Homeಕರ್ನಾಟಕದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ...

ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

30 ವರ್ಷದ ಸೋನು ಮಾತನಾಡಿ "ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?" ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ದೆಹಲಿಯ ತುಘಲಕಾಬಾದ್‌ನ ರವಿದಾಸ್ ದೇವಾಲಯವನ್ನು ಧ್ವಂಸಗೊಳಿಸುವುದರ ವಿರುದ್ಧ ಇಂದು ದೆಹಲಿಯಲ್ಲಿ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಆದರೆ ಅದಾದ ಕೆಲವೇ ಸಂದರ್ಭದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಿಗೆ ಗುಂಡು ಹಾರಿಸಲಾಗಿದೆ ಎಂಬ ವದಂತಿಯ ನಂತರ ಪ್ರತಿಭಟನಾಕಾರರು ಬಸ್‌ಗಳನ್ನು ಧ್ವಂಸಗೊಳಿಸಿದರು. ಆಗ ಪ್ರತಿಭಟನಾಕಾರರು ದೇವಾಲಯದ ಸ್ಥಳಕ್ಕೆ ಬರದಂತೆ ತಡೆಯಲು ಪೊಲೀಸರು ಲಾಠಿ ಚಾರ್ಜ್ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯಕ್ಕೆ ದೇವಾಲಯದ ಬಳಿ ಭಾರಿ ಭದ್ರತಾ ಕಾರ್ಡನ್ ಸ್ಥಾಪಿಸಲಾಗಿದೆ.

ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಆಗಸ್ಟ್ 10 ರಂದು ರವಿದಾಸ್ ದೇವಾಲಯವನ್ನು ನೆಲಸಮ ಮಾಡಿತ್ತು. ಇದನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ದಲಿತರು ಇಂದು ದೆಹಲಿಯಲ್ಲಿ ‘ಮಂದೀರ್ ವಹಿ ಬನೇಗಾ’(ಇಲ್ಲೇ ದೇವಸ್ಥಾನ ಕಟ್ಟಿ) ಎಂದು ಕೂಗುತ್ತಾ ರಾಮ್‌ಲೀಲಾ ಮೈದಾನದಿಂದ ತುಘಲಕಾಬಾದ್‌ಗೆ ಮೆರವಣಿಗೆ ನಡೆಸಿದರು.

ಪಂಜಾಬ್, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ಆಗಮಿಸಿದ ಪ್ರತಿಭಟನಾಕಾರರು ಸರ್ಕಾರವು ಜಮೀನಿನ ಜಾಗವನ್ನು ಸಮುದಾಯಕ್ಕೆ ಹಸ್ತಾಂತರಿಸಿ ದೇವಾಲಯವನ್ನು ಪುನರ್ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಇಂದಿನ ಈ ಪ್ರತಿಭಟನೆಯಲ್ಲಿ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಭಾಗವಹಿಸಿ ಸ್ಫೂರ್ತಿ ತುಂಬಿದರೆ, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಸಹ ಪ್ರತಿಭಟನೆಯ ನೇತೃತ್ವ ವಹಿಸಿ ಅಚ್ಚರಿ ಮೂಡಿಸಿದ್ದಾರೆ.

ನಮ್ಮ ಹೋರಾಟವು ಸಮುದಾಯಕ್ಕೆ ಆಗಿರುವ ಅನ್ಯಾಯದ ವಿರುದ್ಧವಾಗಿದೆಯೆ ಹೊರತು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಲ್ಲ ಎಂದು ರಾಜೇಂದ್ರ ಪಾಲ್ ಗೌತಮ್ ಹೇಳಿದ್ದಾರೆ. “ನಾನು ಇಲ್ಲಿ ಸಮುದಾಯದ ಪ್ರತಿನಿಧಿಯಾಗಿರುತ್ತೇನೆ ಮತ್ತು ದೆಹಲಿ ಮಂತ್ರಿ ಅಥವಾ ರಾಜಕಾರಣಿಯಾಗಿ ಅಲ್ಲ. ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ, ಆದರೆ ದಲಿತ ಸಮುದಾಯದ ದೇವಾಲಯಗಳು ಮತ್ತು ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಮಾತ್ರ ದೇಶಾದ್ಯಂತ ಏಕೆ ನೆಲಸಮ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕು?” ಎಂದಿದ್ದಾರೆ.

