Homeಕರ್ನಾಟಕಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

- Advertisement -
- Advertisement -

ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದ ಅವರು ಈಗ ಜನರ ಅಭಿಪ್ರಾಯ ಪಡೆದೇ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ. ಇದರಿಂದ ಮಸ್ಕಿ ಮತ್ತು ಸಿಂಧನೂರಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಪರ-ವಿರೋಧದ ಅಲೆಯೆದ್ದಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ನಾನು ಕ್ಷೇತ್ರದ ಜನರೊಡನೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಪಡೆದೇ ರಾಜೀನಾಮೆ ನೀಡಿದ್ದೇನೆ ಎಂದು ಹೊಸ ವರಸೆ ಶುರು ಮಾಡಿದ್ದಾರೆ. ಇದಕ್ಕೆ ಒಹೋ ಮುಂಬೈ ಹೋಟೆಲ್‍ನಿಂದಲೇ ಜನಾಭಿಪ್ರಾಯ ಪಡೆದಿದ್ದೀರಿ ಎಂದು ಅವರು ಎದುರು ಕೇವಲ 213 ಮತಗಳಿಂದ ಸೋತ ಬಿಜೆಪಿಯ ಆರ್ ಬಸವನಗೌಡ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಆರ್ ಬಸವನಗೌಡ

ಅಷ್ಟೇ ಅಲ್ಲದೇ ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋತ ಪ್ರತಾಪ್ ಗೌಡರು ಈಗ ಸೋಲಿನ ಭಯದಿಂದ, ಹಣದಾಸೆಯಿಂದ ರಾಜಿನಾಮೇ ನೀಡಿ ಬಿಜೆಪಿಯಿಂದ ಸ್ಪರ್ಧಿಸಲು ನೋಡುತ್ತಿದ್ದಾರೆ. ಮುಂದೆ ಅವರು ಗೆಲ್ಲುವದಿಲ್ಲ ಎಂದು ಅವರೇ ಹೇಳಿದ್ದಾರೆ, ಹಾಗಾಗಿ ತರಾತುರಿಯಲ್ಲಿ ಸಚಿವರಾಗಿ ದಿಢೀರ್ ದುಡ್ಡು ಮಾಡುವುದಕ್ಕೆ ಹೀಗೆಲ್ಲಾ ಆಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ಟಿಕೆಟ್ ನೀಡಬಾರದು. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೇಟ್ ನೀಡಬೇಕು, ನಾನು ಬಿಜೆಪಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಎಚ್ಚರಿಸಿದ್ದಾರೆ.

ಶಾಸಕರ ವಿರುದ್ಧ ಸಿಂಧನೂರಿನಲ್ಲಿ ಪ್ರತಿಭಟನೆ

ಇನ್ನೊಂದು ಕಡೆ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಸುಳ್ಳು ಹೇಳಿರುವ ಶಾಸಕ ಕ್ಷೇತ್ರಕ್ಕೆ ಬಂದು ಎಲ್ಲಿ, ಯಾರಿಂದ ಜನಾಭಿಪ್ರಾಯ ಸಂಗ್ರಹಿಸಿದ್ದೀರಿ ಎಂಬ ಮಾಹಿತಿ ನೀಡಬೇಕು. ಜನ ಮಸ್ಕಿಯಲ್ಲಿ ಬರದಿಂದ, ಕುಡಿಯುವ ನೀರಿಲ್ಲದೇ ಸಾಯುತ್ತಿದ್ದರೆ ಈ ಶಾಸಕರಿಗೆ ಹಣದ ಮದವೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಯುವಜನರು ಆರ್.ವೈ.ಎಫ್ ಮತ್ತು ಕೆ.ಆರ್.ಎಸ್ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಿಂಧನೂರಿನಲ್ಲಿ ಪ್ರತಾಪ್ ಗೌಡರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸತತ 3 ಬಾರಿ ಶಾಸಕರಾಗಿ 11 ವರ್ಷ ಆಳ್ವಿಕೆ ನಡೆಸಿದ್ದರೂ ಮಸ್ಕಿ ಕ್ಷೇತ್ರ ತೀರಾ ಹಿಂದುಳಿದಿದೆ, 50 ಕೋಟಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದಿವೆ, ಇದಕ್ಕೆಲ್ಲಾ ಶಾಸಕರೇ ಕಾರಣ ಎಂದು ಆರ್‍ವೈಎಫ್‍ನ ನಾಗರಾಜ್ ಪೂಜಾರ್ ಆರೋಪಿಸಿದ್ದಾರೆ.

ಮಂಗಳವಾರ ಪ್ರತಾಪ್ ಗೌಡ ಪಾಟೀಲರು ಮಾಧ್ಯಮದ ಎದುರು “ನಾನು ರಾಜೀನಾಮೆ ಕೊಡಬೇಕೆಂದು ಜನರೇ ಅಭಿಪ್ರಾಯ ನೀಡಿದ್ದಾರೆ, ನಾನು ಜನರ ತೀರ್ಪಿಗೆ ತಲೆಬಾಗಿದ್ದೇನೆ ಅಷ್ಟೇ, ನನ್ನ ವಿರುದ್ಧ ಮಾತಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆವೇಶಭರಿತವಾಗಿ ಮಾತನಾಡಿದ್ದರು”. ಅಷ್ಟೇ ಅಲ್ಲದೇ ಮುಂಬೈನಲ್ಲಿ ಕೆಲ ಶಾಸಕರು ಇಲ್ಲ ನಾವು ಕಾನೂನುಕ್ರಮಕ್ಕೆ ಒಳಗಾಗುವುದಕ್ಕಿಂತ ವಾಪಸ್ ಹೋಗಿಬಿಡೋಣ ಎಂದರೆ ಇಲ್ಲ ನಾವು ಇನ್ನು ಸ್ವಲ್ಪ ಕಾದುನೋಡೋಣ ಎಂದು ಪ್ರತಾಪ್ ಗೌಡರೇ ಉಳಿದ ಅತೃಪ್ತರನ್ನು ಸಮಾಧಾನಿಸಿದ್ದಾರಂತೆ.

ನಾಗರಾಜ್ ಪೂಜಾರ್

ಇದರಿಂದ ಸಿಟ್ಟಿಗೆದ್ದಿರುವ ಕ್ಷೇತ್ರದ ಜನತೆ ಒಂದು ತಿಂಗಳಿಂದ ಈ ಶಾಸಕರು ಕ್ಷೇತ್ರದ ಕಡೆ ಮುಖ ಹಾಕಿಲ್ಲ. ತಮ್ಮ ನಾಲ್ಕೈದು ಚೇಲಾಗಳ ಅಭಿಪ್ರಾಯ ಪಡೆದು ಅದನ್ನೇ ಇಡೀ ಕ್ಷೇತ್ರದ ಜನಾಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಾ ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಪ್ರತಾಪ್ ಗೌಡರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ, ಈ ಕುರಿತು ಸ್ಪೀಕರ್ ರವರಿಗೂ ದೂರು ಸಲ್ಲಿಸುತ್ತೇವೆ ಎಂದು ನಾಗರಾಜ್ ಪೂಜಾರ್ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...