Homeಕರ್ನಾಟಕಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

- Advertisement -
- Advertisement -

ಭೂಸುಧಾರಣಾ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ತುಮಕೂರಿನಲ್ಲಿ ವರದಿಯಾಗಿದೆ. ನಿಮ್ಮದೇ ಸರ್ಕಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ರೈತ ಮುಖಂಡರ ಪ್ರಶ್ನೆ ಸಚಿವರು ಕೆರಳಿದರು. ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಲಾರದೆ ಸಚಿವರು ಬೇಸರಗೊಂಡು ಕಾರಿನಲ್ಲಿ ಹೋಗಿ ಕುಳಿತ ಘಟನೆ ಜರುಗಿದೆ.

ರೈತ ಮುಖಂಡರು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದಾಗ ಸಚಿವರು ಸಿಡಿಮಿಡಿ ವ್ಯಕ್ತಪಡಿಸಿದರು. ಆಗ ಮಾತಿಗೆ ಮಾತು ಬೆಳೆಯಿತು. ಪ್ರತಿಭಟನಾನಿರತ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಪ್ರತಿಭಟನಾರರು ದಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಹೊರಟು ಹೋದರು. ಮತ್ತೆ ಸಚಿವರನ್ನು ಸಮಾಧಾನಪಡಿ ಅಧಿಕಾರಿಗಳು ಕರೆತಂದರು. ಸಚಿವರು ಹಠಕ್ಕೆ ಬಿದ್ದಂತೆ ತನ್ನ ಪಟ್ಟನ್ನು ಸಡಿಸಲೇ ಇಲ್ಲ. ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಳಿ ಬಂದಾಗ ಈ ಘಟನೆ ಜರುಗಿದೆ.

ಭೂಸುಧಾರಣೆ ಕಾಯ್ದೆ 1961ಕ್ಕೆ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ,ಬಿ,ಸಿ ಮತ್ತು 63 ಹಾಗೂ 80ನ್ನು ತೆಗೆದಹಾಕುವ ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದನ್ನು ವಿರೋಧಿಸಿ ಹಲವು ರೈತ ಸಂಘಟನೆಗಳು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದವು.

ಯಾವುದೇ ತಿದ್ದುಪಡಿ ಅಥವಾ ಕಾಯ್ದೆ ರೂಪಿಸಲು ಸಾರ್ವಜನಿಕರ ಒಳಿತು ಅದರಲ್ಲಿ ಅಡಕವಾಗಿರಬೇಕು. ಅದನ್ನು ಜನಸಮುದಾಯ ಒಪ್ಪುವಂತಿರಬೇಕು, ಅದು ಸಮರ್ಥನೀಯವಾಗಿರಬೇಕು. ಅಂತಹ ಕಾಯ್ದೆ ಅಥವಾ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಇಂತಹ ಚರ್ಚೆಗೆ ಅವಕಾಶ ನೀಡದೆ ಸರ್ಕಾರ ತರಲು ಉದ್ದೇಶಿಸಿರುವ ಭೂಸುಧಾರಣಾ ಕಾಯ್ದೆ ಬಾಲಿಶವಾಗಿರುತ್ತವೆ ಎಂದು ಪ್ರತಿಭಟನಾಕಾರರು ದೂರಿದರು.
ಕಲಂಗಳನ್ನು ರದ್ದುಪಡಿಸಿದರೆ ಭೂಸುಧಾರಣಾ ಕಾಯ್ದೆಯ ಅಸ್ತಿತ್ವವೇ ಇರುವುದಿಲ್ಲ. ಕಾಯ್ದೆಯ ಮೂಲ ಉದ್ದೇಶ ಉಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ಈ ತಿದ್ದುಪಡಿ ತಿಲಾಂಜಲಿ ಇಡಲಿದೆ. ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಜಾಸ್ತಿ ಇದ್ದು ಅವರ ಸಂಪೂರ್ಣ ಬದುಕು ಬೀದಿಗೆ ಬೀಳಲಿದೆ. ರೈತರ ಅಸ್ತಿತ್ವವೇ ಇಲ್ಲವಾಗಲಿದೆ.. ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ದಲಿತರು ಅತ್ಯಂತ ಸಂಕಷ್ಟಕ್ಕೆ ಈಡಾಗುತ್ತಾರೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಿಗರ ಕೃಷಿ ಸಂಸ್ಕೃತಿ ಬೆಳೆಯುತ್ತದೆ ಮತ್ತು ಸಮಾಜದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ ಎಂದು ಆರೋಪಿಸಿದರು.

ತಿದ್ದುಪಡಿಯಿಂದ ಆಹಾರ ಸಾರ್ವಭೌಮತ್ವಕ್ಕೆ ಪೆಟ್ಟು ಬಿದ್ದು ಆಹಾರ ಭದ್ರತೆಯ ಹಕ್ಕು ನಾಶವಾಗುತ್ತದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮಾನೋಕಲ್ಚರ್‌ಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗುತ್ತದೆ. ಇದರಿಂದ ಆಹಾರ ಸಂಸ್ಕಂತಿಗೆ ಪೆಟ್ಟು ಬೀಳುತ್ತದೆ ಎಂದು ಆಪಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ, ಎಐಕೆಎಸ್, ದಲಿತ ಸಂಘರ್ಷ ಸಮಿತಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮುಖಂಡ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ದು ಹೇಳಿ ಬೇಸರದಿಂದಲೇ ಅಲ್ಲಿಂದ ತೆರಳಿದರು. ಇದೇ ವೇಳೆ ಸಂಸದ  ಅವರಿಗೂ ಮನವಿ ಸಲ್ಲಿಸಲಾಯಿತು. ಪಾರ್ಲಿಮೆಂಟ್ ನಲ್ಲಿ ಚರ್ಚಿಸುತ್ತೇನೆ. ಪ್ರಧಾನಿಗಳ ಗಮನ ಸೆಳೆಯುತ್ತೇನೆ ಎಂದು ಬಸವರಾಜು ರೈತ ಮುಖಂಡರಿಗೆ ಭರವಸೆ ನೀಡಿದರು.


ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...