ದೇವಸ್ಥಾನ ಉಳಿಸುವುದು ಪ್ರಧಾನಿಯವರ ಜವಾಬ್ದಾರಿ: ಚಂದ್ರಶೇಖರ್ ಅಜಾದ್ ರಾವಣ್

ತುಘಲಕಾಬಾದ್‌ನ 600 ವರ್ಷಗಳ ಹಿಂದಿನ ರಾಜ ಸಿಖಂದರ್ ಲೋಧಿ ಅವರು ದಲಿತ ಸಮುದಾಯಕ್ಕೆ ಸೇರಿದ ಭಕ್ತಿ ಚಳವಳಿಯಲ್ಲಿ ಹೆಸರು ಮಾಡಿರುವ ಗುರು ರವಿದಾಸ್ ಅವರಿಗೆ ಈ ಭೂಮಿಯನ್ನು ನೀಡಿದ್ದರು. ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರಿಂದ ಅದು ದಲಿತರ ಭೂಮಿ ಆಗಿತ್ತು. ಆದರೆ 2011 ರಲ್ಲಿ ಡಿಡಿಎ ಅವರು ಕೋರ್ಟ್‍ನಲ್ಲಿ ದಾವೆ ಹೂಡಿ ಕೇಸ್ ಗೆದ್ದು 2019 ರ ಆಗಸ್ಟ್ 10 ರಂದು ಆ ಜಾಗವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿದ್ದಾರೆ. ಅಲ್ಲಿದ್ದ ರವಿದಾಸ್ ದೇವಾಲಯವನ್ನು ಕೆಡವಿದ್ದಾರೆ. ದಲಿತರ ಭೂಮಿಯನ್ನು ಸರ್ಕಾರದ ಭೂಮಿ ಎಂದು ಹೇಳಿ ದಲಿತರ ಮೇಲೆ ದಮನವನ್ನು ಮಾಡಲಾಗುತ್ತಿದೆ. ದೇಶದ ಕೊನೆ ವ್ಯಕ್ತಿಯ ಘನತೆಯ ಜೀವನದ ಜವಾಬ್ದಾರಿಯು ಪ್ರಧಾನ ಮಂತ್ರಿಗಳ ಮೇಲೆ ಮತ್ತು ಮುಖ್ಯಮಂತ್ರಿಗಳ ಮೇಲೆ ಇರುತ್ತದೆ. ಈ ದೇವಾಸ್ಥಾನ ಉಳಿಸುವುದು ಪ್ರಧಾನಿಯವರ ಕರ್ತವ್ಯ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮತ್ತು ಕೇಂದ್ರ ಮಾಜಿ ಸಚಿವ ವಿಜಯ್ ಗೋಯೆಲ್ ಅವರು ಆಮ್ ಆದ್ಮಿ ಪಕ್ಷವು ಈ ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ‘ಇತ್ತೀಚೆಗೆ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಅವರಿಗೆ ಪರಿಹಾರವನ್ನು ನೀಡಿದ್ದೇನೆ ಎಂದಿದ್ದಾರೆ’. “ಸುಪ್ರೀಂ ಕೋರ್ಟ್ ಅನುಮೋದನೆಯ ನಂತರ ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಅವರು ಒಪ್ಪಿದರೆ, ನಾವು ಈ ವಿಷಯವನ್ನು ಡಿಡಿಎಯೊಂದಿಗೆ ಚರ್ಚಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಈ ದೇವಾಲಯದ ಆಂದೋಲನಕ್ಕಾಗಿ ರೂಪುಗೊಂಡ ದಲಿತ ಗುಂಪುಗಳ ಸಂಸ್ಥೆಯಾದ ‘ಅಖಿಲ ಭಾರತೀಯ ಸಂತ ಶಿರೋಮಣಿ ಗುರು ರವಿದಾಸ್ ಮಂದಿರ ಸನ್ಯುಕ್ತಾ ಸನ್ರಕ್ಷಣ್ ಸಮಿತಿಯ ಬ್ಯಾನರ್ ಅಡಿಯಲ್ಲಿ ಒಟ್ಟುಗೂಡಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟವನ್ನು ಮುಂದುವರೆಸಲು ನಿರ್ಧರಿಸಿದರು. ಕೆಲವರು ರಾಮ್‌ಲೀಲಾ ಮೈದಾನದಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಪಂಜಾಬ್‌ನ ಜಲಂಧರ್‌ನಿಂದ ದೆಹಲಿಗೆ ಪ್ರಯಾಣಿಸಿದ ಹನ್ಸರಾಜ್ ರಾಜ್, “ನಮ್ಮ ಬೇಡಿಕೆ ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಿಂತ ಹೇಗೆ ಭಿನ್ನವಾಗಿದೆ? ಆ ನಿರ್ದಿಷ್ಟ ಸಮುದಾಯಕ್ಕೆ ಅದು ತುಂಬಾ ಮುಖ್ಯವಾಗಿದ್ದರೆ, ಇದು ಸಹ ನಮಗೆ ಮುಖ್ಯವಾಗಿದೆ” ಎಂದಿದ್ದಾರೆ.

