HomeಚಳವಳಿJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಿಂದ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ..

- Advertisement -
- Advertisement -

ಹಾಸ್ಟೆಲ್‌ ಮತ್ತು ದಾಖಲಾತಿ ಶುಲ್ಕ ಹೆಚ್ಚಳ ವಿರೋಧಿಸಿ ಹೋರಾಡುತ್ತಿದ್ದ JNU ವಿದ್ಯಾರ್ಥಿಗಳ ಮೇಲಿನ ಪೊಲೀಸ್‌ ದಾಳಿ ಖಂಡಿಸಿ ಕರ್ನಾಟಕದ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ SFI, AISF, AIDSO ಮತ್ತು KVS ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಲಿದ್ದು ಜೆಎನ್‌ಯು ವಿದ್ಯಾಥಿ೯ಗಳ ಪರ ದನಿ ಎತ್ತಲಿದ್ದಾರೆ.

ಹಾಸ್ಟಲ್ ಶುಲ್ಕವೂ ಸೇರಿದಂತೆ ವಿದ್ಯಾರ್ಥಿಗಳ ಮೇಲೆ ಶುಲ್ಕದ ಹೊರೆಯನ್ನು ಹೇರುವ ಮೂಲಕ ಬಹುಸಂಖ್ಯಾತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ಹೊರಗಿಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ವಿರೋಧಿಸಿ, ಶುಲ್ಕ ಹೆಚ್ಚಳದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ಕ್ರೂರ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಹೇಳಿವೆ.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ತರಲೊರಟಿರುವ ಹೊಸ ಶಿಕ್ಷಣ ನೀತಿ 2019ನ್ನು ಸಹ ಕರ್ನಾಟಕದ ವಿದ್ಯಾರ್ಥಿ ಒಕ್ಕೂಟಗಳು ವಿರೋಧಿಸಿವೆ. ಸಮರ್ಪಕ ಚರ್ಚೆಯ ನಂತರವೇ ಅಂಗೀಕರಿಸಬೇಕೆಂದು ಒತ್ತಾಯಿಸಿವೆ.

ಜೆಎನ್‌ಯು ಮೇಲಿನ ದಾಳಿ ಕ್ರೂರ ಮನಸ್ಥಿತಿಯದ್ದಾಗಿದೆ. ಮೋದಿ ಮತ್ತು ಆರ್‌ಎಸ್‌ಎಸ್‌ ಎಲ್ಲಾ ಕಡೆ ದೇಶವನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ. ಆದರೆ ಫ್ಯಾಸಿಸಂನ ಮತಾಂಧತೆಗೆ ಜೆಎನ್‌ಯು ತಡೆಯಾಗಿದೆ. ಪ್ರಜಾಪ್ರಭುತ್ವವನ್ನು, ಕ್ಯಾಂಪಸ್‌ ಡೆಮಾಕ್ರಸಿಯನ್ನು ಉಳಿಸುತ್ತಿರುವುದು ಜೆಎನ್‌ಯು ಆಗಿದೆ. ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ಜೆಎನ್‌ಯುನಲ್ಲಿ ಶುಲ್ಕ ಹೆಚ್ಚಳದ ವಿರುದ್ಧ ನ್ಯಾಯಯುತ ಹೋರಾಟವನ್ನು ಹತ್ತಿಕ್ಕಲಾಗಿದೆ. ಇದು ಯಾವ ನ್ಯಾಯ? ಎಂದು ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

ಕರ್ನಾಟಕದ ಹಂಪಿ ವಿಶ್ವವಿದ್ಯಾಲಯ ಎರಡು ವರ್ಷಗಳಿಂದ ದಲಿತ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ಸಿಕ್ಕಿಲ್ಲ ಅದಕ್ಕಾಗಿಯೂ ಹೋರಾಟ ನಡೆಯುತ್ತಿದೆ. ಉಚಿತ, ಗುಣಮಟ್ಟದ ಕಡ್ಡಾಯ ಶಿಕ್ಷಣಕ್ಕಾಗಿ ದೇಶದ ಎಲ್ಲಾ ಕಡೆ ಹೋರಾಟಗಳಾಗಬೇಕಿದ್ದು ಅದಕ್ಕಾಗಿ ಬೆಂಗಳೂರಿನಲ್ಲಿ ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ, ಪ್ರಜ್ಞಾವಂತರೆಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡಿದ್ದಾರೆ.

ಕೇಂದ್ರದ ಅನೈತಿಕ ನಡೆಗಳಿಗೆ ಜೆಎನ್‌ಯು ಮಗ್ಗುಲು ಮುಳ್ಳಾಗಿ ಕಾಡುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಜೆಎನ್‌ಯುವನ್ನೇ ಇಲ್ಲವಾಗಿಸಲು ಹೊರಟಿದೆ. ದಲಿತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬಾರದೆಂಬುದು ಕೇಂದ್ರದ ನಿಲುವಾಗಿದೆ. ಅದಕ್ಕಾಗಿ ಶಾಂತಿಯುತವಾಗಿ ಹೋರಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್ ಹಾಕಿ ಹಿಂಸಿಸಲಾಗುತ್ತಿದೆ. ಇದನ್ನು ಕೂಡಲೇ ವಾಪಸ್  ಪಡೆಯಬೇಕು ಮತ್ತು ಶುಲ್ಕ ಹೆಚ್ಚಳವನ್ನು ಹಿಂತೆಗೆದುಕೊಳ್ಳಬೇಕು. ಅವರೆತ್ತಿರುವ ಪ್ರಶ್ನೆ ಉಚಿತ ಶಿಕ್ಷಣದ ಕುರಿತು ಚರ್ಚೆ ನಡೆಯಬೇಕಿದೆ. ಅದು ಕೇವಲ ಎಡಪಂಥಿಯರ ಹೋರಾಟ ಮಾತ್ರ ಎಂದು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ದೇಶದ ಎಲ್ಲಾ ಬಡವರ ಪರವಾಗಿನ ಹೋರಾಟ ಅದಾಗಿದ್ದು ಅದನ್ನು ನಾವು ಬೆಂಬಲಿಸಬೇಕಾಗಿದೆ ಎಂದು SFI ನ ಅಧ್ಯಕ್ಷರಾದ ಅಂಬರೀಶ್‌ ವಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...