Homeಕರ್ನಾಟಕಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

- Advertisement -
- Advertisement -

ಭೂಸುಧಾರಣಾ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ತುಮಕೂರಿನಲ್ಲಿ ವರದಿಯಾಗಿದೆ. ನಿಮ್ಮದೇ ಸರ್ಕಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ರೈತ ಮುಖಂಡರ ಪ್ರಶ್ನೆ ಸಚಿವರು ಕೆರಳಿದರು. ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಲಾರದೆ ಸಚಿವರು ಬೇಸರಗೊಂಡು ಕಾರಿನಲ್ಲಿ ಹೋಗಿ ಕುಳಿತ ಘಟನೆ ಜರುಗಿದೆ.

ರೈತ ಮುಖಂಡರು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದಾಗ ಸಚಿವರು ಸಿಡಿಮಿಡಿ ವ್ಯಕ್ತಪಡಿಸಿದರು. ಆಗ ಮಾತಿಗೆ ಮಾತು ಬೆಳೆಯಿತು. ಪ್ರತಿಭಟನಾನಿರತ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಪ್ರತಿಭಟನಾರರು ದಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಹೊರಟು ಹೋದರು. ಮತ್ತೆ ಸಚಿವರನ್ನು ಸಮಾಧಾನಪಡಿ ಅಧಿಕಾರಿಗಳು ಕರೆತಂದರು. ಸಚಿವರು ಹಠಕ್ಕೆ ಬಿದ್ದಂತೆ ತನ್ನ ಪಟ್ಟನ್ನು ಸಡಿಸಲೇ ಇಲ್ಲ. ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಳಿ ಬಂದಾಗ ಈ ಘಟನೆ ಜರುಗಿದೆ.

ಭೂಸುಧಾರಣೆ ಕಾಯ್ದೆ 1961ಕ್ಕೆ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ,ಬಿ,ಸಿ ಮತ್ತು 63 ಹಾಗೂ 80ನ್ನು ತೆಗೆದಹಾಕುವ ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದನ್ನು ವಿರೋಧಿಸಿ ಹಲವು ರೈತ ಸಂಘಟನೆಗಳು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದವು.

ಯಾವುದೇ ತಿದ್ದುಪಡಿ ಅಥವಾ ಕಾಯ್ದೆ ರೂಪಿಸಲು ಸಾರ್ವಜನಿಕರ ಒಳಿತು ಅದರಲ್ಲಿ ಅಡಕವಾಗಿರಬೇಕು. ಅದನ್ನು ಜನಸಮುದಾಯ ಒಪ್ಪುವಂತಿರಬೇಕು, ಅದು ಸಮರ್ಥನೀಯವಾಗಿರಬೇಕು. ಅಂತಹ ಕಾಯ್ದೆ ಅಥವಾ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಇಂತಹ ಚರ್ಚೆಗೆ ಅವಕಾಶ ನೀಡದೆ ಸರ್ಕಾರ ತರಲು ಉದ್ದೇಶಿಸಿರುವ ಭೂಸುಧಾರಣಾ ಕಾಯ್ದೆ ಬಾಲಿಶವಾಗಿರುತ್ತವೆ ಎಂದು ಪ್ರತಿಭಟನಾಕಾರರು ದೂರಿದರು.
ಕಲಂಗಳನ್ನು ರದ್ದುಪಡಿಸಿದರೆ ಭೂಸುಧಾರಣಾ ಕಾಯ್ದೆಯ ಅಸ್ತಿತ್ವವೇ ಇರುವುದಿಲ್ಲ. ಕಾಯ್ದೆಯ ಮೂಲ ಉದ್ದೇಶ ಉಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ಈ ತಿದ್ದುಪಡಿ ತಿಲಾಂಜಲಿ ಇಡಲಿದೆ. ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಜಾಸ್ತಿ ಇದ್ದು ಅವರ ಸಂಪೂರ್ಣ ಬದುಕು ಬೀದಿಗೆ ಬೀಳಲಿದೆ. ರೈತರ ಅಸ್ತಿತ್ವವೇ ಇಲ್ಲವಾಗಲಿದೆ.. ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ದಲಿತರು ಅತ್ಯಂತ ಸಂಕಷ್ಟಕ್ಕೆ ಈಡಾಗುತ್ತಾರೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಿಗರ ಕೃಷಿ ಸಂಸ್ಕೃತಿ ಬೆಳೆಯುತ್ತದೆ ಮತ್ತು ಸಮಾಜದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ ಎಂದು ಆರೋಪಿಸಿದರು.

ತಿದ್ದುಪಡಿಯಿಂದ ಆಹಾರ ಸಾರ್ವಭೌಮತ್ವಕ್ಕೆ ಪೆಟ್ಟು ಬಿದ್ದು ಆಹಾರ ಭದ್ರತೆಯ ಹಕ್ಕು ನಾಶವಾಗುತ್ತದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮಾನೋಕಲ್ಚರ್‌ಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗುತ್ತದೆ. ಇದರಿಂದ ಆಹಾರ ಸಂಸ್ಕಂತಿಗೆ ಪೆಟ್ಟು ಬೀಳುತ್ತದೆ ಎಂದು ಆಪಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ, ಎಐಕೆಎಸ್, ದಲಿತ ಸಂಘರ್ಷ ಸಮಿತಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮುಖಂಡ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ದು ಹೇಳಿ ಬೇಸರದಿಂದಲೇ ಅಲ್ಲಿಂದ ತೆರಳಿದರು. ಇದೇ ವೇಳೆ ಸಂಸದ  ಅವರಿಗೂ ಮನವಿ ಸಲ್ಲಿಸಲಾಯಿತು. ಪಾರ್ಲಿಮೆಂಟ್ ನಲ್ಲಿ ಚರ್ಚಿಸುತ್ತೇನೆ. ಪ್ರಧಾನಿಗಳ ಗಮನ ಸೆಳೆಯುತ್ತೇನೆ ಎಂದು ಬಸವರಾಜು ರೈತ ಮುಖಂಡರಿಗೆ ಭರವಸೆ ನೀಡಿದರು.


ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...