Homeಕರ್ನಾಟಕಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ. ಕನ್ನಡ ಹೋರಾಟಗಾರರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಕುತಂತ್ರವಿದೆ ಎಂದು ನಮ್ಮ ಧ್ವನಿ ಬಳಗದ ಮಹೇಂದ್ರ ಕುಮಾರ್ ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿ ಧರ್ಮದ ವಿಚಾರ ಮುನ್ನಲೆಗೆ ತರುವುದು ಸರಿಯಲ್ಲ. ಕರ್ನಾಟಕದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿರುವವರು ಕನ್ನಡ ಕಲಿತು ವ್ಯವಹರಿಸಬೇಕು ಮತ್ತು ಕನ್ನಡಿಗರಿಗೆ ಸ್ಥಳೀಯ ಉದ್ಯೋಗ ಸಿಗಬೇಕು ಇವೇ ನಮ್ಮ ಪ್ರಮುಖ ಹಕ್ಕೊತ್ತಾಯಗಳಾಗಿವೆ ಎಂದರು.

ಕೇವಲ ಒಂದು ಬ್ಯಾನರ್ ಹರಿದ ವಿಚಾರವಾಗಿದ್ದರೆ ಬಿ.ಹರೀಶ್ ಕುಮಾರ್ ರವರ ಮನೆ ಮುಂದೆ 2 ಪೊಲೀಸ್ ಬಸ್ ಗಳನ್ನು ತಂದು ನಿಲ್ಲಿಸುವ ಅಗತ್ಯವಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಮಿತ್ ಶಾರವರ ಆದೇಶದ ಮೇರೆಗೆ ಈ ಬಂಧನ ನಡೆಸಿರುವುದು ಅಕ್ಷಮ್ಯ ಎಂದು ತಿಳಿಸಿದರು.

ಕನ್ನಡ ಚಳವಳಿಯ ಅಧ್ಯಕ್ಷ ನಾಗೇಶ್ ಮಾತನಾಡಿ “ನಾವು ಜಾತಿ ಧರ್ಮದ ಭೇದ ಮಾಡುವುದಿಲ್ಲ. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ. ಕನ್ನಡ ಉಳಿಸಿ ಬೆಳೆಸಲು ಕನ್ನಡ ಸಂಘಟನೆಗಳು ಮಾತ್ರವಲ್ಲದೇ ನಾಡಿನ ಎಲ್ಲಾ ಜನರು ಸ್ಪಂದಿಸುತ್ತಿರುವುದು ಸಂತೋಷಕರ ವಿಷಯವಾಗಿದೆ. ನಾವು ಜೈಲುಗಳಿಗೆ ಹೆದರುವ ಪ್ರಮೇಯವೇ ಇಲ್ಲ ಬದಲಿಗೆ ಕನ್ನಡ ಚಳವಳಿ ಇನ್ನೂ ಜೋರಾಗಲಿದೆ ಎಂದರು.

ಪತ್ರಕರ್ತ ಲಕ್ಷ್ಮಣ್ ಹೂಗಾರ್ ಮಾತನಾಡಿ ಕನ್ನಡಪರ ಸಂಘಟನೆಗಳು ತಮ್ಮ ಮನೆಗಳಿಗಾಗಿ ಹೋರಾಟ ಮಾಡಿದವರಲ್ಲ. ಅವರು ಕನ್ನಡಕ್ಕಾಗಿ ಹೋರಾಟ ನಡೆಸಿದವರು. ಅಂತಹವರನ್ನು ಜೈಲಿಗೆ ಹಾಕಿರುವುದು ದುರಂತ. ಪ್ರತಿಯೊಬ್ಬ ಕನ್ನಡಿಗನೂ ಇದನ್ನು ಖಂಡಿಸಬೇಕು ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮಲತಾಯಿ ಮಕ್ಕಳಾಗುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರು ನಾವು ಭಾಷಾಂಧರಲ್ಲ. ನಾವು ಎಲ್ಲಾ ಜನರನ್ನು ಸಹೋದರರ ರೀತಿ ಪ್ರೀತಿಸುತ್ತಿದ್ದೇವೆ. ಆದರೆ ಅವರು ಇಲ್ಲಿಯ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿದ ಮೇಲೆ ಹಲವು ವರ್ಷಗಳಲ್ಲಿ ಕನ್ನಡ ಕಲಿಯಿರಿ ಎಂದು ಹೇಳುವುದು ತಪ್ಪೇ? ನಿಮ್ಮ ಮನೆಯಲ್ಲಿ ಖಾಸಗಿಯಾಗಿ ಯಾವ ಭಾಷೆ ಬೇಕಾದರೂ ಮಾತಾಡಿ ಆದರೆ ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಬಳಸಿ ಎಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದರು.

ನಾವು ಯಾವುದೇ ಧರ್ಮದ ವಿರುದ್ಧ ಹೋರಾಡುವುದಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ ಸಿಗಬೇಕು, ರೈತರಿಗೆ ಒಳ್ಳೆಯ ನೀರಾವರಿ ಯೋಜನೆ ಮತ್ತು ಬೆಲೆ ಸಿಗಬೇಕು ಎಂದು ಕೇಳುವುದು ತಪ್ಪೇ? ಇಲ್ಲ ನಾವು ಹೋರಾಟವನ್ನು ಮುಂದುವರೆಸೋಣ ಎಂದು ಒತ್ತಾಯಿಸಿದರು.

ಡಿ.ವೈ.ಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ, ಬಸವರಾಜ್ ಪೂಜಾರ್, ಕರ್ನಾಟಕ ರಣಧೀರ ಪಡೆಯ ರಮಾನಂದ್ ಅಂಕೋಲಾ, ಸುವರ್ಣ ಕರ್ನಾಟಕ ಜನಪರ ವೇದಿಕೆಯ ರಮೇಶ್ ಗೌಡ, ಎಸ್.ಎಫ್.ಐ ನ ಗುರುರಾಜ ದೇಸಾಯಿ, ಕನ್ನಡ ಮನಸ್ಸುಗಳ ಪ್ರತಿಷ್ಥಾನ, ನಿಕೇತ್ ರಾಜ್ ಮೌರ್ಯ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...