Homeಕರ್ನಾಟಕದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ...

ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

30 ವರ್ಷದ ಸೋನು ಮಾತನಾಡಿ "ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?" ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ದೆಹಲಿಯ ತುಘಲಕಾಬಾದ್‌ನ ರವಿದಾಸ್ ದೇವಾಲಯವನ್ನು ಧ್ವಂಸಗೊಳಿಸುವುದರ ವಿರುದ್ಧ ಇಂದು ದೆಹಲಿಯಲ್ಲಿ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಆದರೆ ಅದಾದ ಕೆಲವೇ ಸಂದರ್ಭದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಿಗೆ ಗುಂಡು ಹಾರಿಸಲಾಗಿದೆ ಎಂಬ ವದಂತಿಯ ನಂತರ ಪ್ರತಿಭಟನಾಕಾರರು ಬಸ್‌ಗಳನ್ನು ಧ್ವಂಸಗೊಳಿಸಿದರು. ಆಗ ಪ್ರತಿಭಟನಾಕಾರರು ದೇವಾಲಯದ ಸ್ಥಳಕ್ಕೆ ಬರದಂತೆ ತಡೆಯಲು ಪೊಲೀಸರು ಲಾಠಿ ಚಾರ್ಜ್ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯಕ್ಕೆ ದೇವಾಲಯದ ಬಳಿ ಭಾರಿ ಭದ್ರತಾ ಕಾರ್ಡನ್ ಸ್ಥಾಪಿಸಲಾಗಿದೆ.

ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಆಗಸ್ಟ್ 10 ರಂದು ರವಿದಾಸ್ ದೇವಾಲಯವನ್ನು ನೆಲಸಮ ಮಾಡಿತ್ತು. ಇದನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ದಲಿತರು ಇಂದು ದೆಹಲಿಯಲ್ಲಿ ‘ಮಂದೀರ್ ವಹಿ ಬನೇಗಾ’(ಇಲ್ಲೇ ದೇವಸ್ಥಾನ ಕಟ್ಟಿ) ಎಂದು ಕೂಗುತ್ತಾ ರಾಮ್‌ಲೀಲಾ ಮೈದಾನದಿಂದ ತುಘಲಕಾಬಾದ್‌ಗೆ ಮೆರವಣಿಗೆ ನಡೆಸಿದರು.

ಪಂಜಾಬ್, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ಆಗಮಿಸಿದ ಪ್ರತಿಭಟನಾಕಾರರು ಸರ್ಕಾರವು ಜಮೀನಿನ ಜಾಗವನ್ನು ಸಮುದಾಯಕ್ಕೆ ಹಸ್ತಾಂತರಿಸಿ ದೇವಾಲಯವನ್ನು ಪುನರ್ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಇಂದಿನ ಈ ಪ್ರತಿಭಟನೆಯಲ್ಲಿ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಭಾಗವಹಿಸಿ ಸ್ಫೂರ್ತಿ ತುಂಬಿದರೆ, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಸಹ ಪ್ರತಿಭಟನೆಯ ನೇತೃತ್ವ ವಹಿಸಿ ಅಚ್ಚರಿ ಮೂಡಿಸಿದ್ದಾರೆ.

ನಮ್ಮ ಹೋರಾಟವು ಸಮುದಾಯಕ್ಕೆ ಆಗಿರುವ ಅನ್ಯಾಯದ ವಿರುದ್ಧವಾಗಿದೆಯೆ ಹೊರತು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಲ್ಲ ಎಂದು ರಾಜೇಂದ್ರ ಪಾಲ್ ಗೌತಮ್ ಹೇಳಿದ್ದಾರೆ. “ನಾನು ಇಲ್ಲಿ ಸಮುದಾಯದ ಪ್ರತಿನಿಧಿಯಾಗಿರುತ್ತೇನೆ ಮತ್ತು ದೆಹಲಿ ಮಂತ್ರಿ ಅಥವಾ ರಾಜಕಾರಣಿಯಾಗಿ ಅಲ್ಲ. ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ, ಆದರೆ ದಲಿತ ಸಮುದಾಯದ ದೇವಾಲಯಗಳು ಮತ್ತು ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಮಾತ್ರ ದೇಶಾದ್ಯಂತ ಏಕೆ ನೆಲಸಮ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕು?” ಎಂದಿದ್ದಾರೆ.

