Homeಕರ್ನಾಟಕಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

- Advertisement -
- Advertisement -

ಭೂಸುಧಾರಣಾ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ತುಮಕೂರಿನಲ್ಲಿ ವರದಿಯಾಗಿದೆ. ನಿಮ್ಮದೇ ಸರ್ಕಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ರೈತ ಮುಖಂಡರ ಪ್ರಶ್ನೆ ಸಚಿವರು ಕೆರಳಿದರು. ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಲಾರದೆ ಸಚಿವರು ಬೇಸರಗೊಂಡು ಕಾರಿನಲ್ಲಿ ಹೋಗಿ ಕುಳಿತ ಘಟನೆ ಜರುಗಿದೆ.

ರೈತ ಮುಖಂಡರು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದಾಗ ಸಚಿವರು ಸಿಡಿಮಿಡಿ ವ್ಯಕ್ತಪಡಿಸಿದರು. ಆಗ ಮಾತಿಗೆ ಮಾತು ಬೆಳೆಯಿತು. ಪ್ರತಿಭಟನಾನಿರತ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಪ್ರತಿಭಟನಾರರು ದಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಹೊರಟು ಹೋದರು. ಮತ್ತೆ ಸಚಿವರನ್ನು ಸಮಾಧಾನಪಡಿ ಅಧಿಕಾರಿಗಳು ಕರೆತಂದರು. ಸಚಿವರು ಹಠಕ್ಕೆ ಬಿದ್ದಂತೆ ತನ್ನ ಪಟ್ಟನ್ನು ಸಡಿಸಲೇ ಇಲ್ಲ. ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಳಿ ಬಂದಾಗ ಈ ಘಟನೆ ಜರುಗಿದೆ.

ಭೂಸುಧಾರಣೆ ಕಾಯ್ದೆ 1961ಕ್ಕೆ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ,ಬಿ,ಸಿ ಮತ್ತು 63 ಹಾಗೂ 80ನ್ನು ತೆಗೆದಹಾಕುವ ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದನ್ನು ವಿರೋಧಿಸಿ ಹಲವು ರೈತ ಸಂಘಟನೆಗಳು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದವು.

ಯಾವುದೇ ತಿದ್ದುಪಡಿ ಅಥವಾ ಕಾಯ್ದೆ ರೂಪಿಸಲು ಸಾರ್ವಜನಿಕರ ಒಳಿತು ಅದರಲ್ಲಿ ಅಡಕವಾಗಿರಬೇಕು. ಅದನ್ನು ಜನಸಮುದಾಯ ಒಪ್ಪುವಂತಿರಬೇಕು, ಅದು ಸಮರ್ಥನೀಯವಾಗಿರಬೇಕು. ಅಂತಹ ಕಾಯ್ದೆ ಅಥವಾ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಇಂತಹ ಚರ್ಚೆಗೆ ಅವಕಾಶ ನೀಡದೆ ಸರ್ಕಾರ ತರಲು ಉದ್ದೇಶಿಸಿರುವ ಭೂಸುಧಾರಣಾ ಕಾಯ್ದೆ ಬಾಲಿಶವಾಗಿರುತ್ತವೆ ಎಂದು ಪ್ರತಿಭಟನಾಕಾರರು ದೂರಿದರು.
ಕಲಂಗಳನ್ನು ರದ್ದುಪಡಿಸಿದರೆ ಭೂಸುಧಾರಣಾ ಕಾಯ್ದೆಯ ಅಸ್ತಿತ್ವವೇ ಇರುವುದಿಲ್ಲ. ಕಾಯ್ದೆಯ ಮೂಲ ಉದ್ದೇಶ ಉಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ಈ ತಿದ್ದುಪಡಿ ತಿಲಾಂಜಲಿ ಇಡಲಿದೆ. ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಜಾಸ್ತಿ ಇದ್ದು ಅವರ ಸಂಪೂರ್ಣ ಬದುಕು ಬೀದಿಗೆ ಬೀಳಲಿದೆ. ರೈತರ ಅಸ್ತಿತ್ವವೇ ಇಲ್ಲವಾಗಲಿದೆ.. ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ದಲಿತರು ಅತ್ಯಂತ ಸಂಕಷ್ಟಕ್ಕೆ ಈಡಾಗುತ್ತಾರೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಿಗರ ಕೃಷಿ ಸಂಸ್ಕೃತಿ ಬೆಳೆಯುತ್ತದೆ ಮತ್ತು ಸಮಾಜದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ ಎಂದು ಆರೋಪಿಸಿದರು.

ತಿದ್ದುಪಡಿಯಿಂದ ಆಹಾರ ಸಾರ್ವಭೌಮತ್ವಕ್ಕೆ ಪೆಟ್ಟು ಬಿದ್ದು ಆಹಾರ ಭದ್ರತೆಯ ಹಕ್ಕು ನಾಶವಾಗುತ್ತದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮಾನೋಕಲ್ಚರ್‌ಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗುತ್ತದೆ. ಇದರಿಂದ ಆಹಾರ ಸಂಸ್ಕಂತಿಗೆ ಪೆಟ್ಟು ಬೀಳುತ್ತದೆ ಎಂದು ಆಪಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ, ಎಐಕೆಎಸ್, ದಲಿತ ಸಂಘರ್ಷ ಸಮಿತಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮುಖಂಡ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ದು ಹೇಳಿ ಬೇಸರದಿಂದಲೇ ಅಲ್ಲಿಂದ ತೆರಳಿದರು. ಇದೇ ವೇಳೆ ಸಂಸದ  ಅವರಿಗೂ ಮನವಿ ಸಲ್ಲಿಸಲಾಯಿತು. ಪಾರ್ಲಿಮೆಂಟ್ ನಲ್ಲಿ ಚರ್ಚಿಸುತ್ತೇನೆ. ಪ್ರಧಾನಿಗಳ ಗಮನ ಸೆಳೆಯುತ್ತೇನೆ ಎಂದು ಬಸವರಾಜು ರೈತ ಮುಖಂಡರಿಗೆ ಭರವಸೆ ನೀಡಿದರು.


ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...