Homeಕರ್ನಾಟಕಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

- Advertisement -
- Advertisement -

ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದ ಅವರು ಈಗ ಜನರ ಅಭಿಪ್ರಾಯ ಪಡೆದೇ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ. ಇದರಿಂದ ಮಸ್ಕಿ ಮತ್ತು ಸಿಂಧನೂರಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಪರ-ವಿರೋಧದ ಅಲೆಯೆದ್ದಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ನಾನು ಕ್ಷೇತ್ರದ ಜನರೊಡನೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಪಡೆದೇ ರಾಜೀನಾಮೆ ನೀಡಿದ್ದೇನೆ ಎಂದು ಹೊಸ ವರಸೆ ಶುರು ಮಾಡಿದ್ದಾರೆ. ಇದಕ್ಕೆ ಒಹೋ ಮುಂಬೈ ಹೋಟೆಲ್‍ನಿಂದಲೇ ಜನಾಭಿಪ್ರಾಯ ಪಡೆದಿದ್ದೀರಿ ಎಂದು ಅವರು ಎದುರು ಕೇವಲ 213 ಮತಗಳಿಂದ ಸೋತ ಬಿಜೆಪಿಯ ಆರ್ ಬಸವನಗೌಡ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಆರ್ ಬಸವನಗೌಡ

ಅಷ್ಟೇ ಅಲ್ಲದೇ ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋತ ಪ್ರತಾಪ್ ಗೌಡರು ಈಗ ಸೋಲಿನ ಭಯದಿಂದ, ಹಣದಾಸೆಯಿಂದ ರಾಜಿನಾಮೇ ನೀಡಿ ಬಿಜೆಪಿಯಿಂದ ಸ್ಪರ್ಧಿಸಲು ನೋಡುತ್ತಿದ್ದಾರೆ. ಮುಂದೆ ಅವರು ಗೆಲ್ಲುವದಿಲ್ಲ ಎಂದು ಅವರೇ ಹೇಳಿದ್ದಾರೆ, ಹಾಗಾಗಿ ತರಾತುರಿಯಲ್ಲಿ ಸಚಿವರಾಗಿ ದಿಢೀರ್ ದುಡ್ಡು ಮಾಡುವುದಕ್ಕೆ ಹೀಗೆಲ್ಲಾ ಆಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ಟಿಕೆಟ್ ನೀಡಬಾರದು. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೇಟ್ ನೀಡಬೇಕು, ನಾನು ಬಿಜೆಪಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಎಚ್ಚರಿಸಿದ್ದಾರೆ.

ಶಾಸಕರ ವಿರುದ್ಧ ಸಿಂಧನೂರಿನಲ್ಲಿ ಪ್ರತಿಭಟನೆ

ಇನ್ನೊಂದು ಕಡೆ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಸುಳ್ಳು ಹೇಳಿರುವ ಶಾಸಕ ಕ್ಷೇತ್ರಕ್ಕೆ ಬಂದು ಎಲ್ಲಿ, ಯಾರಿಂದ ಜನಾಭಿಪ್ರಾಯ ಸಂಗ್ರಹಿಸಿದ್ದೀರಿ ಎಂಬ ಮಾಹಿತಿ ನೀಡಬೇಕು. ಜನ ಮಸ್ಕಿಯಲ್ಲಿ ಬರದಿಂದ, ಕುಡಿಯುವ ನೀರಿಲ್ಲದೇ ಸಾಯುತ್ತಿದ್ದರೆ ಈ ಶಾಸಕರಿಗೆ ಹಣದ ಮದವೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಯುವಜನರು ಆರ್.ವೈ.ಎಫ್ ಮತ್ತು ಕೆ.ಆರ್.ಎಸ್ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಿಂಧನೂರಿನಲ್ಲಿ ಪ್ರತಾಪ್ ಗೌಡರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸತತ 3 ಬಾರಿ ಶಾಸಕರಾಗಿ 11 ವರ್ಷ ಆಳ್ವಿಕೆ ನಡೆಸಿದ್ದರೂ ಮಸ್ಕಿ ಕ್ಷೇತ್ರ ತೀರಾ ಹಿಂದುಳಿದಿದೆ, 50 ಕೋಟಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದಿವೆ, ಇದಕ್ಕೆಲ್ಲಾ ಶಾಸಕರೇ ಕಾರಣ ಎಂದು ಆರ್‍ವೈಎಫ್‍ನ ನಾಗರಾಜ್ ಪೂಜಾರ್ ಆರೋಪಿಸಿದ್ದಾರೆ.

ಮಂಗಳವಾರ ಪ್ರತಾಪ್ ಗೌಡ ಪಾಟೀಲರು ಮಾಧ್ಯಮದ ಎದುರು “ನಾನು ರಾಜೀನಾಮೆ ಕೊಡಬೇಕೆಂದು ಜನರೇ ಅಭಿಪ್ರಾಯ ನೀಡಿದ್ದಾರೆ, ನಾನು ಜನರ ತೀರ್ಪಿಗೆ ತಲೆಬಾಗಿದ್ದೇನೆ ಅಷ್ಟೇ, ನನ್ನ ವಿರುದ್ಧ ಮಾತಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆವೇಶಭರಿತವಾಗಿ ಮಾತನಾಡಿದ್ದರು”. ಅಷ್ಟೇ ಅಲ್ಲದೇ ಮುಂಬೈನಲ್ಲಿ ಕೆಲ ಶಾಸಕರು ಇಲ್ಲ ನಾವು ಕಾನೂನುಕ್ರಮಕ್ಕೆ ಒಳಗಾಗುವುದಕ್ಕಿಂತ ವಾಪಸ್ ಹೋಗಿಬಿಡೋಣ ಎಂದರೆ ಇಲ್ಲ ನಾವು ಇನ್ನು ಸ್ವಲ್ಪ ಕಾದುನೋಡೋಣ ಎಂದು ಪ್ರತಾಪ್ ಗೌಡರೇ ಉಳಿದ ಅತೃಪ್ತರನ್ನು ಸಮಾಧಾನಿಸಿದ್ದಾರಂತೆ.

ನಾಗರಾಜ್ ಪೂಜಾರ್

ಇದರಿಂದ ಸಿಟ್ಟಿಗೆದ್ದಿರುವ ಕ್ಷೇತ್ರದ ಜನತೆ ಒಂದು ತಿಂಗಳಿಂದ ಈ ಶಾಸಕರು ಕ್ಷೇತ್ರದ ಕಡೆ ಮುಖ ಹಾಕಿಲ್ಲ. ತಮ್ಮ ನಾಲ್ಕೈದು ಚೇಲಾಗಳ ಅಭಿಪ್ರಾಯ ಪಡೆದು ಅದನ್ನೇ ಇಡೀ ಕ್ಷೇತ್ರದ ಜನಾಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಾ ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಪ್ರತಾಪ್ ಗೌಡರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ, ಈ ಕುರಿತು ಸ್ಪೀಕರ್ ರವರಿಗೂ ದೂರು ಸಲ್ಲಿಸುತ್ತೇವೆ ಎಂದು ನಾಗರಾಜ್ ಪೂಜಾರ್ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...