ದೇವಸ್ಥಾನ ಉಳಿಸುವುದು ಪ್ರಧಾನಿಯವರ ಜವಾಬ್ದಾರಿ: ಚಂದ್ರಶೇಖರ್ ಅಜಾದ್ ರಾವಣ್

ತುಘಲಕಾಬಾದ್‌ನ 600 ವರ್ಷಗಳ ಹಿಂದಿನ ರಾಜ ಸಿಖಂದರ್ ಲೋಧಿ ಅವರು ದಲಿತ ಸಮುದಾಯಕ್ಕೆ ಸೇರಿದ ಭಕ್ತಿ ಚಳವಳಿಯಲ್ಲಿ ಹೆಸರು ಮಾಡಿರುವ ಗುರು ರವಿದಾಸ್ ಅವರಿಗೆ ಈ ಭೂಮಿಯನ್ನು ನೀಡಿದ್ದರು. ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರಿಂದ ಅದು ದಲಿತರ ಭೂಮಿ ಆಗಿತ್ತು. ಆದರೆ 2011 ರಲ್ಲಿ ಡಿಡಿಎ ಅವರು ಕೋರ್ಟ್‍ನಲ್ಲಿ ದಾವೆ ಹೂಡಿ ಕೇಸ್ ಗೆದ್ದು 2019 ರ ಆಗಸ್ಟ್ 10 ರಂದು ಆ ಜಾಗವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿದ್ದಾರೆ. ಅಲ್ಲಿದ್ದ ರವಿದಾಸ್ ದೇವಾಲಯವನ್ನು ಕೆಡವಿದ್ದಾರೆ. ದಲಿತರ ಭೂಮಿಯನ್ನು ಸರ್ಕಾರದ ಭೂಮಿ ಎಂದು ಹೇಳಿ ದಲಿತರ ಮೇಲೆ ದಮನವನ್ನು ಮಾಡಲಾಗುತ್ತಿದೆ. ದೇಶದ ಕೊನೆ ವ್ಯಕ್ತಿಯ ಘನತೆಯ ಜೀವನದ ಜವಾಬ್ದಾರಿಯು ಪ್ರಧಾನ ಮಂತ್ರಿಗಳ ಮೇಲೆ ಮತ್ತು ಮುಖ್ಯಮಂತ್ರಿಗಳ ಮೇಲೆ ಇರುತ್ತದೆ. ಈ ದೇವಾಸ್ಥಾನ ಉಳಿಸುವುದು ಪ್ರಧಾನಿಯವರ ಕರ್ತವ್ಯ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮತ್ತು ಕೇಂದ್ರ ಮಾಜಿ ಸಚಿವ ವಿಜಯ್ ಗೋಯೆಲ್ ಅವರು ಆಮ್ ಆದ್ಮಿ ಪಕ್ಷವು ಈ ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ‘ಇತ್ತೀಚೆಗೆ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಅವರಿಗೆ ಪರಿಹಾರವನ್ನು ನೀಡಿದ್ದೇನೆ ಎಂದಿದ್ದಾರೆ’. “ಸುಪ್ರೀಂ ಕೋರ್ಟ್ ಅನುಮೋದನೆಯ ನಂತರ ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಅವರು ಒಪ್ಪಿದರೆ, ನಾವು ಈ ವಿಷಯವನ್ನು ಡಿಡಿಎಯೊಂದಿಗೆ ಚರ್ಚಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಈ ದೇವಾಲಯದ ಆಂದೋಲನಕ್ಕಾಗಿ ರೂಪುಗೊಂಡ ದಲಿತ ಗುಂಪುಗಳ ಸಂಸ್ಥೆಯಾದ ‘ಅಖಿಲ ಭಾರತೀಯ ಸಂತ ಶಿರೋಮಣಿ ಗುರು ರವಿದಾಸ್ ಮಂದಿರ ಸನ್ಯುಕ್ತಾ ಸನ್ರಕ್ಷಣ್ ಸಮಿತಿಯ ಬ್ಯಾನರ್ ಅಡಿಯಲ್ಲಿ ಒಟ್ಟುಗೂಡಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟವನ್ನು ಮುಂದುವರೆಸಲು ನಿರ್ಧರಿಸಿದರು. ಕೆಲವರು ರಾಮ್‌ಲೀಲಾ ಮೈದಾನದಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಪಂಜಾಬ್‌ನ ಜಲಂಧರ್‌ನಿಂದ ದೆಹಲಿಗೆ ಪ್ರಯಾಣಿಸಿದ ಹನ್ಸರಾಜ್ ರಾಜ್, “ನಮ್ಮ ಬೇಡಿಕೆ ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಿಂತ ಹೇಗೆ ಭಿನ್ನವಾಗಿದೆ? ಆ ನಿರ್ದಿಷ್ಟ ಸಮುದಾಯಕ್ಕೆ ಅದು ತುಂಬಾ ಮುಖ್ಯವಾಗಿದ್ದರೆ, ಇದು ಸಹ ನಮಗೆ ಮುಖ್ಯವಾಗಿದೆ” ಎಂದಿದ್ದಾರೆ.

