Homeಕರ್ನಾಟಕಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

- Advertisement -
- Advertisement -

ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದ ಅವರು ಈಗ ಜನರ ಅಭಿಪ್ರಾಯ ಪಡೆದೇ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ. ಇದರಿಂದ ಮಸ್ಕಿ ಮತ್ತು ಸಿಂಧನೂರಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಪರ-ವಿರೋಧದ ಅಲೆಯೆದ್ದಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ನಾನು ಕ್ಷೇತ್ರದ ಜನರೊಡನೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಪಡೆದೇ ರಾಜೀನಾಮೆ ನೀಡಿದ್ದೇನೆ ಎಂದು ಹೊಸ ವರಸೆ ಶುರು ಮಾಡಿದ್ದಾರೆ. ಇದಕ್ಕೆ ಒಹೋ ಮುಂಬೈ ಹೋಟೆಲ್‍ನಿಂದಲೇ ಜನಾಭಿಪ್ರಾಯ ಪಡೆದಿದ್ದೀರಿ ಎಂದು ಅವರು ಎದುರು ಕೇವಲ 213 ಮತಗಳಿಂದ ಸೋತ ಬಿಜೆಪಿಯ ಆರ್ ಬಸವನಗೌಡ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಆರ್ ಬಸವನಗೌಡ

ಅಷ್ಟೇ ಅಲ್ಲದೇ ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋತ ಪ್ರತಾಪ್ ಗೌಡರು ಈಗ ಸೋಲಿನ ಭಯದಿಂದ, ಹಣದಾಸೆಯಿಂದ ರಾಜಿನಾಮೇ ನೀಡಿ ಬಿಜೆಪಿಯಿಂದ ಸ್ಪರ್ಧಿಸಲು ನೋಡುತ್ತಿದ್ದಾರೆ. ಮುಂದೆ ಅವರು ಗೆಲ್ಲುವದಿಲ್ಲ ಎಂದು ಅವರೇ ಹೇಳಿದ್ದಾರೆ, ಹಾಗಾಗಿ ತರಾತುರಿಯಲ್ಲಿ ಸಚಿವರಾಗಿ ದಿಢೀರ್ ದುಡ್ಡು ಮಾಡುವುದಕ್ಕೆ ಹೀಗೆಲ್ಲಾ ಆಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ಟಿಕೆಟ್ ನೀಡಬಾರದು. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೇಟ್ ನೀಡಬೇಕು, ನಾನು ಬಿಜೆಪಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಎಚ್ಚರಿಸಿದ್ದಾರೆ.

ಶಾಸಕರ ವಿರುದ್ಧ ಸಿಂಧನೂರಿನಲ್ಲಿ ಪ್ರತಿಭಟನೆ

ಇನ್ನೊಂದು ಕಡೆ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಸುಳ್ಳು ಹೇಳಿರುವ ಶಾಸಕ ಕ್ಷೇತ್ರಕ್ಕೆ ಬಂದು ಎಲ್ಲಿ, ಯಾರಿಂದ ಜನಾಭಿಪ್ರಾಯ ಸಂಗ್ರಹಿಸಿದ್ದೀರಿ ಎಂಬ ಮಾಹಿತಿ ನೀಡಬೇಕು. ಜನ ಮಸ್ಕಿಯಲ್ಲಿ ಬರದಿಂದ, ಕುಡಿಯುವ ನೀರಿಲ್ಲದೇ ಸಾಯುತ್ತಿದ್ದರೆ ಈ ಶಾಸಕರಿಗೆ ಹಣದ ಮದವೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಯುವಜನರು ಆರ್.ವೈ.ಎಫ್ ಮತ್ತು ಕೆ.ಆರ್.ಎಸ್ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಿಂಧನೂರಿನಲ್ಲಿ ಪ್ರತಾಪ್ ಗೌಡರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸತತ 3 ಬಾರಿ ಶಾಸಕರಾಗಿ 11 ವರ್ಷ ಆಳ್ವಿಕೆ ನಡೆಸಿದ್ದರೂ ಮಸ್ಕಿ ಕ್ಷೇತ್ರ ತೀರಾ ಹಿಂದುಳಿದಿದೆ, 50 ಕೋಟಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದಿವೆ, ಇದಕ್ಕೆಲ್ಲಾ ಶಾಸಕರೇ ಕಾರಣ ಎಂದು ಆರ್‍ವೈಎಫ್‍ನ ನಾಗರಾಜ್ ಪೂಜಾರ್ ಆರೋಪಿಸಿದ್ದಾರೆ.

ಮಂಗಳವಾರ ಪ್ರತಾಪ್ ಗೌಡ ಪಾಟೀಲರು ಮಾಧ್ಯಮದ ಎದುರು “ನಾನು ರಾಜೀನಾಮೆ ಕೊಡಬೇಕೆಂದು ಜನರೇ ಅಭಿಪ್ರಾಯ ನೀಡಿದ್ದಾರೆ, ನಾನು ಜನರ ತೀರ್ಪಿಗೆ ತಲೆಬಾಗಿದ್ದೇನೆ ಅಷ್ಟೇ, ನನ್ನ ವಿರುದ್ಧ ಮಾತಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆವೇಶಭರಿತವಾಗಿ ಮಾತನಾಡಿದ್ದರು”. ಅಷ್ಟೇ ಅಲ್ಲದೇ ಮುಂಬೈನಲ್ಲಿ ಕೆಲ ಶಾಸಕರು ಇಲ್ಲ ನಾವು ಕಾನೂನುಕ್ರಮಕ್ಕೆ ಒಳಗಾಗುವುದಕ್ಕಿಂತ ವಾಪಸ್ ಹೋಗಿಬಿಡೋಣ ಎಂದರೆ ಇಲ್ಲ ನಾವು ಇನ್ನು ಸ್ವಲ್ಪ ಕಾದುನೋಡೋಣ ಎಂದು ಪ್ರತಾಪ್ ಗೌಡರೇ ಉಳಿದ ಅತೃಪ್ತರನ್ನು ಸಮಾಧಾನಿಸಿದ್ದಾರಂತೆ.

ನಾಗರಾಜ್ ಪೂಜಾರ್

ಇದರಿಂದ ಸಿಟ್ಟಿಗೆದ್ದಿರುವ ಕ್ಷೇತ್ರದ ಜನತೆ ಒಂದು ತಿಂಗಳಿಂದ ಈ ಶಾಸಕರು ಕ್ಷೇತ್ರದ ಕಡೆ ಮುಖ ಹಾಕಿಲ್ಲ. ತಮ್ಮ ನಾಲ್ಕೈದು ಚೇಲಾಗಳ ಅಭಿಪ್ರಾಯ ಪಡೆದು ಅದನ್ನೇ ಇಡೀ ಕ್ಷೇತ್ರದ ಜನಾಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಾ ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಪ್ರತಾಪ್ ಗೌಡರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ, ಈ ಕುರಿತು ಸ್ಪೀಕರ್ ರವರಿಗೂ ದೂರು ಸಲ್ಲಿಸುತ್ತೇವೆ ಎಂದು ನಾಗರಾಜ್ ಪೂಜಾರ್ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...