Homeಚಳವಳಿಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕೇಂದ್ರದ ಮೋದಿ ಸರ್ಕಾರ ಮನುಶಾಸ್ತ್ರದ ಅಡಿಪಾಯದ ಮೇಲೆ ನಡೆಯುತ್ತಿದೆ. ಹಾಗಾಗಿ ಅದಕ್ಕೆ ದಲಿತ ದಮನಿತರ ಕೂಗು ಕೇಳುತ್ತಿಲ್ಲ. ಪಂಚೇಂದ್ರೀಯ ಕಳೆದುಕೊಂಡಿರುವ ಸರ್ಕಾರಕ್ಕೆ ನಾವು ಬಿಸಿಮುಟ್ಟಿಸಿಬೇಕಿದೆ.

- Advertisement -
- Advertisement -

ದೆಹಲಿಯ ನಂಗಲಿ ದಲಿತ ಮಗುವಿನ ಬರ್ಬರ ಅತ್ಯಾಚಾರವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಏಕೆ ಮಾತನಾಡಲಿಲ್ಲ? ದೇಶದ ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದದ ರಾಜ್ಯಾಧ್ಯಕ್ಷರಾದ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಅಪ್ರಾಪ್ತ ದಲಿತ ಮಗುವಿನ ಅತ್ಯಾಚಾರ ಖಂಡಿಸಿ ದಸಸಂ ಒಕ್ಕೂಟ (ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ಒಕ್ಕೂಟ), ಕರ್ನಾಟಕ ಜನಶಕ್ತಿ ಮತ್ತು ತಮಟೆ ವೇದಿಕೆಗಳ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಉನ್ನತ ಕುಟುಂಬದ ಹೆಣ್ಣು ಮಗಳಿಗೆ ಅನ್ಯಾಯವಾದರೆ ಇಡೀ ನಾಗರೀಕ ಸಮಾಜ ಪ್ರತಿಭಟಿಸುತ್ತದೆ. ಮಾಧ್ಯಮಗಳು ದೊಡ್ಡ ಸುದ್ದಿ ಮಾಡುತ್ತವೆ. ಇದು ಒಳ್ಳೆಯದು. ಆದರೆ ತಳಸಮುದಾಯದ, ದಲಿತರ ಮೇಲಿನ ಅತ್ಯಾಚಾರಗಳಿಗೆ ಇದೇ ರೀತಿಯ ಸ್ಪಂದನೆ ಇರುವುದಿಲ್ಲ. ಈ ತಾರತಮ್ಯ ಏಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಘಟನೆಗೆ ಇಡೀ ದೇಶ ತೀವ್ರವಾಗಿ ಸ್ಪಂದಿಸಿತು. ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಗುಂಡಿಟ್ಟು ಹತ್ಯೆ ಮಾಡಲಾಯಿತು. ಇದು ಮಾನವ ಹಕ್ಕುಗಳ ಉಲ್ಲಂಘನೆ ಸಹ. ಆದರೆ ಹತ್ರಾಸ್ ದಲಿತ ಮಗಳ ಅತ್ಯಾಚಾರಗೈದು ಕೊಲೆ ಮಾಡಿ ಶವ ಕೂಡದೇ ಸುಟ್ಟು ಹಾಕಿತು ಆದಿತ್ಯನಾಥ್ ಸರ್ಕಾರ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರದ ಮೋದಿ ಸರ್ಕಾರ ಮನುಶಾಸ್ತ್ರದ ಅಡಿಪಾಯದ ಮೇಲೆ ನಡೆಯುತ್ತಿದೆ. ಹಾಗಾಗಿ ಅದಕ್ಕೆ ದಲಿತ ದಮನಿತರ ಕೂಗು ಕೇಳುತ್ತಿಲ್ಲ. ಪಂಚೇಂದ್ರೀಯ ಕಳೆದುಕೊಂಡಿರುವ ಸರ್ಕಾರಕ್ಕೆ ನಾವು ಬಿಸಿಮುಟ್ಟಿಸಿಬೇಕಿದೆ ಎಂದು ಅವರು ಹೇಳಿದರು.

ಹಿರಿಯ ಹೋರಾಟಗಾರರಾದ ಬಿ.ಶ್ರೀಪಾದ್ ಭಟ್ ಮಾತನಾಡಿ, “ಇಷ್ಟು ವರ್ಷಗಳಾದರೂ ಬರ್ಬರ ಅತ್ಯಾಚಾರಗಳನ್ನು ತಡೆಯಲು ನಾವು ವಿಫಲರಾಗಿದ್ದೇವೆ. ನಾಚಿಕೆಯಿಂದ ತಲೆತಗ್ಗಿಸಿ ಮಾತನಾಡುತ್ತಿದ್ದೇನೆ. ಇಲ್ಲಿ ಮಾತೇ ಒಂದು ಕ್ರೌರ್ಯದ ರೂಪದಲ್ಲಿದೆ. ನ್ಯಾವ್ಯಾರು ಮಾತನಾಡುವ ಅರ್ಹತೆ ಉಳಿಸಿಕೊಂಡಿಲ್ಲ” ಎಂದು ವಿಷಾಧ ವ್ಯಕ್ತಪಡಿಸಿದರು.

ಮಹಿಳೆಯರಿಗೆ ಸಾಮಾಜಿಕ ಭದ್ರತೆ ಬಗ್ಗೆ ನಾವು ಮಾತನಾಡುತ್ತಿಲ್ಲ. ದುಷ್ಕರ್ಮಿಗಳು ಭಾರತ ತಂಡದ ಹಾಕಿ ಆಟಗಾರ್ತಿ ವಂದನಾ ಕಠಾರಿಯ ಮನೆ ಮುಂದೆ ಹೋಗಿ ಜಾತಿ ನಿಂದನೆ ಮಾಡುವ ಧೈರ್ಯ ಎಲ್ಲಿಂದ ಬಂತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಮಗಳೂ ದೇಶದ ಮಗಳು ಎಂಬ ಘೋಷಣೆಗಳು ಮೊಳಗಿದವು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರಾದ ಗೌರಿ, ದಸಸಂ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ ಮಾತನಾಡಿದರು. ಹಿರಿಯ ದಲಿತ ಹೋರಾಟಗಾರರಾದ ವಿ.ನಾಗರಾಜ್, ರಾಜಾಸಾಬ್ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...