Homeಕರ್ನಾಟಕಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

- Advertisement -
- Advertisement -

ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದ ಅವರು ಈಗ ಜನರ ಅಭಿಪ್ರಾಯ ಪಡೆದೇ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ. ಇದರಿಂದ ಮಸ್ಕಿ ಮತ್ತು ಸಿಂಧನೂರಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಪರ-ವಿರೋಧದ ಅಲೆಯೆದ್ದಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ನಾನು ಕ್ಷೇತ್ರದ ಜನರೊಡನೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಪಡೆದೇ ರಾಜೀನಾಮೆ ನೀಡಿದ್ದೇನೆ ಎಂದು ಹೊಸ ವರಸೆ ಶುರು ಮಾಡಿದ್ದಾರೆ. ಇದಕ್ಕೆ ಒಹೋ ಮುಂಬೈ ಹೋಟೆಲ್‍ನಿಂದಲೇ ಜನಾಭಿಪ್ರಾಯ ಪಡೆದಿದ್ದೀರಿ ಎಂದು ಅವರು ಎದುರು ಕೇವಲ 213 ಮತಗಳಿಂದ ಸೋತ ಬಿಜೆಪಿಯ ಆರ್ ಬಸವನಗೌಡ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಆರ್ ಬಸವನಗೌಡ

ಅಷ್ಟೇ ಅಲ್ಲದೇ ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋತ ಪ್ರತಾಪ್ ಗೌಡರು ಈಗ ಸೋಲಿನ ಭಯದಿಂದ, ಹಣದಾಸೆಯಿಂದ ರಾಜಿನಾಮೇ ನೀಡಿ ಬಿಜೆಪಿಯಿಂದ ಸ್ಪರ್ಧಿಸಲು ನೋಡುತ್ತಿದ್ದಾರೆ. ಮುಂದೆ ಅವರು ಗೆಲ್ಲುವದಿಲ್ಲ ಎಂದು ಅವರೇ ಹೇಳಿದ್ದಾರೆ, ಹಾಗಾಗಿ ತರಾತುರಿಯಲ್ಲಿ ಸಚಿವರಾಗಿ ದಿಢೀರ್ ದುಡ್ಡು ಮಾಡುವುದಕ್ಕೆ ಹೀಗೆಲ್ಲಾ ಆಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ಟಿಕೆಟ್ ನೀಡಬಾರದು. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೇಟ್ ನೀಡಬೇಕು, ನಾನು ಬಿಜೆಪಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಎಚ್ಚರಿಸಿದ್ದಾರೆ.

ಶಾಸಕರ ವಿರುದ್ಧ ಸಿಂಧನೂರಿನಲ್ಲಿ ಪ್ರತಿಭಟನೆ

ಇನ್ನೊಂದು ಕಡೆ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಸುಳ್ಳು ಹೇಳಿರುವ ಶಾಸಕ ಕ್ಷೇತ್ರಕ್ಕೆ ಬಂದು ಎಲ್ಲಿ, ಯಾರಿಂದ ಜನಾಭಿಪ್ರಾಯ ಸಂಗ್ರಹಿಸಿದ್ದೀರಿ ಎಂಬ ಮಾಹಿತಿ ನೀಡಬೇಕು. ಜನ ಮಸ್ಕಿಯಲ್ಲಿ ಬರದಿಂದ, ಕುಡಿಯುವ ನೀರಿಲ್ಲದೇ ಸಾಯುತ್ತಿದ್ದರೆ ಈ ಶಾಸಕರಿಗೆ ಹಣದ ಮದವೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಯುವಜನರು ಆರ್.ವೈ.ಎಫ್ ಮತ್ತು ಕೆ.ಆರ್.ಎಸ್ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಿಂಧನೂರಿನಲ್ಲಿ ಪ್ರತಾಪ್ ಗೌಡರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸತತ 3 ಬಾರಿ ಶಾಸಕರಾಗಿ 11 ವರ್ಷ ಆಳ್ವಿಕೆ ನಡೆಸಿದ್ದರೂ ಮಸ್ಕಿ ಕ್ಷೇತ್ರ ತೀರಾ ಹಿಂದುಳಿದಿದೆ, 50 ಕೋಟಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದಿವೆ, ಇದಕ್ಕೆಲ್ಲಾ ಶಾಸಕರೇ ಕಾರಣ ಎಂದು ಆರ್‍ವೈಎಫ್‍ನ ನಾಗರಾಜ್ ಪೂಜಾರ್ ಆರೋಪಿಸಿದ್ದಾರೆ.

ಮಂಗಳವಾರ ಪ್ರತಾಪ್ ಗೌಡ ಪಾಟೀಲರು ಮಾಧ್ಯಮದ ಎದುರು “ನಾನು ರಾಜೀನಾಮೆ ಕೊಡಬೇಕೆಂದು ಜನರೇ ಅಭಿಪ್ರಾಯ ನೀಡಿದ್ದಾರೆ, ನಾನು ಜನರ ತೀರ್ಪಿಗೆ ತಲೆಬಾಗಿದ್ದೇನೆ ಅಷ್ಟೇ, ನನ್ನ ವಿರುದ್ಧ ಮಾತಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆವೇಶಭರಿತವಾಗಿ ಮಾತನಾಡಿದ್ದರು”. ಅಷ್ಟೇ ಅಲ್ಲದೇ ಮುಂಬೈನಲ್ಲಿ ಕೆಲ ಶಾಸಕರು ಇಲ್ಲ ನಾವು ಕಾನೂನುಕ್ರಮಕ್ಕೆ ಒಳಗಾಗುವುದಕ್ಕಿಂತ ವಾಪಸ್ ಹೋಗಿಬಿಡೋಣ ಎಂದರೆ ಇಲ್ಲ ನಾವು ಇನ್ನು ಸ್ವಲ್ಪ ಕಾದುನೋಡೋಣ ಎಂದು ಪ್ರತಾಪ್ ಗೌಡರೇ ಉಳಿದ ಅತೃಪ್ತರನ್ನು ಸಮಾಧಾನಿಸಿದ್ದಾರಂತೆ.

ನಾಗರಾಜ್ ಪೂಜಾರ್

ಇದರಿಂದ ಸಿಟ್ಟಿಗೆದ್ದಿರುವ ಕ್ಷೇತ್ರದ ಜನತೆ ಒಂದು ತಿಂಗಳಿಂದ ಈ ಶಾಸಕರು ಕ್ಷೇತ್ರದ ಕಡೆ ಮುಖ ಹಾಕಿಲ್ಲ. ತಮ್ಮ ನಾಲ್ಕೈದು ಚೇಲಾಗಳ ಅಭಿಪ್ರಾಯ ಪಡೆದು ಅದನ್ನೇ ಇಡೀ ಕ್ಷೇತ್ರದ ಜನಾಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಾ ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಪ್ರತಾಪ್ ಗೌಡರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ, ಈ ಕುರಿತು ಸ್ಪೀಕರ್ ರವರಿಗೂ ದೂರು ಸಲ್ಲಿಸುತ್ತೇವೆ ಎಂದು ನಾಗರಾಜ್ ಪೂಜಾರ್ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...