Homeಕರ್ನಾಟಕಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

- Advertisement -
- Advertisement -

ಭೂಸುಧಾರಣಾ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ತುಮಕೂರಿನಲ್ಲಿ ವರದಿಯಾಗಿದೆ. ನಿಮ್ಮದೇ ಸರ್ಕಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ರೈತ ಮುಖಂಡರ ಪ್ರಶ್ನೆ ಸಚಿವರು ಕೆರಳಿದರು. ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಲಾರದೆ ಸಚಿವರು ಬೇಸರಗೊಂಡು ಕಾರಿನಲ್ಲಿ ಹೋಗಿ ಕುಳಿತ ಘಟನೆ ಜರುಗಿದೆ.

ರೈತ ಮುಖಂಡರು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದಾಗ ಸಚಿವರು ಸಿಡಿಮಿಡಿ ವ್ಯಕ್ತಪಡಿಸಿದರು. ಆಗ ಮಾತಿಗೆ ಮಾತು ಬೆಳೆಯಿತು. ಪ್ರತಿಭಟನಾನಿರತ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಪ್ರತಿಭಟನಾರರು ದಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಹೊರಟು ಹೋದರು. ಮತ್ತೆ ಸಚಿವರನ್ನು ಸಮಾಧಾನಪಡಿ ಅಧಿಕಾರಿಗಳು ಕರೆತಂದರು. ಸಚಿವರು ಹಠಕ್ಕೆ ಬಿದ್ದಂತೆ ತನ್ನ ಪಟ್ಟನ್ನು ಸಡಿಸಲೇ ಇಲ್ಲ. ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಳಿ ಬಂದಾಗ ಈ ಘಟನೆ ಜರುಗಿದೆ.

ಭೂಸುಧಾರಣೆ ಕಾಯ್ದೆ 1961ಕ್ಕೆ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ,ಬಿ,ಸಿ ಮತ್ತು 63 ಹಾಗೂ 80ನ್ನು ತೆಗೆದಹಾಕುವ ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದನ್ನು ವಿರೋಧಿಸಿ ಹಲವು ರೈತ ಸಂಘಟನೆಗಳು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದವು.

ಯಾವುದೇ ತಿದ್ದುಪಡಿ ಅಥವಾ ಕಾಯ್ದೆ ರೂಪಿಸಲು ಸಾರ್ವಜನಿಕರ ಒಳಿತು ಅದರಲ್ಲಿ ಅಡಕವಾಗಿರಬೇಕು. ಅದನ್ನು ಜನಸಮುದಾಯ ಒಪ್ಪುವಂತಿರಬೇಕು, ಅದು ಸಮರ್ಥನೀಯವಾಗಿರಬೇಕು. ಅಂತಹ ಕಾಯ್ದೆ ಅಥವಾ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಇಂತಹ ಚರ್ಚೆಗೆ ಅವಕಾಶ ನೀಡದೆ ಸರ್ಕಾರ ತರಲು ಉದ್ದೇಶಿಸಿರುವ ಭೂಸುಧಾರಣಾ ಕಾಯ್ದೆ ಬಾಲಿಶವಾಗಿರುತ್ತವೆ ಎಂದು ಪ್ರತಿಭಟನಾಕಾರರು ದೂರಿದರು.
ಕಲಂಗಳನ್ನು ರದ್ದುಪಡಿಸಿದರೆ ಭೂಸುಧಾರಣಾ ಕಾಯ್ದೆಯ ಅಸ್ತಿತ್ವವೇ ಇರುವುದಿಲ್ಲ. ಕಾಯ್ದೆಯ ಮೂಲ ಉದ್ದೇಶ ಉಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ಈ ತಿದ್ದುಪಡಿ ತಿಲಾಂಜಲಿ ಇಡಲಿದೆ. ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಜಾಸ್ತಿ ಇದ್ದು ಅವರ ಸಂಪೂರ್ಣ ಬದುಕು ಬೀದಿಗೆ ಬೀಳಲಿದೆ. ರೈತರ ಅಸ್ತಿತ್ವವೇ ಇಲ್ಲವಾಗಲಿದೆ.. ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ದಲಿತರು ಅತ್ಯಂತ ಸಂಕಷ್ಟಕ್ಕೆ ಈಡಾಗುತ್ತಾರೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಿಗರ ಕೃಷಿ ಸಂಸ್ಕೃತಿ ಬೆಳೆಯುತ್ತದೆ ಮತ್ತು ಸಮಾಜದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ ಎಂದು ಆರೋಪಿಸಿದರು.

ತಿದ್ದುಪಡಿಯಿಂದ ಆಹಾರ ಸಾರ್ವಭೌಮತ್ವಕ್ಕೆ ಪೆಟ್ಟು ಬಿದ್ದು ಆಹಾರ ಭದ್ರತೆಯ ಹಕ್ಕು ನಾಶವಾಗುತ್ತದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮಾನೋಕಲ್ಚರ್‌ಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗುತ್ತದೆ. ಇದರಿಂದ ಆಹಾರ ಸಂಸ್ಕಂತಿಗೆ ಪೆಟ್ಟು ಬೀಳುತ್ತದೆ ಎಂದು ಆಪಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ, ಎಐಕೆಎಸ್, ದಲಿತ ಸಂಘರ್ಷ ಸಮಿತಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮುಖಂಡ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ದು ಹೇಳಿ ಬೇಸರದಿಂದಲೇ ಅಲ್ಲಿಂದ ತೆರಳಿದರು. ಇದೇ ವೇಳೆ ಸಂಸದ  ಅವರಿಗೂ ಮನವಿ ಸಲ್ಲಿಸಲಾಯಿತು. ಪಾರ್ಲಿಮೆಂಟ್ ನಲ್ಲಿ ಚರ್ಚಿಸುತ್ತೇನೆ. ಪ್ರಧಾನಿಗಳ ಗಮನ ಸೆಳೆಯುತ್ತೇನೆ ಎಂದು ಬಸವರಾಜು ರೈತ ಮುಖಂಡರಿಗೆ ಭರವಸೆ ನೀಡಿದರು.


ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...