Homeಕರ್ನಾಟಕದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ...

ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

30 ವರ್ಷದ ಸೋನು ಮಾತನಾಡಿ "ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?" ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ದೆಹಲಿಯ ತುಘಲಕಾಬಾದ್‌ನ ರವಿದಾಸ್ ದೇವಾಲಯವನ್ನು ಧ್ವಂಸಗೊಳಿಸುವುದರ ವಿರುದ್ಧ ಇಂದು ದೆಹಲಿಯಲ್ಲಿ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಆದರೆ ಅದಾದ ಕೆಲವೇ ಸಂದರ್ಭದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಿಗೆ ಗುಂಡು ಹಾರಿಸಲಾಗಿದೆ ಎಂಬ ವದಂತಿಯ ನಂತರ ಪ್ರತಿಭಟನಾಕಾರರು ಬಸ್‌ಗಳನ್ನು ಧ್ವಂಸಗೊಳಿಸಿದರು. ಆಗ ಪ್ರತಿಭಟನಾಕಾರರು ದೇವಾಲಯದ ಸ್ಥಳಕ್ಕೆ ಬರದಂತೆ ತಡೆಯಲು ಪೊಲೀಸರು ಲಾಠಿ ಚಾರ್ಜ್ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯಕ್ಕೆ ದೇವಾಲಯದ ಬಳಿ ಭಾರಿ ಭದ್ರತಾ ಕಾರ್ಡನ್ ಸ್ಥಾಪಿಸಲಾಗಿದೆ.

ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಆಗಸ್ಟ್ 10 ರಂದು ರವಿದಾಸ್ ದೇವಾಲಯವನ್ನು ನೆಲಸಮ ಮಾಡಿತ್ತು. ಇದನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ದಲಿತರು ಇಂದು ದೆಹಲಿಯಲ್ಲಿ ‘ಮಂದೀರ್ ವಹಿ ಬನೇಗಾ’(ಇಲ್ಲೇ ದೇವಸ್ಥಾನ ಕಟ್ಟಿ) ಎಂದು ಕೂಗುತ್ತಾ ರಾಮ್‌ಲೀಲಾ ಮೈದಾನದಿಂದ ತುಘಲಕಾಬಾದ್‌ಗೆ ಮೆರವಣಿಗೆ ನಡೆಸಿದರು.

ಪಂಜಾಬ್, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ಆಗಮಿಸಿದ ಪ್ರತಿಭಟನಾಕಾರರು ಸರ್ಕಾರವು ಜಮೀನಿನ ಜಾಗವನ್ನು ಸಮುದಾಯಕ್ಕೆ ಹಸ್ತಾಂತರಿಸಿ ದೇವಾಲಯವನ್ನು ಪುನರ್ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಇಂದಿನ ಈ ಪ್ರತಿಭಟನೆಯಲ್ಲಿ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಭಾಗವಹಿಸಿ ಸ್ಫೂರ್ತಿ ತುಂಬಿದರೆ, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಸಹ ಪ್ರತಿಭಟನೆಯ ನೇತೃತ್ವ ವಹಿಸಿ ಅಚ್ಚರಿ ಮೂಡಿಸಿದ್ದಾರೆ.

ನಮ್ಮ ಹೋರಾಟವು ಸಮುದಾಯಕ್ಕೆ ಆಗಿರುವ ಅನ್ಯಾಯದ ವಿರುದ್ಧವಾಗಿದೆಯೆ ಹೊರತು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಲ್ಲ ಎಂದು ರಾಜೇಂದ್ರ ಪಾಲ್ ಗೌತಮ್ ಹೇಳಿದ್ದಾರೆ. “ನಾನು ಇಲ್ಲಿ ಸಮುದಾಯದ ಪ್ರತಿನಿಧಿಯಾಗಿರುತ್ತೇನೆ ಮತ್ತು ದೆಹಲಿ ಮಂತ್ರಿ ಅಥವಾ ರಾಜಕಾರಣಿಯಾಗಿ ಅಲ್ಲ. ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ, ಆದರೆ ದಲಿತ ಸಮುದಾಯದ ದೇವಾಲಯಗಳು ಮತ್ತು ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಮಾತ್ರ ದೇಶಾದ್ಯಂತ ಏಕೆ ನೆಲಸಮ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕು?” ಎಂದಿದ್ದಾರೆ.

