Homeಕರ್ನಾಟಕಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

- Advertisement -
- Advertisement -

ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದ ಅವರು ಈಗ ಜನರ ಅಭಿಪ್ರಾಯ ಪಡೆದೇ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ. ಇದರಿಂದ ಮಸ್ಕಿ ಮತ್ತು ಸಿಂಧನೂರಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಪರ-ವಿರೋಧದ ಅಲೆಯೆದ್ದಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ನಾನು ಕ್ಷೇತ್ರದ ಜನರೊಡನೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಪಡೆದೇ ರಾಜೀನಾಮೆ ನೀಡಿದ್ದೇನೆ ಎಂದು ಹೊಸ ವರಸೆ ಶುರು ಮಾಡಿದ್ದಾರೆ. ಇದಕ್ಕೆ ಒಹೋ ಮುಂಬೈ ಹೋಟೆಲ್‍ನಿಂದಲೇ ಜನಾಭಿಪ್ರಾಯ ಪಡೆದಿದ್ದೀರಿ ಎಂದು ಅವರು ಎದುರು ಕೇವಲ 213 ಮತಗಳಿಂದ ಸೋತ ಬಿಜೆಪಿಯ ಆರ್ ಬಸವನಗೌಡ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಆರ್ ಬಸವನಗೌಡ

ಅಷ್ಟೇ ಅಲ್ಲದೇ ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋತ ಪ್ರತಾಪ್ ಗೌಡರು ಈಗ ಸೋಲಿನ ಭಯದಿಂದ, ಹಣದಾಸೆಯಿಂದ ರಾಜಿನಾಮೇ ನೀಡಿ ಬಿಜೆಪಿಯಿಂದ ಸ್ಪರ್ಧಿಸಲು ನೋಡುತ್ತಿದ್ದಾರೆ. ಮುಂದೆ ಅವರು ಗೆಲ್ಲುವದಿಲ್ಲ ಎಂದು ಅವರೇ ಹೇಳಿದ್ದಾರೆ, ಹಾಗಾಗಿ ತರಾತುರಿಯಲ್ಲಿ ಸಚಿವರಾಗಿ ದಿಢೀರ್ ದುಡ್ಡು ಮಾಡುವುದಕ್ಕೆ ಹೀಗೆಲ್ಲಾ ಆಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ಟಿಕೆಟ್ ನೀಡಬಾರದು. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೇಟ್ ನೀಡಬೇಕು, ನಾನು ಬಿಜೆಪಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಎಚ್ಚರಿಸಿದ್ದಾರೆ.

ಶಾಸಕರ ವಿರುದ್ಧ ಸಿಂಧನೂರಿನಲ್ಲಿ ಪ್ರತಿಭಟನೆ

ಇನ್ನೊಂದು ಕಡೆ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಸುಳ್ಳು ಹೇಳಿರುವ ಶಾಸಕ ಕ್ಷೇತ್ರಕ್ಕೆ ಬಂದು ಎಲ್ಲಿ, ಯಾರಿಂದ ಜನಾಭಿಪ್ರಾಯ ಸಂಗ್ರಹಿಸಿದ್ದೀರಿ ಎಂಬ ಮಾಹಿತಿ ನೀಡಬೇಕು. ಜನ ಮಸ್ಕಿಯಲ್ಲಿ ಬರದಿಂದ, ಕುಡಿಯುವ ನೀರಿಲ್ಲದೇ ಸಾಯುತ್ತಿದ್ದರೆ ಈ ಶಾಸಕರಿಗೆ ಹಣದ ಮದವೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಯುವಜನರು ಆರ್.ವೈ.ಎಫ್ ಮತ್ತು ಕೆ.ಆರ್.ಎಸ್ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಿಂಧನೂರಿನಲ್ಲಿ ಪ್ರತಾಪ್ ಗೌಡರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸತತ 3 ಬಾರಿ ಶಾಸಕರಾಗಿ 11 ವರ್ಷ ಆಳ್ವಿಕೆ ನಡೆಸಿದ್ದರೂ ಮಸ್ಕಿ ಕ್ಷೇತ್ರ ತೀರಾ ಹಿಂದುಳಿದಿದೆ, 50 ಕೋಟಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದಿವೆ, ಇದಕ್ಕೆಲ್ಲಾ ಶಾಸಕರೇ ಕಾರಣ ಎಂದು ಆರ್‍ವೈಎಫ್‍ನ ನಾಗರಾಜ್ ಪೂಜಾರ್ ಆರೋಪಿಸಿದ್ದಾರೆ.

ಮಂಗಳವಾರ ಪ್ರತಾಪ್ ಗೌಡ ಪಾಟೀಲರು ಮಾಧ್ಯಮದ ಎದುರು “ನಾನು ರಾಜೀನಾಮೆ ಕೊಡಬೇಕೆಂದು ಜನರೇ ಅಭಿಪ್ರಾಯ ನೀಡಿದ್ದಾರೆ, ನಾನು ಜನರ ತೀರ್ಪಿಗೆ ತಲೆಬಾಗಿದ್ದೇನೆ ಅಷ್ಟೇ, ನನ್ನ ವಿರುದ್ಧ ಮಾತಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆವೇಶಭರಿತವಾಗಿ ಮಾತನಾಡಿದ್ದರು”. ಅಷ್ಟೇ ಅಲ್ಲದೇ ಮುಂಬೈನಲ್ಲಿ ಕೆಲ ಶಾಸಕರು ಇಲ್ಲ ನಾವು ಕಾನೂನುಕ್ರಮಕ್ಕೆ ಒಳಗಾಗುವುದಕ್ಕಿಂತ ವಾಪಸ್ ಹೋಗಿಬಿಡೋಣ ಎಂದರೆ ಇಲ್ಲ ನಾವು ಇನ್ನು ಸ್ವಲ್ಪ ಕಾದುನೋಡೋಣ ಎಂದು ಪ್ರತಾಪ್ ಗೌಡರೇ ಉಳಿದ ಅತೃಪ್ತರನ್ನು ಸಮಾಧಾನಿಸಿದ್ದಾರಂತೆ.

ನಾಗರಾಜ್ ಪೂಜಾರ್

ಇದರಿಂದ ಸಿಟ್ಟಿಗೆದ್ದಿರುವ ಕ್ಷೇತ್ರದ ಜನತೆ ಒಂದು ತಿಂಗಳಿಂದ ಈ ಶಾಸಕರು ಕ್ಷೇತ್ರದ ಕಡೆ ಮುಖ ಹಾಕಿಲ್ಲ. ತಮ್ಮ ನಾಲ್ಕೈದು ಚೇಲಾಗಳ ಅಭಿಪ್ರಾಯ ಪಡೆದು ಅದನ್ನೇ ಇಡೀ ಕ್ಷೇತ್ರದ ಜನಾಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಾ ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಪ್ರತಾಪ್ ಗೌಡರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ, ಈ ಕುರಿತು ಸ್ಪೀಕರ್ ರವರಿಗೂ ದೂರು ಸಲ್ಲಿಸುತ್ತೇವೆ ಎಂದು ನಾಗರಾಜ್ ಪೂಜಾರ್ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...