Homeಕರ್ನಾಟಕಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

- Advertisement -
- Advertisement -

ಭೂಸುಧಾರಣಾ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ತುಮಕೂರಿನಲ್ಲಿ ವರದಿಯಾಗಿದೆ. ನಿಮ್ಮದೇ ಸರ್ಕಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ರೈತ ಮುಖಂಡರ ಪ್ರಶ್ನೆ ಸಚಿವರು ಕೆರಳಿದರು. ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಲಾರದೆ ಸಚಿವರು ಬೇಸರಗೊಂಡು ಕಾರಿನಲ್ಲಿ ಹೋಗಿ ಕುಳಿತ ಘಟನೆ ಜರುಗಿದೆ.

ರೈತ ಮುಖಂಡರು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದಾಗ ಸಚಿವರು ಸಿಡಿಮಿಡಿ ವ್ಯಕ್ತಪಡಿಸಿದರು. ಆಗ ಮಾತಿಗೆ ಮಾತು ಬೆಳೆಯಿತು. ಪ್ರತಿಭಟನಾನಿರತ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಪ್ರತಿಭಟನಾರರು ದಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಹೊರಟು ಹೋದರು. ಮತ್ತೆ ಸಚಿವರನ್ನು ಸಮಾಧಾನಪಡಿ ಅಧಿಕಾರಿಗಳು ಕರೆತಂದರು. ಸಚಿವರು ಹಠಕ್ಕೆ ಬಿದ್ದಂತೆ ತನ್ನ ಪಟ್ಟನ್ನು ಸಡಿಸಲೇ ಇಲ್ಲ. ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಳಿ ಬಂದಾಗ ಈ ಘಟನೆ ಜರುಗಿದೆ.

ಭೂಸುಧಾರಣೆ ಕಾಯ್ದೆ 1961ಕ್ಕೆ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ,ಬಿ,ಸಿ ಮತ್ತು 63 ಹಾಗೂ 80ನ್ನು ತೆಗೆದಹಾಕುವ ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದನ್ನು ವಿರೋಧಿಸಿ ಹಲವು ರೈತ ಸಂಘಟನೆಗಳು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದವು.

ಯಾವುದೇ ತಿದ್ದುಪಡಿ ಅಥವಾ ಕಾಯ್ದೆ ರೂಪಿಸಲು ಸಾರ್ವಜನಿಕರ ಒಳಿತು ಅದರಲ್ಲಿ ಅಡಕವಾಗಿರಬೇಕು. ಅದನ್ನು ಜನಸಮುದಾಯ ಒಪ್ಪುವಂತಿರಬೇಕು, ಅದು ಸಮರ್ಥನೀಯವಾಗಿರಬೇಕು. ಅಂತಹ ಕಾಯ್ದೆ ಅಥವಾ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಇಂತಹ ಚರ್ಚೆಗೆ ಅವಕಾಶ ನೀಡದೆ ಸರ್ಕಾರ ತರಲು ಉದ್ದೇಶಿಸಿರುವ ಭೂಸುಧಾರಣಾ ಕಾಯ್ದೆ ಬಾಲಿಶವಾಗಿರುತ್ತವೆ ಎಂದು ಪ್ರತಿಭಟನಾಕಾರರು ದೂರಿದರು.
ಕಲಂಗಳನ್ನು ರದ್ದುಪಡಿಸಿದರೆ ಭೂಸುಧಾರಣಾ ಕಾಯ್ದೆಯ ಅಸ್ತಿತ್ವವೇ ಇರುವುದಿಲ್ಲ. ಕಾಯ್ದೆಯ ಮೂಲ ಉದ್ದೇಶ ಉಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ಈ ತಿದ್ದುಪಡಿ ತಿಲಾಂಜಲಿ ಇಡಲಿದೆ. ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಜಾಸ್ತಿ ಇದ್ದು ಅವರ ಸಂಪೂರ್ಣ ಬದುಕು ಬೀದಿಗೆ ಬೀಳಲಿದೆ. ರೈತರ ಅಸ್ತಿತ್ವವೇ ಇಲ್ಲವಾಗಲಿದೆ.. ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ದಲಿತರು ಅತ್ಯಂತ ಸಂಕಷ್ಟಕ್ಕೆ ಈಡಾಗುತ್ತಾರೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಿಗರ ಕೃಷಿ ಸಂಸ್ಕೃತಿ ಬೆಳೆಯುತ್ತದೆ ಮತ್ತು ಸಮಾಜದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ ಎಂದು ಆರೋಪಿಸಿದರು.

ತಿದ್ದುಪಡಿಯಿಂದ ಆಹಾರ ಸಾರ್ವಭೌಮತ್ವಕ್ಕೆ ಪೆಟ್ಟು ಬಿದ್ದು ಆಹಾರ ಭದ್ರತೆಯ ಹಕ್ಕು ನಾಶವಾಗುತ್ತದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮಾನೋಕಲ್ಚರ್‌ಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗುತ್ತದೆ. ಇದರಿಂದ ಆಹಾರ ಸಂಸ್ಕಂತಿಗೆ ಪೆಟ್ಟು ಬೀಳುತ್ತದೆ ಎಂದು ಆಪಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ, ಎಐಕೆಎಸ್, ದಲಿತ ಸಂಘರ್ಷ ಸಮಿತಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮುಖಂಡ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ದು ಹೇಳಿ ಬೇಸರದಿಂದಲೇ ಅಲ್ಲಿಂದ ತೆರಳಿದರು. ಇದೇ ವೇಳೆ ಸಂಸದ  ಅವರಿಗೂ ಮನವಿ ಸಲ್ಲಿಸಲಾಯಿತು. ಪಾರ್ಲಿಮೆಂಟ್ ನಲ್ಲಿ ಚರ್ಚಿಸುತ್ತೇನೆ. ಪ್ರಧಾನಿಗಳ ಗಮನ ಸೆಳೆಯುತ್ತೇನೆ ಎಂದು ಬಸವರಾಜು ರೈತ ಮುಖಂಡರಿಗೆ ಭರವಸೆ ನೀಡಿದರು.


ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...