ಶಾಂತಿಯುತವಾಗಿ ಹೋರಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್ ಹಾಕಿ ಹಿಂಸಿಸಲಾಗುತ್ತಿದೆ. ಇದನ್ನು ಕೂಡಲೇ ವಾಪಸ್  ಪಡೆಯಬೇಕು ಮತ್ತು ಶುಲ್ಕ ಹೆಚ್ಚಳವನ್ನು ಹಿಂತೆಗೆದುಕೊಳ್ಳಬೇಕು. ಅವರೆತ್ತಿರುವ ಪ್ರಶ್ನೆ ಉಚಿತ ಶಿಕ್ಷಣದ ಕುರಿತು ಚರ್ಚೆ ನಡೆಯಬೇಕಿದೆ. ಅದು ಕೇವಲ ಎಡಪಂಥಿಯರ ಹೋರಾಟ ಮಾತ್ರ ಎಂದು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ದೇಶದ ಎಲ್ಲಾ ಬಡವರ ಪರವಾಗಿನ ಹೋರಾಟ ಅದಾಗಿದ್ದು ಅದನ್ನು ನಾವು ಬೆಂಬಲಿಸಬೇಕಾಗಿದೆ ಎಂದು SFI ನ ಅಧ್ಯಕ್ಷರಾದ ಅಂಬರೀಶ್‌ ವಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...