Homeಕರ್ನಾಟಕಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ. ಕನ್ನಡ ಹೋರಾಟಗಾರರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಕುತಂತ್ರವಿದೆ ಎಂದು ನಮ್ಮ ಧ್ವನಿ ಬಳಗದ ಮಹೇಂದ್ರ ಕುಮಾರ್ ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿ ಧರ್ಮದ ವಿಚಾರ ಮುನ್ನಲೆಗೆ ತರುವುದು ಸರಿಯಲ್ಲ. ಕರ್ನಾಟಕದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿರುವವರು ಕನ್ನಡ ಕಲಿತು ವ್ಯವಹರಿಸಬೇಕು ಮತ್ತು ಕನ್ನಡಿಗರಿಗೆ ಸ್ಥಳೀಯ ಉದ್ಯೋಗ ಸಿಗಬೇಕು ಇವೇ ನಮ್ಮ ಪ್ರಮುಖ ಹಕ್ಕೊತ್ತಾಯಗಳಾಗಿವೆ ಎಂದರು.

ಕೇವಲ ಒಂದು ಬ್ಯಾನರ್ ಹರಿದ ವಿಚಾರವಾಗಿದ್ದರೆ ಬಿ.ಹರೀಶ್ ಕುಮಾರ್ ರವರ ಮನೆ ಮುಂದೆ 2 ಪೊಲೀಸ್ ಬಸ್ ಗಳನ್ನು ತಂದು ನಿಲ್ಲಿಸುವ ಅಗತ್ಯವಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಮಿತ್ ಶಾರವರ ಆದೇಶದ ಮೇರೆಗೆ ಈ ಬಂಧನ ನಡೆಸಿರುವುದು ಅಕ್ಷಮ್ಯ ಎಂದು ತಿಳಿಸಿದರು.

ಕನ್ನಡ ಚಳವಳಿಯ ಅಧ್ಯಕ್ಷ ನಾಗೇಶ್ ಮಾತನಾಡಿ “ನಾವು ಜಾತಿ ಧರ್ಮದ ಭೇದ ಮಾಡುವುದಿಲ್ಲ. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ. ಕನ್ನಡ ಉಳಿಸಿ ಬೆಳೆಸಲು ಕನ್ನಡ ಸಂಘಟನೆಗಳು ಮಾತ್ರವಲ್ಲದೇ ನಾಡಿನ ಎಲ್ಲಾ ಜನರು ಸ್ಪಂದಿಸುತ್ತಿರುವುದು ಸಂತೋಷಕರ ವಿಷಯವಾಗಿದೆ. ನಾವು ಜೈಲುಗಳಿಗೆ ಹೆದರುವ ಪ್ರಮೇಯವೇ ಇಲ್ಲ ಬದಲಿಗೆ ಕನ್ನಡ ಚಳವಳಿ ಇನ್ನೂ ಜೋರಾಗಲಿದೆ ಎಂದರು.

ಪತ್ರಕರ್ತ ಲಕ್ಷ್ಮಣ್ ಹೂಗಾರ್ ಮಾತನಾಡಿ ಕನ್ನಡಪರ ಸಂಘಟನೆಗಳು ತಮ್ಮ ಮನೆಗಳಿಗಾಗಿ ಹೋರಾಟ ಮಾಡಿದವರಲ್ಲ. ಅವರು ಕನ್ನಡಕ್ಕಾಗಿ ಹೋರಾಟ ನಡೆಸಿದವರು. ಅಂತಹವರನ್ನು ಜೈಲಿಗೆ ಹಾಕಿರುವುದು ದುರಂತ. ಪ್ರತಿಯೊಬ್ಬ ಕನ್ನಡಿಗನೂ ಇದನ್ನು ಖಂಡಿಸಬೇಕು ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮಲತಾಯಿ ಮಕ್ಕಳಾಗುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರು ನಾವು ಭಾಷಾಂಧರಲ್ಲ. ನಾವು ಎಲ್ಲಾ ಜನರನ್ನು ಸಹೋದರರ ರೀತಿ ಪ್ರೀತಿಸುತ್ತಿದ್ದೇವೆ. ಆದರೆ ಅವರು ಇಲ್ಲಿಯ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿದ ಮೇಲೆ ಹಲವು ವರ್ಷಗಳಲ್ಲಿ ಕನ್ನಡ ಕಲಿಯಿರಿ ಎಂದು ಹೇಳುವುದು ತಪ್ಪೇ? ನಿಮ್ಮ ಮನೆಯಲ್ಲಿ ಖಾಸಗಿಯಾಗಿ ಯಾವ ಭಾಷೆ ಬೇಕಾದರೂ ಮಾತಾಡಿ ಆದರೆ ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಬಳಸಿ ಎಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದರು.

ನಾವು ಯಾವುದೇ ಧರ್ಮದ ವಿರುದ್ಧ ಹೋರಾಡುವುದಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ ಸಿಗಬೇಕು, ರೈತರಿಗೆ ಒಳ್ಳೆಯ ನೀರಾವರಿ ಯೋಜನೆ ಮತ್ತು ಬೆಲೆ ಸಿಗಬೇಕು ಎಂದು ಕೇಳುವುದು ತಪ್ಪೇ? ಇಲ್ಲ ನಾವು ಹೋರಾಟವನ್ನು ಮುಂದುವರೆಸೋಣ ಎಂದು ಒತ್ತಾಯಿಸಿದರು.

ಡಿ.ವೈ.ಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ, ಬಸವರಾಜ್ ಪೂಜಾರ್, ಕರ್ನಾಟಕ ರಣಧೀರ ಪಡೆಯ ರಮಾನಂದ್ ಅಂಕೋಲಾ, ಸುವರ್ಣ ಕರ್ನಾಟಕ ಜನಪರ ವೇದಿಕೆಯ ರಮೇಶ್ ಗೌಡ, ಎಸ್.ಎಫ್.ಐ ನ ಗುರುರಾಜ ದೇಸಾಯಿ, ಕನ್ನಡ ಮನಸ್ಸುಗಳ ಪ್ರತಿಷ್ಥಾನ, ನಿಕೇತ್ ರಾಜ್ ಮೌರ್ಯ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...