Homeಕರ್ನಾಟಕಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಕೆಟ್ ನೀಡಿದರೆ ಸುಮ್ಮನಿರುವುದಿಲ್ಲ: ಬಿಜೆಪಿಯ ಆರ್ ಬಸವನಗೌಡ

- Advertisement -
- Advertisement -

ಪ್ರತಾಪ್ ಗೌಡ ಪಾಟೀಲನ ಪ್ರಲಾಪ: ಮಸ್ಕಿಯ ಬಿಜೆಪಿ ಪರಾಜಿತ ಅಭ್ಯರ್ಥಿಯಿಂದ ತನಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ಅತೃಪ್ತರ ಬಣ ಸೇರಿ ರಾಜೀನಾಮೆ ಕೊಟ್ಟು ಮುಂಬೈ ಸೇರಿದ್ದು ಸರಿಯಷ್ಟೇ. ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದ ಅವರು ಈಗ ಜನರ ಅಭಿಪ್ರಾಯ ಪಡೆದೇ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ. ಇದರಿಂದ ಮಸ್ಕಿ ಮತ್ತು ಸಿಂಧನೂರಿನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಪರ-ವಿರೋಧದ ಅಲೆಯೆದ್ದಿದೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ ನಾನು ಕ್ಷೇತ್ರದ ಜನರೊಡನೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಪಡೆದೇ ರಾಜೀನಾಮೆ ನೀಡಿದ್ದೇನೆ ಎಂದು ಹೊಸ ವರಸೆ ಶುರು ಮಾಡಿದ್ದಾರೆ. ಇದಕ್ಕೆ ಒಹೋ ಮುಂಬೈ ಹೋಟೆಲ್‍ನಿಂದಲೇ ಜನಾಭಿಪ್ರಾಯ ಪಡೆದಿದ್ದೀರಿ ಎಂದು ಅವರು ಎದುರು ಕೇವಲ 213 ಮತಗಳಿಂದ ಸೋತ ಬಿಜೆಪಿಯ ಆರ್ ಬಸವನಗೌಡ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಆರ್ ಬಸವನಗೌಡ

ಅಷ್ಟೇ ಅಲ್ಲದೇ ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋತ ಪ್ರತಾಪ್ ಗೌಡರು ಈಗ ಸೋಲಿನ ಭಯದಿಂದ, ಹಣದಾಸೆಯಿಂದ ರಾಜಿನಾಮೇ ನೀಡಿ ಬಿಜೆಪಿಯಿಂದ ಸ್ಪರ್ಧಿಸಲು ನೋಡುತ್ತಿದ್ದಾರೆ. ಮುಂದೆ ಅವರು ಗೆಲ್ಲುವದಿಲ್ಲ ಎಂದು ಅವರೇ ಹೇಳಿದ್ದಾರೆ, ಹಾಗಾಗಿ ತರಾತುರಿಯಲ್ಲಿ ಸಚಿವರಾಗಿ ದಿಢೀರ್ ದುಡ್ಡು ಮಾಡುವುದಕ್ಕೆ ಹೀಗೆಲ್ಲಾ ಆಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ಟಿಕೆಟ್ ನೀಡಬಾರದು. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೇಟ್ ನೀಡಬೇಕು, ನಾನು ಬಿಜೆಪಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಎಚ್ಚರಿಸಿದ್ದಾರೆ.

