Homeಚಳವಳಿಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕೇಂದ್ರದ ಮೋದಿ ಸರ್ಕಾರ ಮನುಶಾಸ್ತ್ರದ ಅಡಿಪಾಯದ ಮೇಲೆ ನಡೆಯುತ್ತಿದೆ. ಹಾಗಾಗಿ ಅದಕ್ಕೆ ದಲಿತ ದಮನಿತರ ಕೂಗು ಕೇಳುತ್ತಿಲ್ಲ. ಪಂಚೇಂದ್ರೀಯ ಕಳೆದುಕೊಂಡಿರುವ ಸರ್ಕಾರಕ್ಕೆ ನಾವು ಬಿಸಿಮುಟ್ಟಿಸಿಬೇಕಿದೆ.

- Advertisement -
- Advertisement -

ದೆಹಲಿಯ ನಂಗಲಿ ದಲಿತ ಮಗುವಿನ ಬರ್ಬರ ಅತ್ಯಾಚಾರವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಏಕೆ ಮಾತನಾಡಲಿಲ್ಲ? ದೇಶದ ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದದ ರಾಜ್ಯಾಧ್ಯಕ್ಷರಾದ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಅಪ್ರಾಪ್ತ ದಲಿತ ಮಗುವಿನ ಅತ್ಯಾಚಾರ ಖಂಡಿಸಿ ದಸಸಂ ಒಕ್ಕೂಟ (ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ಒಕ್ಕೂಟ), ಕರ್ನಾಟಕ ಜನಶಕ್ತಿ ಮತ್ತು ತಮಟೆ ವೇದಿಕೆಗಳ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಉನ್ನತ ಕುಟುಂಬದ ಹೆಣ್ಣು ಮಗಳಿಗೆ ಅನ್ಯಾಯವಾದರೆ ಇಡೀ ನಾಗರೀಕ ಸಮಾಜ ಪ್ರತಿಭಟಿಸುತ್ತದೆ. ಮಾಧ್ಯಮಗಳು ದೊಡ್ಡ ಸುದ್ದಿ ಮಾಡುತ್ತವೆ. ಇದು ಒಳ್ಳೆಯದು. ಆದರೆ ತಳಸಮುದಾಯದ, ದಲಿತರ ಮೇಲಿನ ಅತ್ಯಾಚಾರಗಳಿಗೆ ಇದೇ ರೀತಿಯ ಸ್ಪಂದನೆ ಇರುವುದಿಲ್ಲ. ಈ ತಾರತಮ್ಯ ಏಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಘಟನೆಗೆ ಇಡೀ ದೇಶ ತೀವ್ರವಾಗಿ ಸ್ಪಂದಿಸಿತು. ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಗುಂಡಿಟ್ಟು ಹತ್ಯೆ ಮಾಡಲಾಯಿತು. ಇದು ಮಾನವ ಹಕ್ಕುಗಳ ಉಲ್ಲಂಘನೆ ಸಹ. ಆದರೆ ಹತ್ರಾಸ್ ದಲಿತ ಮಗಳ ಅತ್ಯಾಚಾರಗೈದು ಕೊಲೆ ಮಾಡಿ ಶವ ಕೂಡದೇ ಸುಟ್ಟು ಹಾಕಿತು ಆದಿತ್ಯನಾಥ್ ಸರ್ಕಾರ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರದ ಮೋದಿ ಸರ್ಕಾರ ಮನುಶಾಸ್ತ್ರದ ಅಡಿಪಾಯದ ಮೇಲೆ ನಡೆಯುತ್ತಿದೆ. ಹಾಗಾಗಿ ಅದಕ್ಕೆ ದಲಿತ ದಮನಿತರ ಕೂಗು ಕೇಳುತ್ತಿಲ್ಲ. ಪಂಚೇಂದ್ರೀಯ ಕಳೆದುಕೊಂಡಿರುವ ಸರ್ಕಾರಕ್ಕೆ ನಾವು ಬಿಸಿಮುಟ್ಟಿಸಿಬೇಕಿದೆ ಎಂದು ಅವರು ಹೇಳಿದರು.

ಹಿರಿಯ ಹೋರಾಟಗಾರರಾದ ಬಿ.ಶ್ರೀಪಾದ್ ಭಟ್ ಮಾತನಾಡಿ, “ಇಷ್ಟು ವರ್ಷಗಳಾದರೂ ಬರ್ಬರ ಅತ್ಯಾಚಾರಗಳನ್ನು ತಡೆಯಲು ನಾವು ವಿಫಲರಾಗಿದ್ದೇವೆ. ನಾಚಿಕೆಯಿಂದ ತಲೆತಗ್ಗಿಸಿ ಮಾತನಾಡುತ್ತಿದ್ದೇನೆ. ಇಲ್ಲಿ ಮಾತೇ ಒಂದು ಕ್ರೌರ್ಯದ ರೂಪದಲ್ಲಿದೆ. ನ್ಯಾವ್ಯಾರು ಮಾತನಾಡುವ ಅರ್ಹತೆ ಉಳಿಸಿಕೊಂಡಿಲ್ಲ” ಎಂದು ವಿಷಾಧ ವ್ಯಕ್ತಪಡಿಸಿದರು.

ಮಹಿಳೆಯರಿಗೆ ಸಾಮಾಜಿಕ ಭದ್ರತೆ ಬಗ್ಗೆ ನಾವು ಮಾತನಾಡುತ್ತಿಲ್ಲ. ದುಷ್ಕರ್ಮಿಗಳು ಭಾರತ ತಂಡದ ಹಾಕಿ ಆಟಗಾರ್ತಿ ವಂದನಾ ಕಠಾರಿಯ ಮನೆ ಮುಂದೆ ಹೋಗಿ ಜಾತಿ ನಿಂದನೆ ಮಾಡುವ ಧೈರ್ಯ ಎಲ್ಲಿಂದ ಬಂತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಮಗಳೂ ದೇಶದ ಮಗಳು ಎಂಬ ಘೋಷಣೆಗಳು ಮೊಳಗಿದವು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರಾದ ಗೌರಿ, ದಸಸಂ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ ಮಾತನಾಡಿದರು. ಹಿರಿಯ ದಲಿತ ಹೋರಾಟಗಾರರಾದ ವಿ.ನಾಗರಾಜ್, ರಾಜಾಸಾಬ್ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...