ಸರ್ಕಾರ ಮತ್ತು ಅರಣ್ಯ ಭೂಮಿಯಲ್ಲಿ ಹಲವು ಧರ್ಮದ ಸಾವಿರಾರು ದೇವಾಲಯಗಳಿವೆ. ಆದರೆ “ಸಂತ ರವಿದಾಸ್ ದೇವಾಲಯವನ್ನು ಮಾತ್ರ ಏಕೆ ಧ್ವಂಸಗೊಳಿಸಲಾಯಿತು? ಇದಕ್ಕೆ ಸರ್ಕಾರ ಉತ್ತರಿಸಬೇಕು” ಎಂದು ಎಂದು ಗಾಜಿಯಾಬಾದ್‌ನ ವಿ.ಪಿ.ಸಿಂಗ್ (60) ಹೇಳಿದ್ದಾರೆ.

30 ವರ್ಷದ ಸೋನು ಮಾತನಾಡಿ “ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ದಲಿತರ ಅಭಿಪ್ರಾಯಗಳನ್ನು ಪರಿಗಣಿಸದೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ನಿಬಂಧನೆಗಳನ್ನು ಸುಪ್ರೀಂ ಕೋರ್ಟ್ ದುರ್ಬಲಗೊಳಿಸಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರ ಆರೋಪಿಸಿದರು.

ಸುಪ್ರೀಂ ಕೋರ್ಟ್ ಏನು ಹೇಳಿದೆ?
ರವಿದಾಸ್ ದೇವಾಲಯದ ವಿಷಯದಲ್ಲಿ ತನ್ನ ಆದೇಶಗಳಿಗೆ “ರಾಜಕೀಯ ಬಣ್ಣ” ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 19 ರ ಸೋಮವಾರ ಹೇಳಿದೆ. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ನ್ಯಾಯಪೀಠವು ಪಂಜಾಬ್, ಹರಿಯಾಣ ಮತ್ತು ದೆಹಲಿ ಸರ್ಕಾರಗಳಿಗೆ, ಈ ವಿಚಾರವಾಗಿ ಯಾವುದೇ ಪ್ರತಿಭಟನೆ ನಡೆದರೆ ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಮತ್ತು  ರಾಜಕೀಯ ಇರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರ ಭಕ್ತಿಗೂ ಯಾರಿಂದನೂ ಅಡ್ಡಿಯಾಗಬಾರದು ಅವರವರ ಹಕ್ಕು ಅವರವರಿಗೆ ದೊರಕಬೇಕು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...