Homeಮುಖಪುಟದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

ದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

"ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ - ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ!" ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

- Advertisement -
- Advertisement -

“ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ – ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ! ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸಿಕೊಳ್ಳೋಣ ಬನ್ನಿ. ದ್ವೇಷ ಸಾಕು, ಪ್ರೀತಿ ಬೇಕು. ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ”.. ಇವಿಷ್ಟು ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮತೀಯ ಗೂಂಡಾಗಿರಿ ಮತ್ತು ಅದನ್ನು ಸಮರ್ಥಿಸಿಕೊಳ್ಳುವ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಂಡುಬಂದ ಮತ್ತು ಕೇಳಿಬಂದ ಘೋಷಣೆಗಳು.

ಕ್ರಿಯೆಗೆ ಪ್ರತಿಕ್ರಿಯೆ ಕೊಡುವುದು ವಿನಾಶಕ್ಕೆ ಕರೆದೊಯ್ಯುತ್ತದೆ. ಬಸವಣ್ಣನನ್ನೆ ಮರೆತ ಬೊಮ್ಮಾಯಿ, ಸಾಂವಿಧಾನಿಕ ಮೌಲ್ಯಗಳನ್ನು ಮರೆತ ಮುಖ್ಯಮಂತ್ರಿ. ಜಾತಿ ಧರ್ಮದ ಹೆಸರಿನಲ್ಲಿ ಕಗ್ಗೊಲೆ ಸಾಕು ಎಂಬ ಘೋಷಣೆಗಳ ಮೂಲಕ ನೂರಾರು ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರಾದ ವಿನಯ್ ಶ್ರೀನಿವಾಸ್, “ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಸಂವಿಧಾನದ ಮೇಲೆ ಪ್ರಮಾಣ ಮಾಡಿದರು. ನನ್ನ ಬದ್ಧತೆ ಸಂವಿಧಾನಕ್ಕೆ, ಈ ನಾಡಿನಲ್ಲಿ ಯಾವುದೇ ಒಂದು ವರ್ಗಕ್ಕೆ ಒಲವು ತೋರಿಸದೆ ಎಲ್ಲ ವರ್ಗಕ್ಕೂ ನ್ಯಾಯ ಸಿಗುವಂತೆ ಆಡಳಿತ ನಡೆಸುತ್ತೇನೆ, ಸಂವಿಧಾನದ ಮೌಲ್ಯಗಳಿಗೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಆದರೆ ಅವು ಇಂದು ಮಾಡುತ್ತಿರುವುದು ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಯುವಕ-ಯುವತಿಯರು ಒಂದು ಐಸ್ ಕ್ರೀಂ ತಿನ್ನಲು ಸಹ ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಜಾತಿ-ಧರ್ಮ ನೋಡಲಾಗುತ್ತಿದೆ. ಬಜರಂಗದಳ, ವಿಎಚ್‌ಪಿ ಗೂಂಡಾಗಳ ಕಿರುಕುಳದಿಂದ ಯುವಕ ಯುವತಿಯರು ತಮ್ಮಿಷ್ಟ ಬಂದವರ ಜೊತೆ ಸ್ನೇಹ ಮಾಡುವಂತಿಲ್ಲ, ಅವರಿಗೆ ತಮಗಿಷ್ಟ ಬಂದವರನ್ನು ಪ್ರೀತಿ ಮಾಡುವ ಹಕ್ಕಿಲ್ಲದಂತಹ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್


ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹ ಅಗತ್ಯ ಎಂದಿದ್ದರು. ಆದರೆ ಇಂದು ಅಂತರ್ಜಾತಿ ಮದುವೆಗೆ ಕಲ್ಲು ಹಾಕುತ್ತಿದ್ದಾರೆ. ಜನರ ನಡುವೆ ಜಾತಿ ಧರ್ಮದ ಗೋಡೆ ಕಟ್ಟುತ್ತಿದ್ದಾರೆ. ಮಹಿಳೆಯರ ಮೇಲೆ ದಾಳಿ ಅವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರು ಯಾರೊಂದಿಗೆ ಸ್ನೇಹ ಮಾಡಬೇಕು, ಯಾರೊಂದಿಗೆ ಮದುವೆಯಾಗಬೇಕು ಎಂಬುದನ್ನು ನಿಯಂತ್ರಿಸುತ್ತಿದ್ದಾರೆ. ಏಕೆ ಮಹಿಳೆಯರಿಗೆ ಜ್ಞಾನವಿಲ್ಲವೇ? ಸ್ವಾತಂತ್ರ್ಯವಿಲ್ಲವೇ? ಮಹಿಳೆಯರು ಏನು ಮಾಡಬೇಕೆಂದು ತೀರ್ಮಾನಿಸಲು ಇವರ್ಯಾರು ಎಂದು ಕಿಡಿಕಾರಿದರು.

ನಿಮ್ ತಲೇಲಿ ಬೂಸಾ ತುಂಬಿಕೊಂಡಿದೆ. ನೀವು ಬೇರೆಯವರಿಗೆ ಪಾಠ ಮಾಡಬೇಡಿ. ಕರ್ನಾಟಕದಲ್ಲಿ ದ್ವೇಷ ತುಂಬಿಸುತ್ತಿದ್ದಾರೆ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಅಪೌಷ್ಠಿಕತೆ ತುಂಬಿಕೊಂಡಿದೆ. ಇದರ ಬಗ್ಗೆ ಸಮೀಕ್ಷೆ ಮಾಡಲು ಯಾರು ಮುಂದೆ ಬಂದಿಲ್ಲ, ಆದರೆ ಚರ್ಚ್‌ಗಳ ಸಮೀಕ್ಷೆ ಮಾಡುತ್ತೇವೆ, ಅಲ್ಲಿ ಮತಾಂತರ ತಡೆಯುತ್ತೇವೆ ಎಂದು ಗೂಂಡಾಗಿರಿ ಮಾಡುತ್ತಿದ್ದಾರೆ. ಇವರು ಅಶ್ಪೃಶ್ಯತೆ ನಿಲ್ಲಿಸಲು, ದಲಿತರ ಮೇಲೆ ದೌರ್ಜನ್ಯ ತಡೆಗಟ್ಟಲು ಏನು ಮಾಡಿದ್ದಾರೆ? ಬೆಂಗಳೂರಿನಲ್ಲಿ ಸ್ಲಂ ಜನರಿಗೆ ಏನು ಸಹಾಯ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಲು ತಾವು ಹೇಳಿದ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು. ರಾಜ್ಯ ಸರ್ಕಾರವು ಸಂವಿಧಾನವನ್ನು ಎತ್ತಿಹಿಡಿಲಾಗುತ್ತೆಂದು ಹಾಗೂ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಮತ್ತು ಅಂತಹ ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುವುದೆಂದು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ವೋಚ್ಛ ನ್ಯಾಯಾಲಯವು ಅಂತರ್ಜಾತಿ ಮತ್ತು ಅಂತರ್‌ ಧರ್ಮೀಐ ವಿವಾಹಗಳನ್ನು ರಕ್ಷಿಸಲು ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಅಂತಹ ವಿವಾಹಿತ ವ್ಯಕ್ತಿಗಳ ವಿರುದ್ಧ ನಡೆಯುವ ಹಿಂಸೆ, ಮರ್ಯಾದಾ ಹತ್ಯೆಗಳು ಮತ್ತು “ನೈತಿಕ ಪೊಲೀಸ್‌ಗಿರಿ” ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮಗಳನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಭಾಗವಹಿಸಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...