ಸರ್ಕಾರ ಮತ್ತು ಅರಣ್ಯ ಭೂಮಿಯಲ್ಲಿ ಹಲವು ಧರ್ಮದ ಸಾವಿರಾರು ದೇವಾಲಯಗಳಿವೆ. ಆದರೆ “ಸಂತ ರವಿದಾಸ್ ದೇವಾಲಯವನ್ನು ಮಾತ್ರ ಏಕೆ ಧ್ವಂಸಗೊಳಿಸಲಾಯಿತು? ಇದಕ್ಕೆ ಸರ್ಕಾರ ಉತ್ತರಿಸಬೇಕು” ಎಂದು ಎಂದು ಗಾಜಿಯಾಬಾದ್‌ನ ವಿ.ಪಿ.ಸಿಂಗ್ (60) ಹೇಳಿದ್ದಾರೆ.

30 ವರ್ಷದ ಸೋನು ಮಾತನಾಡಿ “ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ದಲಿತರ ಅಭಿಪ್ರಾಯಗಳನ್ನು ಪರಿಗಣಿಸದೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ನಿಬಂಧನೆಗಳನ್ನು ಸುಪ್ರೀಂ ಕೋರ್ಟ್ ದುರ್ಬಲಗೊಳಿಸಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರ ಆರೋಪಿಸಿದರು.

ಸುಪ್ರೀಂ ಕೋರ್ಟ್ ಏನು ಹೇಳಿದೆ?
ರವಿದಾಸ್ ದೇವಾಲಯದ ವಿಷಯದಲ್ಲಿ ತನ್ನ ಆದೇಶಗಳಿಗೆ “ರಾಜಕೀಯ ಬಣ್ಣ” ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 19 ರ ಸೋಮವಾರ ಹೇಳಿದೆ. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ನ್ಯಾಯಪೀಠವು ಪಂಜಾಬ್, ಹರಿಯಾಣ ಮತ್ತು ದೆಹಲಿ ಸರ್ಕಾರಗಳಿಗೆ, ಈ ವಿಚಾರವಾಗಿ ಯಾವುದೇ ಪ್ರತಿಭಟನೆ ನಡೆದರೆ ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಮತ್ತು  ರಾಜಕೀಯ ಇರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರ ಭಕ್ತಿಗೂ ಯಾರಿಂದನೂ ಅಡ್ಡಿಯಾಗಬಾರದು ಅವರವರ ಹಕ್ಕು ಅವರವರಿಗೆ ದೊರಕಬೇಕು

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...