Homeಕರ್ನಾಟಕಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

- Advertisement -
- Advertisement -

ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದ ಅವರು ಈಗ ಜನರ ಅಭಿಪ್ರಾಯ ಪಡೆದೇ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ. ಇದರಿಂದ ಮಸ್ಕಿ ಮತ್ತು ಸಿಂಧನೂರಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಪರ-ವಿರೋಧದ ಅಲೆಯೆದ್ದಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ನಾನು ಕ್ಷೇತ್ರದ ಜನರೊಡನೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಪಡೆದೇ ರಾಜೀನಾಮೆ ನೀಡಿದ್ದೇನೆ ಎಂದು ಹೊಸ ವರಸೆ ಶುರು ಮಾಡಿದ್ದಾರೆ. ಇದಕ್ಕೆ ಒಹೋ ಮುಂಬೈ ಹೋಟೆಲ್‍ನಿಂದಲೇ ಜನಾಭಿಪ್ರಾಯ ಪಡೆದಿದ್ದೀರಿ ಎಂದು ಅವರು ಎದುರು ಕೇವಲ 213 ಮತಗಳಿಂದ ಸೋತ ಬಿಜೆಪಿಯ ಆರ್ ಬಸವನಗೌಡ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಆರ್ ಬಸವನಗೌಡ

ಅಷ್ಟೇ ಅಲ್ಲದೇ ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋತ ಪ್ರತಾಪ್ ಗೌಡರು ಈಗ ಸೋಲಿನ ಭಯದಿಂದ, ಹಣದಾಸೆಯಿಂದ ರಾಜಿನಾಮೇ ನೀಡಿ ಬಿಜೆಪಿಯಿಂದ ಸ್ಪರ್ಧಿಸಲು ನೋಡುತ್ತಿದ್ದಾರೆ. ಮುಂದೆ ಅವರು ಗೆಲ್ಲುವದಿಲ್ಲ ಎಂದು ಅವರೇ ಹೇಳಿದ್ದಾರೆ, ಹಾಗಾಗಿ ತರಾತುರಿಯಲ್ಲಿ ಸಚಿವರಾಗಿ ದಿಢೀರ್ ದುಡ್ಡು ಮಾಡುವುದಕ್ಕೆ ಹೀಗೆಲ್ಲಾ ಆಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ಟಿಕೆಟ್ ನೀಡಬಾರದು. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೇಟ್ ನೀಡಬೇಕು, ನಾನು ಬಿಜೆಪಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಎಚ್ಚರಿಸಿದ್ದಾರೆ.

ಶಾಸಕರ ವಿರುದ್ಧ ಸಿಂಧನೂರಿನಲ್ಲಿ ಪ್ರತಿಭಟನೆ

ಇನ್ನೊಂದು ಕಡೆ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಸುಳ್ಳು ಹೇಳಿರುವ ಶಾಸಕ ಕ್ಷೇತ್ರಕ್ಕೆ ಬಂದು ಎಲ್ಲಿ, ಯಾರಿಂದ ಜನಾಭಿಪ್ರಾಯ ಸಂಗ್ರಹಿಸಿದ್ದೀರಿ ಎಂಬ ಮಾಹಿತಿ ನೀಡಬೇಕು. ಜನ ಮಸ್ಕಿಯಲ್ಲಿ ಬರದಿಂದ, ಕುಡಿಯುವ ನೀರಿಲ್ಲದೇ ಸಾಯುತ್ತಿದ್ದರೆ ಈ ಶಾಸಕರಿಗೆ ಹಣದ ಮದವೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಯುವಜನರು ಆರ್.ವೈ.ಎಫ್ ಮತ್ತು ಕೆ.ಆರ್.ಎಸ್ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಿಂಧನೂರಿನಲ್ಲಿ ಪ್ರತಾಪ್ ಗೌಡರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸತತ 3 ಬಾರಿ ಶಾಸಕರಾಗಿ 11 ವರ್ಷ ಆಳ್ವಿಕೆ ನಡೆಸಿದ್ದರೂ ಮಸ್ಕಿ ಕ್ಷೇತ್ರ ತೀರಾ ಹಿಂದುಳಿದಿದೆ, 50 ಕೋಟಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದಿವೆ, ಇದಕ್ಕೆಲ್ಲಾ ಶಾಸಕರೇ ಕಾರಣ ಎಂದು ಆರ್‍ವೈಎಫ್‍ನ ನಾಗರಾಜ್ ಪೂಜಾರ್ ಆರೋಪಿಸಿದ್ದಾರೆ.

ಮಂಗಳವಾರ ಪ್ರತಾಪ್ ಗೌಡ ಪಾಟೀಲರು ಮಾಧ್ಯಮದ ಎದುರು “ನಾನು ರಾಜೀನಾಮೆ ಕೊಡಬೇಕೆಂದು ಜನರೇ ಅಭಿಪ್ರಾಯ ನೀಡಿದ್ದಾರೆ, ನಾನು ಜನರ ತೀರ್ಪಿಗೆ ತಲೆಬಾಗಿದ್ದೇನೆ ಅಷ್ಟೇ, ನನ್ನ ವಿರುದ್ಧ ಮಾತಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆವೇಶಭರಿತವಾಗಿ ಮಾತನಾಡಿದ್ದರು”. ಅಷ್ಟೇ ಅಲ್ಲದೇ ಮುಂಬೈನಲ್ಲಿ ಕೆಲ ಶಾಸಕರು ಇಲ್ಲ ನಾವು ಕಾನೂನುಕ್ರಮಕ್ಕೆ ಒಳಗಾಗುವುದಕ್ಕಿಂತ ವಾಪಸ್ ಹೋಗಿಬಿಡೋಣ ಎಂದರೆ ಇಲ್ಲ ನಾವು ಇನ್ನು ಸ್ವಲ್ಪ ಕಾದುನೋಡೋಣ ಎಂದು ಪ್ರತಾಪ್ ಗೌಡರೇ ಉಳಿದ ಅತೃಪ್ತರನ್ನು ಸಮಾಧಾನಿಸಿದ್ದಾರಂತೆ.

ನಾಗರಾಜ್ ಪೂಜಾರ್

ಇದರಿಂದ ಸಿಟ್ಟಿಗೆದ್ದಿರುವ ಕ್ಷೇತ್ರದ ಜನತೆ ಒಂದು ತಿಂಗಳಿಂದ ಈ ಶಾಸಕರು ಕ್ಷೇತ್ರದ ಕಡೆ ಮುಖ ಹಾಕಿಲ್ಲ. ತಮ್ಮ ನಾಲ್ಕೈದು ಚೇಲಾಗಳ ಅಭಿಪ್ರಾಯ ಪಡೆದು ಅದನ್ನೇ ಇಡೀ ಕ್ಷೇತ್ರದ ಜನಾಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಾ ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಪ್ರತಾಪ್ ಗೌಡರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ, ಈ ಕುರಿತು ಸ್ಪೀಕರ್ ರವರಿಗೂ ದೂರು ಸಲ್ಲಿಸುತ್ತೇವೆ ಎಂದು ನಾಗರಾಜ್ ಪೂಜಾರ್ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...