Homeಕರ್ನಾಟಕಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

ಭೂಸುಗ್ರೀವಾಜ್ಞೆ ವಿರೋಧಿಸಿ ಪ್ರತಿಭಟನೆ: ರೈತಮುಖಂಡರೊಂದಿಗೆ ಮಾಧುಸ್ವಾಮಿ ಮಾತಿನ ಚಕಮಕಿ

- Advertisement -
- Advertisement -

ಭೂಸುಧಾರಣಾ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು ಮತ್ತು ಸಚಿವ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ತುಮಕೂರಿನಲ್ಲಿ ವರದಿಯಾಗಿದೆ. ನಿಮ್ಮದೇ ಸರ್ಕಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ರೈತ ಮುಖಂಡರ ಪ್ರಶ್ನೆ ಸಚಿವರು ಕೆರಳಿದರು. ರೈತ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಲಾರದೆ ಸಚಿವರು ಬೇಸರಗೊಂಡು ಕಾರಿನಲ್ಲಿ ಹೋಗಿ ಕುಳಿತ ಘಟನೆ ಜರುಗಿದೆ.

ರೈತ ಮುಖಂಡರು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದಾಗ ಸಚಿವರು ಸಿಡಿಮಿಡಿ ವ್ಯಕ್ತಪಡಿಸಿದರು. ಆಗ ಮಾತಿಗೆ ಮಾತು ಬೆಳೆಯಿತು. ಪ್ರತಿಭಟನಾನಿರತ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಪ್ರತಿಭಟನಾರರು ದಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಹೊರಟು ಹೋದರು. ಮತ್ತೆ ಸಚಿವರನ್ನು ಸಮಾಧಾನಪಡಿ ಅಧಿಕಾರಿಗಳು ಕರೆತಂದರು. ಸಚಿವರು ಹಠಕ್ಕೆ ಬಿದ್ದಂತೆ ತನ್ನ ಪಟ್ಟನ್ನು ಸಡಿಸಲೇ ಇಲ್ಲ. ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಬಳಿ ಬಂದಾಗ ಈ ಘಟನೆ ಜರುಗಿದೆ.

ಭೂಸುಧಾರಣೆ ಕಾಯ್ದೆ 1961ಕ್ಕೆ ತಿದ್ದುಪಡಿ ತಂದು ಕಾಯ್ದೆ ಕಲಂ 79 ಎ,ಬಿ,ಸಿ ಮತ್ತು 63 ಹಾಗೂ 80ನ್ನು ತೆಗೆದಹಾಕುವ ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿರುವುದನ್ನು ವಿರೋಧಿಸಿ ಹಲವು ರೈತ ಸಂಘಟನೆಗಳು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದವು.

ಯಾವುದೇ ತಿದ್ದುಪಡಿ ಅಥವಾ ಕಾಯ್ದೆ ರೂಪಿಸಲು ಸಾರ್ವಜನಿಕರ ಒಳಿತು ಅದರಲ್ಲಿ ಅಡಕವಾಗಿರಬೇಕು. ಅದನ್ನು ಜನಸಮುದಾಯ ಒಪ್ಪುವಂತಿರಬೇಕು, ಅದು ಸಮರ್ಥನೀಯವಾಗಿರಬೇಕು. ಅಂತಹ ಕಾಯ್ದೆ ಅಥವಾ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಇಂತಹ ಚರ್ಚೆಗೆ ಅವಕಾಶ ನೀಡದೆ ಸರ್ಕಾರ ತರಲು ಉದ್ದೇಶಿಸಿರುವ ಭೂಸುಧಾರಣಾ ಕಾಯ್ದೆ ಬಾಲಿಶವಾಗಿರುತ್ತವೆ ಎಂದು ಪ್ರತಿಭಟನಾಕಾರರು ದೂರಿದರು.
ಕಲಂಗಳನ್ನು ರದ್ದುಪಡಿಸಿದರೆ ಭೂಸುಧಾರಣಾ ಕಾಯ್ದೆಯ ಅಸ್ತಿತ್ವವೇ ಇರುವುದಿಲ್ಲ. ಕಾಯ್ದೆಯ ಮೂಲ ಉದ್ದೇಶ ಉಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ಈ ತಿದ್ದುಪಡಿ ತಿಲಾಂಜಲಿ ಇಡಲಿದೆ. ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುತ್ತದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಜಾಸ್ತಿ ಇದ್ದು ಅವರ ಸಂಪೂರ್ಣ ಬದುಕು ಬೀದಿಗೆ ಬೀಳಲಿದೆ. ರೈತರ ಅಸ್ತಿತ್ವವೇ ಇಲ್ಲವಾಗಲಿದೆ.. ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ದಲಿತರು ಅತ್ಯಂತ ಸಂಕಷ್ಟಕ್ಕೆ ಈಡಾಗುತ್ತಾರೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಿಗರ ಕೃಷಿ ಸಂಸ್ಕೃತಿ ಬೆಳೆಯುತ್ತದೆ ಮತ್ತು ಸಮಾಜದಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ ಎಂದು ಆರೋಪಿಸಿದರು.

ತಿದ್ದುಪಡಿಯಿಂದ ಆಹಾರ ಸಾರ್ವಭೌಮತ್ವಕ್ಕೆ ಪೆಟ್ಟು ಬಿದ್ದು ಆಹಾರ ಭದ್ರತೆಯ ಹಕ್ಕು ನಾಶವಾಗುತ್ತದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮಾನೋಕಲ್ಚರ್‌ಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗುತ್ತದೆ. ಇದರಿಂದ ಆಹಾರ ಸಂಸ್ಕಂತಿಗೆ ಪೆಟ್ಟು ಬೀಳುತ್ತದೆ ಎಂದು ಆಪಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಎಐಕೆಎಸ್ ಸಿಸಿ, ಎಐಕೆಎಸ್, ದಲಿತ ಸಂಘರ್ಷ ಸಮಿತಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮುಖಂಡ ಅಹವಾಲುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ದು ಹೇಳಿ ಬೇಸರದಿಂದಲೇ ಅಲ್ಲಿಂದ ತೆರಳಿದರು. ಇದೇ ವೇಳೆ ಸಂಸದ  ಅವರಿಗೂ ಮನವಿ ಸಲ್ಲಿಸಲಾಯಿತು. ಪಾರ್ಲಿಮೆಂಟ್ ನಲ್ಲಿ ಚರ್ಚಿಸುತ್ತೇನೆ. ಪ್ರಧಾನಿಗಳ ಗಮನ ಸೆಳೆಯುತ್ತೇನೆ ಎಂದು ಬಸವರಾಜು ರೈತ ಮುಖಂಡರಿಗೆ ಭರವಸೆ ನೀಡಿದರು.


ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...