ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿರುವುದನ್ನು ವಿರೋಧಿಸಿ ‘ಬಿಲ್ಕಿಸ್ಗೆ ನ್ಯಾಯ ದೊರಕಿಸಿಕೊಡುವಂತೆ ಕರ್ನಾಟಕ ಆಗ್ರಹಿಸುತ್ತದೆ’ ಎಂಬ ಘೋಷವಾಕ್ಯದೊಂದಿಗೆ ಆಗಸ್ಟ್ 27 ರ ಶನಿವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಭಟನೆಯು ಶನಿವಾರ ಬೆಳಿಗ್ಗೆ 10:30 ಕ್ಕೆ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿದೆ.
ಬಿಲ್ಕಿಸ್ ಬಾನೋ ಅವರನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಮತ್ತು ಅವರ ಕುಟುಂಬಿಕರ ಹತ್ಯೆ ನಡೆಸಿದ್ದ ಅಪರಾಧಿಗಳನ್ನು ಗುಜರಾತ್ ಸರ್ಕಾರವು ಸನ್ನಡತೆಯ ಆಧಾರದಲ್ಲಿ ಕ್ಷಮಾದಾನ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಬಿಜೆಪಿ ಸರ್ಕಾರದ ಈ ನಡೆಯನ್ನು ಸ್ವತಃ ಪಕ್ಷದಿಂದಲೇ ಆಕ್ಷೇಪ ವ್ಯಕ್ತವಾಗಿದ್ದು, ದೇಶದಾದ್ಯಂತ ಹಲವಾರು ಮಹಿಳಾ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಹಾಗೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಇದನ್ನೂ ಓದಿ: ಬಿಲ್ಕಿಸ್ ಬಾನೋಳ ಮುಗಿಯದ ವನವಾಸ ಮತ್ತು ಸಂಸ್ಕಾರವಂತ ಅತ್ಯಾಚಾರಿಗಳು
ಬಿಲ್ಕಿಸ್ ಬಾನೋ ಅವರ 20 ವರ್ಷದ ಹೋರಾಟಕ್ಕೆ ಬೆಂಬಲ ನೀಡಿರುವ ಹೋರಾಟ ಸಮಿತಿ, “ಅವರ ಜೊತೆ ಕೊನೆಯವರೆಗೂ ಇರುತ್ತೇವೆ. 11 ಜನ ಸಾಮೂಹಿಕ ಕೊಲೆಗಾರರು ಮತ್ತು ಅತ್ಯಾಚಾರಿಗಳನ್ನು ಮತ್ತೆ ಜೈಲಿಗೆ ಹಾಕುವಂತೆ ಒತ್ತಾಯಿಸುತ್ತೇವೆ” ಎಂದು ಹೇಳಿದೆ.