Homeಕರ್ನಾಟಕಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ. ಕನ್ನಡ ಹೋರಾಟಗಾರರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಕುತಂತ್ರವಿದೆ ಎಂದು ನಮ್ಮ ಧ್ವನಿ ಬಳಗದ ಮಹೇಂದ್ರ ಕುಮಾರ್ ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿ ಧರ್ಮದ ವಿಚಾರ ಮುನ್ನಲೆಗೆ ತರುವುದು ಸರಿಯಲ್ಲ. ಕರ್ನಾಟಕದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿರುವವರು ಕನ್ನಡ ಕಲಿತು ವ್ಯವಹರಿಸಬೇಕು ಮತ್ತು ಕನ್ನಡಿಗರಿಗೆ ಸ್ಥಳೀಯ ಉದ್ಯೋಗ ಸಿಗಬೇಕು ಇವೇ ನಮ್ಮ ಪ್ರಮುಖ ಹಕ್ಕೊತ್ತಾಯಗಳಾಗಿವೆ ಎಂದರು.

ಕೇವಲ ಒಂದು ಬ್ಯಾನರ್ ಹರಿದ ವಿಚಾರವಾಗಿದ್ದರೆ ಬಿ.ಹರೀಶ್ ಕುಮಾರ್ ರವರ ಮನೆ ಮುಂದೆ 2 ಪೊಲೀಸ್ ಬಸ್ ಗಳನ್ನು ತಂದು ನಿಲ್ಲಿಸುವ ಅಗತ್ಯವಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಮಿತ್ ಶಾರವರ ಆದೇಶದ ಮೇರೆಗೆ ಈ ಬಂಧನ ನಡೆಸಿರುವುದು ಅಕ್ಷಮ್ಯ ಎಂದು ತಿಳಿಸಿದರು.

ಕನ್ನಡ ಚಳವಳಿಯ ಅಧ್ಯಕ್ಷ ನಾಗೇಶ್ ಮಾತನಾಡಿ “ನಾವು ಜಾತಿ ಧರ್ಮದ ಭೇದ ಮಾಡುವುದಿಲ್ಲ. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ. ಕನ್ನಡ ಉಳಿಸಿ ಬೆಳೆಸಲು ಕನ್ನಡ ಸಂಘಟನೆಗಳು ಮಾತ್ರವಲ್ಲದೇ ನಾಡಿನ ಎಲ್ಲಾ ಜನರು ಸ್ಪಂದಿಸುತ್ತಿರುವುದು ಸಂತೋಷಕರ ವಿಷಯವಾಗಿದೆ. ನಾವು ಜೈಲುಗಳಿಗೆ ಹೆದರುವ ಪ್ರಮೇಯವೇ ಇಲ್ಲ ಬದಲಿಗೆ ಕನ್ನಡ ಚಳವಳಿ ಇನ್ನೂ ಜೋರಾಗಲಿದೆ ಎಂದರು.

ಪತ್ರಕರ್ತ ಲಕ್ಷ್ಮಣ್ ಹೂಗಾರ್ ಮಾತನಾಡಿ ಕನ್ನಡಪರ ಸಂಘಟನೆಗಳು ತಮ್ಮ ಮನೆಗಳಿಗಾಗಿ ಹೋರಾಟ ಮಾಡಿದವರಲ್ಲ. ಅವರು ಕನ್ನಡಕ್ಕಾಗಿ ಹೋರಾಟ ನಡೆಸಿದವರು. ಅಂತಹವರನ್ನು ಜೈಲಿಗೆ ಹಾಕಿರುವುದು ದುರಂತ. ಪ್ರತಿಯೊಬ್ಬ ಕನ್ನಡಿಗನೂ ಇದನ್ನು ಖಂಡಿಸಬೇಕು ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮಲತಾಯಿ ಮಕ್ಕಳಾಗುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರು ನಾವು ಭಾಷಾಂಧರಲ್ಲ. ನಾವು ಎಲ್ಲಾ ಜನರನ್ನು ಸಹೋದರರ ರೀತಿ ಪ್ರೀತಿಸುತ್ತಿದ್ದೇವೆ. ಆದರೆ ಅವರು ಇಲ್ಲಿಯ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿದ ಮೇಲೆ ಹಲವು ವರ್ಷಗಳಲ್ಲಿ ಕನ್ನಡ ಕಲಿಯಿರಿ ಎಂದು ಹೇಳುವುದು ತಪ್ಪೇ? ನಿಮ್ಮ ಮನೆಯಲ್ಲಿ ಖಾಸಗಿಯಾಗಿ ಯಾವ ಭಾಷೆ ಬೇಕಾದರೂ ಮಾತಾಡಿ ಆದರೆ ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಬಳಸಿ ಎಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದರು.

ನಾವು ಯಾವುದೇ ಧರ್ಮದ ವಿರುದ್ಧ ಹೋರಾಡುವುದಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ ಸಿಗಬೇಕು, ರೈತರಿಗೆ ಒಳ್ಳೆಯ ನೀರಾವರಿ ಯೋಜನೆ ಮತ್ತು ಬೆಲೆ ಸಿಗಬೇಕು ಎಂದು ಕೇಳುವುದು ತಪ್ಪೇ? ಇಲ್ಲ ನಾವು ಹೋರಾಟವನ್ನು ಮುಂದುವರೆಸೋಣ ಎಂದು ಒತ್ತಾಯಿಸಿದರು.

ಡಿ.ವೈ.ಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ, ಬಸವರಾಜ್ ಪೂಜಾರ್, ಕರ್ನಾಟಕ ರಣಧೀರ ಪಡೆಯ ರಮಾನಂದ್ ಅಂಕೋಲಾ, ಸುವರ್ಣ ಕರ್ನಾಟಕ ಜನಪರ ವೇದಿಕೆಯ ರಮೇಶ್ ಗೌಡ, ಎಸ್.ಎಫ್.ಐ ನ ಗುರುರಾಜ ದೇಸಾಯಿ, ಕನ್ನಡ ಮನಸ್ಸುಗಳ ಪ್ರತಿಷ್ಥಾನ, ನಿಕೇತ್ ರಾಜ್ ಮೌರ್ಯ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...