ದೇವಸ್ಥಾನ ಉಳಿಸುವುದು ಪ್ರಧಾನಿಯವರ ಜವಾಬ್ದಾರಿ: ಚಂದ್ರಶೇಖರ್ ಅಜಾದ್ ರಾವಣ್

ತುಘಲಕಾಬಾದ್‌ನ 600 ವರ್ಷಗಳ ಹಿಂದಿನ ರಾಜ ಸಿಖಂದರ್ ಲೋಧಿ ಅವರು ದಲಿತ ಸಮುದಾಯಕ್ಕೆ ಸೇರಿದ ಭಕ್ತಿ ಚಳವಳಿಯಲ್ಲಿ ಹೆಸರು ಮಾಡಿರುವ ಗುರು ರವಿದಾಸ್ ಅವರಿಗೆ ಈ ಭೂಮಿಯನ್ನು ನೀಡಿದ್ದರು. ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರಿಂದ ಅದು ದಲಿತರ ಭೂಮಿ ಆಗಿತ್ತು. ಆದರೆ 2011 ರಲ್ಲಿ ಡಿಡಿಎ ಅವರು ಕೋರ್ಟ್‍ನಲ್ಲಿ ದಾವೆ ಹೂಡಿ ಕೇಸ್ ಗೆದ್ದು 2019 ರ ಆಗಸ್ಟ್ 10 ರಂದು ಆ ಜಾಗವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿದ್ದಾರೆ. ಅಲ್ಲಿದ್ದ ರವಿದಾಸ್ ದೇವಾಲಯವನ್ನು ಕೆಡವಿದ್ದಾರೆ. ದಲಿತರ ಭೂಮಿಯನ್ನು ಸರ್ಕಾರದ ಭೂಮಿ ಎಂದು ಹೇಳಿ ದಲಿತರ ಮೇಲೆ ದಮನವನ್ನು ಮಾಡಲಾಗುತ್ತಿದೆ. ದೇಶದ ಕೊನೆ ವ್ಯಕ್ತಿಯ ಘನತೆಯ ಜೀವನದ ಜವಾಬ್ದಾರಿಯು ಪ್ರಧಾನ ಮಂತ್ರಿಗಳ ಮೇಲೆ ಮತ್ತು ಮುಖ್ಯಮಂತ್ರಿಗಳ ಮೇಲೆ ಇರುತ್ತದೆ. ಈ ದೇವಾಸ್ಥಾನ ಉಳಿಸುವುದು ಪ್ರಧಾನಿಯವರ ಕರ್ತವ್ಯ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮತ್ತು ಕೇಂದ್ರ ಮಾಜಿ ಸಚಿವ ವಿಜಯ್ ಗೋಯೆಲ್ ಅವರು ಆಮ್ ಆದ್ಮಿ ಪಕ್ಷವು ಈ ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ‘ಇತ್ತೀಚೆಗೆ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಅವರಿಗೆ ಪರಿಹಾರವನ್ನು ನೀಡಿದ್ದೇನೆ ಎಂದಿದ್ದಾರೆ’. “ಸುಪ್ರೀಂ ಕೋರ್ಟ್ ಅನುಮೋದನೆಯ ನಂತರ ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಅವರು ಒಪ್ಪಿದರೆ, ನಾವು ಈ ವಿಷಯವನ್ನು ಡಿಡಿಎಯೊಂದಿಗೆ ಚರ್ಚಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಈ ದೇವಾಲಯದ ಆಂದೋಲನಕ್ಕಾಗಿ ರೂಪುಗೊಂಡ ದಲಿತ ಗುಂಪುಗಳ ಸಂಸ್ಥೆಯಾದ ‘ಅಖಿಲ ಭಾರತೀಯ ಸಂತ ಶಿರೋಮಣಿ ಗುರು ರವಿದಾಸ್ ಮಂದಿರ ಸನ್ಯುಕ್ತಾ ಸನ್ರಕ್ಷಣ್ ಸಮಿತಿಯ ಬ್ಯಾನರ್ ಅಡಿಯಲ್ಲಿ ಒಟ್ಟುಗೂಡಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟವನ್ನು ಮುಂದುವರೆಸಲು ನಿರ್ಧರಿಸಿದರು. ಕೆಲವರು ರಾಮ್‌ಲೀಲಾ ಮೈದಾನದಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಪಂಜಾಬ್‌ನ ಜಲಂಧರ್‌ನಿಂದ ದೆಹಲಿಗೆ ಪ್ರಯಾಣಿಸಿದ ಹನ್ಸರಾಜ್ ರಾಜ್, “ನಮ್ಮ ಬೇಡಿಕೆ ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಿಂತ ಹೇಗೆ ಭಿನ್ನವಾಗಿದೆ? ಆ ನಿರ್ದಿಷ್ಟ ಸಮುದಾಯಕ್ಕೆ ಅದು ತುಂಬಾ ಮುಖ್ಯವಾಗಿದ್ದರೆ, ಇದು ಸಹ ನಮಗೆ ಮುಖ್ಯವಾಗಿದೆ” ಎಂದಿದ್ದಾರೆ.

