Homeಚಳವಳಿಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕೇಂದ್ರದ ಮೋದಿ ಸರ್ಕಾರ ಮನುಶಾಸ್ತ್ರದ ಅಡಿಪಾಯದ ಮೇಲೆ ನಡೆಯುತ್ತಿದೆ. ಹಾಗಾಗಿ ಅದಕ್ಕೆ ದಲಿತ ದಮನಿತರ ಕೂಗು ಕೇಳುತ್ತಿಲ್ಲ. ಪಂಚೇಂದ್ರೀಯ ಕಳೆದುಕೊಂಡಿರುವ ಸರ್ಕಾರಕ್ಕೆ ನಾವು ಬಿಸಿಮುಟ್ಟಿಸಿಬೇಕಿದೆ.

- Advertisement -
- Advertisement -

ದೆಹಲಿಯ ನಂಗಲಿ ದಲಿತ ಮಗುವಿನ ಬರ್ಬರ ಅತ್ಯಾಚಾರವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಏಕೆ ಮಾತನಾಡಲಿಲ್ಲ? ದೇಶದ ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದದ ರಾಜ್ಯಾಧ್ಯಕ್ಷರಾದ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಅಪ್ರಾಪ್ತ ದಲಿತ ಮಗುವಿನ ಅತ್ಯಾಚಾರ ಖಂಡಿಸಿ ದಸಸಂ ಒಕ್ಕೂಟ (ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ಒಕ್ಕೂಟ), ಕರ್ನಾಟಕ ಜನಶಕ್ತಿ ಮತ್ತು ತಮಟೆ ವೇದಿಕೆಗಳ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಉನ್ನತ ಕುಟುಂಬದ ಹೆಣ್ಣು ಮಗಳಿಗೆ ಅನ್ಯಾಯವಾದರೆ ಇಡೀ ನಾಗರೀಕ ಸಮಾಜ ಪ್ರತಿಭಟಿಸುತ್ತದೆ. ಮಾಧ್ಯಮಗಳು ದೊಡ್ಡ ಸುದ್ದಿ ಮಾಡುತ್ತವೆ. ಇದು ಒಳ್ಳೆಯದು. ಆದರೆ ತಳಸಮುದಾಯದ, ದಲಿತರ ಮೇಲಿನ ಅತ್ಯಾಚಾರಗಳಿಗೆ ಇದೇ ರೀತಿಯ ಸ್ಪಂದನೆ ಇರುವುದಿಲ್ಲ. ಈ ತಾರತಮ್ಯ ಏಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಘಟನೆಗೆ ಇಡೀ ದೇಶ ತೀವ್ರವಾಗಿ ಸ್ಪಂದಿಸಿತು. ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಗುಂಡಿಟ್ಟು ಹತ್ಯೆ ಮಾಡಲಾಯಿತು. ಇದು ಮಾನವ ಹಕ್ಕುಗಳ ಉಲ್ಲಂಘನೆ ಸಹ. ಆದರೆ ಹತ್ರಾಸ್ ದಲಿತ ಮಗಳ ಅತ್ಯಾಚಾರಗೈದು ಕೊಲೆ ಮಾಡಿ ಶವ ಕೂಡದೇ ಸುಟ್ಟು ಹಾಕಿತು ಆದಿತ್ಯನಾಥ್ ಸರ್ಕಾರ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರದ ಮೋದಿ ಸರ್ಕಾರ ಮನುಶಾಸ್ತ್ರದ ಅಡಿಪಾಯದ ಮೇಲೆ ನಡೆಯುತ್ತಿದೆ. ಹಾಗಾಗಿ ಅದಕ್ಕೆ ದಲಿತ ದಮನಿತರ ಕೂಗು ಕೇಳುತ್ತಿಲ್ಲ. ಪಂಚೇಂದ್ರೀಯ ಕಳೆದುಕೊಂಡಿರುವ ಸರ್ಕಾರಕ್ಕೆ ನಾವು ಬಿಸಿಮುಟ್ಟಿಸಿಬೇಕಿದೆ ಎಂದು ಅವರು ಹೇಳಿದರು.

ಹಿರಿಯ ಹೋರಾಟಗಾರರಾದ ಬಿ.ಶ್ರೀಪಾದ್ ಭಟ್ ಮಾತನಾಡಿ, “ಇಷ್ಟು ವರ್ಷಗಳಾದರೂ ಬರ್ಬರ ಅತ್ಯಾಚಾರಗಳನ್ನು ತಡೆಯಲು ನಾವು ವಿಫಲರಾಗಿದ್ದೇವೆ. ನಾಚಿಕೆಯಿಂದ ತಲೆತಗ್ಗಿಸಿ ಮಾತನಾಡುತ್ತಿದ್ದೇನೆ. ಇಲ್ಲಿ ಮಾತೇ ಒಂದು ಕ್ರೌರ್ಯದ ರೂಪದಲ್ಲಿದೆ. ನ್ಯಾವ್ಯಾರು ಮಾತನಾಡುವ ಅರ್ಹತೆ ಉಳಿಸಿಕೊಂಡಿಲ್ಲ” ಎಂದು ವಿಷಾಧ ವ್ಯಕ್ತಪಡಿಸಿದರು.

ಮಹಿಳೆಯರಿಗೆ ಸಾಮಾಜಿಕ ಭದ್ರತೆ ಬಗ್ಗೆ ನಾವು ಮಾತನಾಡುತ್ತಿಲ್ಲ. ದುಷ್ಕರ್ಮಿಗಳು ಭಾರತ ತಂಡದ ಹಾಕಿ ಆಟಗಾರ್ತಿ ವಂದನಾ ಕಠಾರಿಯ ಮನೆ ಮುಂದೆ ಹೋಗಿ ಜಾತಿ ನಿಂದನೆ ಮಾಡುವ ಧೈರ್ಯ ಎಲ್ಲಿಂದ ಬಂತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಮಗಳೂ ದೇಶದ ಮಗಳು ಎಂಬ ಘೋಷಣೆಗಳು ಮೊಳಗಿದವು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರಾದ ಗೌರಿ, ದಸಸಂ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ ಮಾತನಾಡಿದರು. ಹಿರಿಯ ದಲಿತ ಹೋರಾಟಗಾರರಾದ ವಿ.ನಾಗರಾಜ್, ರಾಜಾಸಾಬ್ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...