Homeಕರ್ನಾಟಕಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ. ಕನ್ನಡ ಹೋರಾಟಗಾರರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಕುತಂತ್ರವಿದೆ ಎಂದು ನಮ್ಮ ಧ್ವನಿ ಬಳಗದ ಮಹೇಂದ್ರ ಕುಮಾರ್ ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿ ಧರ್ಮದ ವಿಚಾರ ಮುನ್ನಲೆಗೆ ತರುವುದು ಸರಿಯಲ್ಲ. ಕರ್ನಾಟಕದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿರುವವರು ಕನ್ನಡ ಕಲಿತು ವ್ಯವಹರಿಸಬೇಕು ಮತ್ತು ಕನ್ನಡಿಗರಿಗೆ ಸ್ಥಳೀಯ ಉದ್ಯೋಗ ಸಿಗಬೇಕು ಇವೇ ನಮ್ಮ ಪ್ರಮುಖ ಹಕ್ಕೊತ್ತಾಯಗಳಾಗಿವೆ ಎಂದರು.

ಕೇವಲ ಒಂದು ಬ್ಯಾನರ್ ಹರಿದ ವಿಚಾರವಾಗಿದ್ದರೆ ಬಿ.ಹರೀಶ್ ಕುಮಾರ್ ರವರ ಮನೆ ಮುಂದೆ 2 ಪೊಲೀಸ್ ಬಸ್ ಗಳನ್ನು ತಂದು ನಿಲ್ಲಿಸುವ ಅಗತ್ಯವಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಮಿತ್ ಶಾರವರ ಆದೇಶದ ಮೇರೆಗೆ ಈ ಬಂಧನ ನಡೆಸಿರುವುದು ಅಕ್ಷಮ್ಯ ಎಂದು ತಿಳಿಸಿದರು.

ಕನ್ನಡ ಚಳವಳಿಯ ಅಧ್ಯಕ್ಷ ನಾಗೇಶ್ ಮಾತನಾಡಿ “ನಾವು ಜಾತಿ ಧರ್ಮದ ಭೇದ ಮಾಡುವುದಿಲ್ಲ. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ. ಕನ್ನಡ ಉಳಿಸಿ ಬೆಳೆಸಲು ಕನ್ನಡ ಸಂಘಟನೆಗಳು ಮಾತ್ರವಲ್ಲದೇ ನಾಡಿನ ಎಲ್ಲಾ ಜನರು ಸ್ಪಂದಿಸುತ್ತಿರುವುದು ಸಂತೋಷಕರ ವಿಷಯವಾಗಿದೆ. ನಾವು ಜೈಲುಗಳಿಗೆ ಹೆದರುವ ಪ್ರಮೇಯವೇ ಇಲ್ಲ ಬದಲಿಗೆ ಕನ್ನಡ ಚಳವಳಿ ಇನ್ನೂ ಜೋರಾಗಲಿದೆ ಎಂದರು.

ಪತ್ರಕರ್ತ ಲಕ್ಷ್ಮಣ್ ಹೂಗಾರ್ ಮಾತನಾಡಿ ಕನ್ನಡಪರ ಸಂಘಟನೆಗಳು ತಮ್ಮ ಮನೆಗಳಿಗಾಗಿ ಹೋರಾಟ ಮಾಡಿದವರಲ್ಲ. ಅವರು ಕನ್ನಡಕ್ಕಾಗಿ ಹೋರಾಟ ನಡೆಸಿದವರು. ಅಂತಹವರನ್ನು ಜೈಲಿಗೆ ಹಾಕಿರುವುದು ದುರಂತ. ಪ್ರತಿಯೊಬ್ಬ ಕನ್ನಡಿಗನೂ ಇದನ್ನು ಖಂಡಿಸಬೇಕು ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮಲತಾಯಿ ಮಕ್ಕಳಾಗುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರು ನಾವು ಭಾಷಾಂಧರಲ್ಲ. ನಾವು ಎಲ್ಲಾ ಜನರನ್ನು ಸಹೋದರರ ರೀತಿ ಪ್ರೀತಿಸುತ್ತಿದ್ದೇವೆ. ಆದರೆ ಅವರು ಇಲ್ಲಿಯ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿದ ಮೇಲೆ ಹಲವು ವರ್ಷಗಳಲ್ಲಿ ಕನ್ನಡ ಕಲಿಯಿರಿ ಎಂದು ಹೇಳುವುದು ತಪ್ಪೇ? ನಿಮ್ಮ ಮನೆಯಲ್ಲಿ ಖಾಸಗಿಯಾಗಿ ಯಾವ ಭಾಷೆ ಬೇಕಾದರೂ ಮಾತಾಡಿ ಆದರೆ ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಬಳಸಿ ಎಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದರು.

ನಾವು ಯಾವುದೇ ಧರ್ಮದ ವಿರುದ್ಧ ಹೋರಾಡುವುದಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ ಸಿಗಬೇಕು, ರೈತರಿಗೆ ಒಳ್ಳೆಯ ನೀರಾವರಿ ಯೋಜನೆ ಮತ್ತು ಬೆಲೆ ಸಿಗಬೇಕು ಎಂದು ಕೇಳುವುದು ತಪ್ಪೇ? ಇಲ್ಲ ನಾವು ಹೋರಾಟವನ್ನು ಮುಂದುವರೆಸೋಣ ಎಂದು ಒತ್ತಾಯಿಸಿದರು.

ಡಿ.ವೈ.ಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ, ಬಸವರಾಜ್ ಪೂಜಾರ್, ಕರ್ನಾಟಕ ರಣಧೀರ ಪಡೆಯ ರಮಾನಂದ್ ಅಂಕೋಲಾ, ಸುವರ್ಣ ಕರ್ನಾಟಕ ಜನಪರ ವೇದಿಕೆಯ ರಮೇಶ್ ಗೌಡ, ಎಸ್.ಎಫ್.ಐ ನ ಗುರುರಾಜ ದೇಸಾಯಿ, ಕನ್ನಡ ಮನಸ್ಸುಗಳ ಪ್ರತಿಷ್ಥಾನ, ನಿಕೇತ್ ರಾಜ್ ಮೌರ್ಯ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...