Homeಕರ್ನಾಟಕಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ. ಕನ್ನಡ ಹೋರಾಟಗಾರರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಕುತಂತ್ರವಿದೆ ಎಂದು ನಮ್ಮ ಧ್ವನಿ ಬಳಗದ ಮಹೇಂದ್ರ ಕುಮಾರ್ ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿ ಧರ್ಮದ ವಿಚಾರ ಮುನ್ನಲೆಗೆ ತರುವುದು ಸರಿಯಲ್ಲ. ಕರ್ನಾಟಕದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿರುವವರು ಕನ್ನಡ ಕಲಿತು ವ್ಯವಹರಿಸಬೇಕು ಮತ್ತು ಕನ್ನಡಿಗರಿಗೆ ಸ್ಥಳೀಯ ಉದ್ಯೋಗ ಸಿಗಬೇಕು ಇವೇ ನಮ್ಮ ಪ್ರಮುಖ ಹಕ್ಕೊತ್ತಾಯಗಳಾಗಿವೆ ಎಂದರು.

ಕೇವಲ ಒಂದು ಬ್ಯಾನರ್ ಹರಿದ ವಿಚಾರವಾಗಿದ್ದರೆ ಬಿ.ಹರೀಶ್ ಕುಮಾರ್ ರವರ ಮನೆ ಮುಂದೆ 2 ಪೊಲೀಸ್ ಬಸ್ ಗಳನ್ನು ತಂದು ನಿಲ್ಲಿಸುವ ಅಗತ್ಯವಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಮಿತ್ ಶಾರವರ ಆದೇಶದ ಮೇರೆಗೆ ಈ ಬಂಧನ ನಡೆಸಿರುವುದು ಅಕ್ಷಮ್ಯ ಎಂದು ತಿಳಿಸಿದರು.

ಕನ್ನಡ ಚಳವಳಿಯ ಅಧ್ಯಕ್ಷ ನಾಗೇಶ್ ಮಾತನಾಡಿ “ನಾವು ಜಾತಿ ಧರ್ಮದ ಭೇದ ಮಾಡುವುದಿಲ್ಲ. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ. ಕನ್ನಡ ಉಳಿಸಿ ಬೆಳೆಸಲು ಕನ್ನಡ ಸಂಘಟನೆಗಳು ಮಾತ್ರವಲ್ಲದೇ ನಾಡಿನ ಎಲ್ಲಾ ಜನರು ಸ್ಪಂದಿಸುತ್ತಿರುವುದು ಸಂತೋಷಕರ ವಿಷಯವಾಗಿದೆ. ನಾವು ಜೈಲುಗಳಿಗೆ ಹೆದರುವ ಪ್ರಮೇಯವೇ ಇಲ್ಲ ಬದಲಿಗೆ ಕನ್ನಡ ಚಳವಳಿ ಇನ್ನೂ ಜೋರಾಗಲಿದೆ ಎಂದರು.

ಪತ್ರಕರ್ತ ಲಕ್ಷ್ಮಣ್ ಹೂಗಾರ್ ಮಾತನಾಡಿ ಕನ್ನಡಪರ ಸಂಘಟನೆಗಳು ತಮ್ಮ ಮನೆಗಳಿಗಾಗಿ ಹೋರಾಟ ಮಾಡಿದವರಲ್ಲ. ಅವರು ಕನ್ನಡಕ್ಕಾಗಿ ಹೋರಾಟ ನಡೆಸಿದವರು. ಅಂತಹವರನ್ನು ಜೈಲಿಗೆ ಹಾಕಿರುವುದು ದುರಂತ. ಪ್ರತಿಯೊಬ್ಬ ಕನ್ನಡಿಗನೂ ಇದನ್ನು ಖಂಡಿಸಬೇಕು ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮಲತಾಯಿ ಮಕ್ಕಳಾಗುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರು ನಾವು ಭಾಷಾಂಧರಲ್ಲ. ನಾವು ಎಲ್ಲಾ ಜನರನ್ನು ಸಹೋದರರ ರೀತಿ ಪ್ರೀತಿಸುತ್ತಿದ್ದೇವೆ. ಆದರೆ ಅವರು ಇಲ್ಲಿಯ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿದ ಮೇಲೆ ಹಲವು ವರ್ಷಗಳಲ್ಲಿ ಕನ್ನಡ ಕಲಿಯಿರಿ ಎಂದು ಹೇಳುವುದು ತಪ್ಪೇ? ನಿಮ್ಮ ಮನೆಯಲ್ಲಿ ಖಾಸಗಿಯಾಗಿ ಯಾವ ಭಾಷೆ ಬೇಕಾದರೂ ಮಾತಾಡಿ ಆದರೆ ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಬಳಸಿ ಎಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದರು.

ನಾವು ಯಾವುದೇ ಧರ್ಮದ ವಿರುದ್ಧ ಹೋರಾಡುವುದಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ ಸಿಗಬೇಕು, ರೈತರಿಗೆ ಒಳ್ಳೆಯ ನೀರಾವರಿ ಯೋಜನೆ ಮತ್ತು ಬೆಲೆ ಸಿಗಬೇಕು ಎಂದು ಕೇಳುವುದು ತಪ್ಪೇ? ಇಲ್ಲ ನಾವು ಹೋರಾಟವನ್ನು ಮುಂದುವರೆಸೋಣ ಎಂದು ಒತ್ತಾಯಿಸಿದರು.

ಡಿ.ವೈ.ಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ, ಬಸವರಾಜ್ ಪೂಜಾರ್, ಕರ್ನಾಟಕ ರಣಧೀರ ಪಡೆಯ ರಮಾನಂದ್ ಅಂಕೋಲಾ, ಸುವರ್ಣ ಕರ್ನಾಟಕ ಜನಪರ ವೇದಿಕೆಯ ರಮೇಶ್ ಗೌಡ, ಎಸ್.ಎಫ್.ಐ ನ ಗುರುರಾಜ ದೇಸಾಯಿ, ಕನ್ನಡ ಮನಸ್ಸುಗಳ ಪ್ರತಿಷ್ಥಾನ, ನಿಕೇತ್ ರಾಜ್ ಮೌರ್ಯ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...