Homeಮುಖಪುಟದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

ದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

"ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ - ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ!" ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

- Advertisement -
- Advertisement -

“ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ – ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ! ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸಿಕೊಳ್ಳೋಣ ಬನ್ನಿ. ದ್ವೇಷ ಸಾಕು, ಪ್ರೀತಿ ಬೇಕು. ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ”.. ಇವಿಷ್ಟು ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮತೀಯ ಗೂಂಡಾಗಿರಿ ಮತ್ತು ಅದನ್ನು ಸಮರ್ಥಿಸಿಕೊಳ್ಳುವ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಂಡುಬಂದ ಮತ್ತು ಕೇಳಿಬಂದ ಘೋಷಣೆಗಳು.

ಕ್ರಿಯೆಗೆ ಪ್ರತಿಕ್ರಿಯೆ ಕೊಡುವುದು ವಿನಾಶಕ್ಕೆ ಕರೆದೊಯ್ಯುತ್ತದೆ. ಬಸವಣ್ಣನನ್ನೆ ಮರೆತ ಬೊಮ್ಮಾಯಿ, ಸಾಂವಿಧಾನಿಕ ಮೌಲ್ಯಗಳನ್ನು ಮರೆತ ಮುಖ್ಯಮಂತ್ರಿ. ಜಾತಿ ಧರ್ಮದ ಹೆಸರಿನಲ್ಲಿ ಕಗ್ಗೊಲೆ ಸಾಕು ಎಂಬ ಘೋಷಣೆಗಳ ಮೂಲಕ ನೂರಾರು ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರಾದ ವಿನಯ್ ಶ್ರೀನಿವಾಸ್, “ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಸಂವಿಧಾನದ ಮೇಲೆ ಪ್ರಮಾಣ ಮಾಡಿದರು. ನನ್ನ ಬದ್ಧತೆ ಸಂವಿಧಾನಕ್ಕೆ, ಈ ನಾಡಿನಲ್ಲಿ ಯಾವುದೇ ಒಂದು ವರ್ಗಕ್ಕೆ ಒಲವು ತೋರಿಸದೆ ಎಲ್ಲ ವರ್ಗಕ್ಕೂ ನ್ಯಾಯ ಸಿಗುವಂತೆ ಆಡಳಿತ ನಡೆಸುತ್ತೇನೆ, ಸಂವಿಧಾನದ ಮೌಲ್ಯಗಳಿಗೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಆದರೆ ಅವು ಇಂದು ಮಾಡುತ್ತಿರುವುದು ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಯುವಕ-ಯುವತಿಯರು ಒಂದು ಐಸ್ ಕ್ರೀಂ ತಿನ್ನಲು ಸಹ ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಜಾತಿ-ಧರ್ಮ ನೋಡಲಾಗುತ್ತಿದೆ. ಬಜರಂಗದಳ, ವಿಎಚ್‌ಪಿ ಗೂಂಡಾಗಳ ಕಿರುಕುಳದಿಂದ ಯುವಕ ಯುವತಿಯರು ತಮ್ಮಿಷ್ಟ ಬಂದವರ ಜೊತೆ ಸ್ನೇಹ ಮಾಡುವಂತಿಲ್ಲ, ಅವರಿಗೆ ತಮಗಿಷ್ಟ ಬಂದವರನ್ನು ಪ್ರೀತಿ ಮಾಡುವ ಹಕ್ಕಿಲ್ಲದಂತಹ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್


ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹ ಅಗತ್ಯ ಎಂದಿದ್ದರು. ಆದರೆ ಇಂದು ಅಂತರ್ಜಾತಿ ಮದುವೆಗೆ ಕಲ್ಲು ಹಾಕುತ್ತಿದ್ದಾರೆ. ಜನರ ನಡುವೆ ಜಾತಿ ಧರ್ಮದ ಗೋಡೆ ಕಟ್ಟುತ್ತಿದ್ದಾರೆ. ಮಹಿಳೆಯರ ಮೇಲೆ ದಾಳಿ ಅವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರು ಯಾರೊಂದಿಗೆ ಸ್ನೇಹ ಮಾಡಬೇಕು, ಯಾರೊಂದಿಗೆ ಮದುವೆಯಾಗಬೇಕು ಎಂಬುದನ್ನು ನಿಯಂತ್ರಿಸುತ್ತಿದ್ದಾರೆ. ಏಕೆ ಮಹಿಳೆಯರಿಗೆ ಜ್ಞಾನವಿಲ್ಲವೇ? ಸ್ವಾತಂತ್ರ್ಯವಿಲ್ಲವೇ? ಮಹಿಳೆಯರು ಏನು ಮಾಡಬೇಕೆಂದು ತೀರ್ಮಾನಿಸಲು ಇವರ್ಯಾರು ಎಂದು ಕಿಡಿಕಾರಿದರು.

ನಿಮ್ ತಲೇಲಿ ಬೂಸಾ ತುಂಬಿಕೊಂಡಿದೆ. ನೀವು ಬೇರೆಯವರಿಗೆ ಪಾಠ ಮಾಡಬೇಡಿ. ಕರ್ನಾಟಕದಲ್ಲಿ ದ್ವೇಷ ತುಂಬಿಸುತ್ತಿದ್ದಾರೆ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಅಪೌಷ್ಠಿಕತೆ ತುಂಬಿಕೊಂಡಿದೆ. ಇದರ ಬಗ್ಗೆ ಸಮೀಕ್ಷೆ ಮಾಡಲು ಯಾರು ಮುಂದೆ ಬಂದಿಲ್ಲ, ಆದರೆ ಚರ್ಚ್‌ಗಳ ಸಮೀಕ್ಷೆ ಮಾಡುತ್ತೇವೆ, ಅಲ್ಲಿ ಮತಾಂತರ ತಡೆಯುತ್ತೇವೆ ಎಂದು ಗೂಂಡಾಗಿರಿ ಮಾಡುತ್ತಿದ್ದಾರೆ. ಇವರು ಅಶ್ಪೃಶ್ಯತೆ ನಿಲ್ಲಿಸಲು, ದಲಿತರ ಮೇಲೆ ದೌರ್ಜನ್ಯ ತಡೆಗಟ್ಟಲು ಏನು ಮಾಡಿದ್ದಾರೆ? ಬೆಂಗಳೂರಿನಲ್ಲಿ ಸ್ಲಂ ಜನರಿಗೆ ಏನು ಸಹಾಯ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಲು ತಾವು ಹೇಳಿದ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು. ರಾಜ್ಯ ಸರ್ಕಾರವು ಸಂವಿಧಾನವನ್ನು ಎತ್ತಿಹಿಡಿಲಾಗುತ್ತೆಂದು ಹಾಗೂ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಮತ್ತು ಅಂತಹ ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುವುದೆಂದು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ವೋಚ್ಛ ನ್ಯಾಯಾಲಯವು ಅಂತರ್ಜಾತಿ ಮತ್ತು ಅಂತರ್‌ ಧರ್ಮೀಐ ವಿವಾಹಗಳನ್ನು ರಕ್ಷಿಸಲು ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಅಂತಹ ವಿವಾಹಿತ ವ್ಯಕ್ತಿಗಳ ವಿರುದ್ಧ ನಡೆಯುವ ಹಿಂಸೆ, ಮರ್ಯಾದಾ ಹತ್ಯೆಗಳು ಮತ್ತು “ನೈತಿಕ ಪೊಲೀಸ್‌ಗಿರಿ” ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮಗಳನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಭಾಗವಹಿಸಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...