ಸರ್ಕಾರ ಮತ್ತು ಅರಣ್ಯ ಭೂಮಿಯಲ್ಲಿ ಹಲವು ಧರ್ಮದ ಸಾವಿರಾರು ದೇವಾಲಯಗಳಿವೆ. ಆದರೆ “ಸಂತ ರವಿದಾಸ್ ದೇವಾಲಯವನ್ನು ಮಾತ್ರ ಏಕೆ ಧ್ವಂಸಗೊಳಿಸಲಾಯಿತು? ಇದಕ್ಕೆ ಸರ್ಕಾರ ಉತ್ತರಿಸಬೇಕು” ಎಂದು ಎಂದು ಗಾಜಿಯಾಬಾದ್‌ನ ವಿ.ಪಿ.ಸಿಂಗ್ (60) ಹೇಳಿದ್ದಾರೆ.

30 ವರ್ಷದ ಸೋನು ಮಾತನಾಡಿ “ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ದಲಿತರ ಅಭಿಪ್ರಾಯಗಳನ್ನು ಪರಿಗಣಿಸದೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ನಿಬಂಧನೆಗಳನ್ನು ಸುಪ್ರೀಂ ಕೋರ್ಟ್ ದುರ್ಬಲಗೊಳಿಸಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರ ಆರೋಪಿಸಿದರು.

ಸುಪ್ರೀಂ ಕೋರ್ಟ್ ಏನು ಹೇಳಿದೆ?
ರವಿದಾಸ್ ದೇವಾಲಯದ ವಿಷಯದಲ್ಲಿ ತನ್ನ ಆದೇಶಗಳಿಗೆ “ರಾಜಕೀಯ ಬಣ್ಣ” ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 19 ರ ಸೋಮವಾರ ಹೇಳಿದೆ. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ನ್ಯಾಯಪೀಠವು ಪಂಜಾಬ್, ಹರಿಯಾಣ ಮತ್ತು ದೆಹಲಿ ಸರ್ಕಾರಗಳಿಗೆ, ಈ ವಿಚಾರವಾಗಿ ಯಾವುದೇ ಪ್ರತಿಭಟನೆ ನಡೆದರೆ ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಮತ್ತು  ರಾಜಕೀಯ ಇರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರ ಭಕ್ತಿಗೂ ಯಾರಿಂದನೂ ಅಡ್ಡಿಯಾಗಬಾರದು ಅವರವರ ಹಕ್ಕು ಅವರವರಿಗೆ ದೊರಕಬೇಕು

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...