Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ..

- Advertisement -
- Advertisement -

ಹಾಸ್ಟೆಲ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳ ವಿರೋಧಿಸಿ ಹೋರಾಡುತ್ತಿದ್ದ JNU ವಿದ್ಯಾರ್ಥಿಗಳ ಮೇಲಿನ ಪೊಲೀಸ್‌ ದಾಳಿ ಖಂಡಿಸಿ ಕರ್ನಾಟಕದ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ SFI, AISF, AIDSO ಮತ್ತು KVS ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಲಿದ್ದು ಜೆಎನ್‌ಯು ವಿದ್ಯಾಥಿ೯ಗಳ ಪರ ದನಿ ಎತ್ತಲಿದ್ದಾರೆ.

ಹಾಸ್ಟಲ್ ಶುಲ್ಕವೂ ಸೇರಿದಂತೆ ವಿದ್ಯಾರ್ಥಿಗಳ ಮೇಲೆ ಶುಲ್ಕದ ಹೊರೆಯನ್ನು ಹೇರುವ ಮೂಲಕ ಬಹುಸಂಖ್ಯಾತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ಹೊರಗಿಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ವಿರೋಧಿಸಿ, ಶುಲ್ಕ ಹೆಚ್ಚಳದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ಕ್ರೂರ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಹೇಳಿವೆ.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ತರಲೊರಟಿರುವ ಹೊಸ ಶಿಕ್ಷಣ ನೀತಿ 2019ನ್ನು ಸಹ ಕರ್ನಾಟಕದ ವಿದ್ಯಾರ್ಥಿ ಒಕ್ಕೂಟಗಳು ವಿರೋಧಿಸಿವೆ. ಸಮರ್ಪಕ ಚರ್ಚೆಯ ನಂತರವೇ ಅಂಗೀಕರಿಸಬೇಕೆಂದು ಒತ್ತಾಯಿಸಿವೆ.

ಜೆಎನ್‌ಯು ಮೇಲಿನ ದಾಳಿ ಕ್ರೂರ ಮನಸ್ಥಿತಿಯದ್ದಾಗಿದೆ. ಮೋದಿ ಮತ್ತು ಆರ್‌ಎಸ್‌ಎಸ್‌ ಎಲ್ಲಾ ಕಡೆ ದೇಶವನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ. ಆದರೆ ಫ್ಯಾಸಿಸಂನ ಮತಾಂಧತೆಗೆ ಜೆಎನ್‌ಯು ತಡೆಯಾಗಿದೆ. ಪ್ರಜಾಪ್ರಭುತ್ವವನ್ನು, ಕ್ಯಾಂಪಸ್‌ ಡೆಮಾಕ್ರಸಿಯನ್ನು ಉಳಿಸುತ್ತಿರುವುದು ಜೆಎನ್‌ಯು ಆಗಿದೆ. ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ಜೆಎನ್‌ಯುನಲ್ಲಿ ಶುಲ್ಕ ಹೆಚ್ಚಳದ ವಿರುದ್ಧ ನ್ಯಾಯಯುತ ಹೋರಾಟವನ್ನು ಹತ್ತಿಕ್ಕಲಾಗಿದೆ. ಇದು ಯಾವ ನ್ಯಾಯ? ಎಂದು ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

ಕರ್ನಾಟಕದ ಹಂಪಿ ವಿಶ್ವವಿದ್ಯಾಲಯ ಎರಡು ವರ್ಷಗಳಿಂದ ದಲಿತ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ಸಿಕ್ಕಿಲ್ಲ ಅದಕ್ಕಾಗಿಯೂ ಹೋರಾಟ ನಡೆಯುತ್ತಿದೆ. ಉಚಿತ, ಗುಣಮಟ್ಟದ ಕಡ್ಡಾಯ ಶಿಕ್ಷಣಕ್ಕಾಗಿ ದೇಶದ ಎಲ್ಲಾ ಕಡೆ ಹೋರಾಟಗಳಾಗಬೇಕಿದ್ದು ಅದಕ್ಕಾಗಿ ಬೆಂಗಳೂರಿನಲ್ಲಿ ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ, ಪ್ರಜ್ಞಾವಂತರೆಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡಿದ್ದಾರೆ.

ಕೇಂದ್ರದ ಅನೈತಿಕ ನಡೆಗಳಿಗೆ ಜೆಎನ್‌ಯು ಮಗ್ಗುಲು ಮುಳ್ಳಾಗಿ ಕಾಡುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಜೆಎನ್‌ಯುವನ್ನೇ ಇಲ್ಲವಾಗಿಸಲು ಹೊರಟಿದೆ. ದಲಿತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬಾರದೆಂಬುದು ಕೇಂದ್ರದ ನಿಲುವಾಗಿದೆ. ಅದಕ್ಕಾಗಿ ಶಾಂತಿಯುತವಾಗಿ ಹೋರಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್ ಹಾಕಿ ಹಿಂಸಿಸಲಾಗುತ್ತಿದೆ. ಇದನ್ನು ಕೂಡಲೇ ವಾಪಸ್  ಪಡೆಯಬೇಕು ಮತ್ತು ಶುಲ್ಕ ಹೆಚ್ಚಳವನ್ನು ಹಿಂತೆಗೆದುಕೊಳ್ಳಬೇಕು. ಅವರೆತ್ತಿರುವ ಪ್ರಶ್ನೆ ಉಚಿತ ಶಿಕ್ಷಣದ ಕುರಿತು ಚರ್ಚೆ ನಡೆಯಬೇಕಿದೆ. ಅದು ಕೇವಲ ಎಡಪಂಥಿಯರ ಹೋರಾಟ ಮಾತ್ರ ಎಂದು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ದೇಶದ ಎಲ್ಲಾ ಬಡವರ ಪರವಾಗಿನ ಹೋರಾಟ ಅದಾಗಿದ್ದು ಅದನ್ನು ನಾವು ಬೆಂಬಲಿಸಬೇಕಾಗಿದೆ ಎಂದು SFI ನ ಅಧ್ಯಕ್ಷರಾದ ಅಂಬರೀಶ್‌ ವಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...