ಶಾಸಕರ ವಿರುದ್ಧ ಸಿಂಧನೂರಿನಲ್ಲಿ ಪ್ರತಿಭಟನೆ

ಇನ್ನೊಂದು ಕಡೆ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ ಎಂದು ಸುಳ್ಳು ಹೇಳಿರುವ ಶಾಸಕ ಕ್ಷೇತ್ರಕ್ಕೆ ಬಂದು ಎಲ್ಲಿ, ಯಾರಿಂದ ಜನಾಭಿಪ್ರಾಯ ಸಂಗ್ರಹಿಸಿದ್ದೀರಿ ಎಂಬ ಮಾಹಿತಿ ನೀಡಬೇಕು. ಜನ ಮಸ್ಕಿಯಲ್ಲಿ ಬರದಿಂದ, ಕುಡಿಯುವ ನೀರಿಲ್ಲದೇ ಸಾಯುತ್ತಿದ್ದರೆ ಈ ಶಾಸಕರಿಗೆ ಹಣದ ಮದವೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಯುವಜನರು ಆರ್.ವೈ.ಎಫ್ ಮತ್ತು ಕೆ.ಆರ್.ಎಸ್ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಸಿಂಧನೂರಿನಲ್ಲಿ ಪ್ರತಾಪ್ ಗೌಡರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸತತ 3 ಬಾರಿ ಶಾಸಕರಾಗಿ 11 ವರ್ಷ ಆಳ್ವಿಕೆ ನಡೆಸಿದ್ದರೂ ಮಸ್ಕಿ ಕ್ಷೇತ್ರ ತೀರಾ ಹಿಂದುಳಿದಿದೆ, 50 ಕೋಟಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದಿವೆ, ಇದಕ್ಕೆಲ್ಲಾ ಶಾಸಕರೇ ಕಾರಣ ಎಂದು ಆರ್‍ವೈಎಫ್‍ನ ನಾಗರಾಜ್ ಪೂಜಾರ್ ಆರೋಪಿಸಿದ್ದಾರೆ.

ಮಂಗಳವಾರ ಪ್ರತಾಪ್ ಗೌಡ ಪಾಟೀಲರು ಮಾಧ್ಯಮದ ಎದುರು “ನಾನು ರಾಜೀನಾಮೆ ಕೊಡಬೇಕೆಂದು ಜನರೇ ಅಭಿಪ್ರಾಯ ನೀಡಿದ್ದಾರೆ, ನಾನು ಜನರ ತೀರ್ಪಿಗೆ ತಲೆಬಾಗಿದ್ದೇನೆ ಅಷ್ಟೇ, ನನ್ನ ವಿರುದ್ಧ ಮಾತಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆವೇಶಭರಿತವಾಗಿ ಮಾತನಾಡಿದ್ದರು”. ಅಷ್ಟೇ ಅಲ್ಲದೇ ಮುಂಬೈನಲ್ಲಿ ಕೆಲ ಶಾಸಕರು ಇಲ್ಲ ನಾವು ಕಾನೂನುಕ್ರಮಕ್ಕೆ ಒಳಗಾಗುವುದಕ್ಕಿಂತ ವಾಪಸ್ ಹೋಗಿಬಿಡೋಣ ಎಂದರೆ ಇಲ್ಲ ನಾವು ಇನ್ನು ಸ್ವಲ್ಪ ಕಾದುನೋಡೋಣ ಎಂದು ಪ್ರತಾಪ್ ಗೌಡರೇ ಉಳಿದ ಅತೃಪ್ತರನ್ನು ಸಮಾಧಾನಿಸಿದ್ದಾರಂತೆ.

ನಾಗರಾಜ್ ಪೂಜಾರ್

ಇದರಿಂದ ಸಿಟ್ಟಿಗೆದ್ದಿರುವ ಕ್ಷೇತ್ರದ ಜನತೆ ಒಂದು ತಿಂಗಳಿಂದ ಈ ಶಾಸಕರು ಕ್ಷೇತ್ರದ ಕಡೆ ಮುಖ ಹಾಕಿಲ್ಲ. ತಮ್ಮ ನಾಲ್ಕೈದು ಚೇಲಾಗಳ ಅಭಿಪ್ರಾಯ ಪಡೆದು ಅದನ್ನೇ ಇಡೀ ಕ್ಷೇತ್ರದ ಜನಾಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಾ ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಪ್ರತಾಪ್ ಗೌಡರಿಗೆ ಸರಿಯಾಗಿ ಬುದ್ದಿ ಕಲಿಸುತ್ತೇವೆ, ಈ ಕುರಿತು ಸ್ಪೀಕರ್ ರವರಿಗೂ ದೂರು ಸಲ್ಲಿಸುತ್ತೇವೆ ಎಂದು ನಾಗರಾಜ್ ಪೂಜಾರ್ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...