Homeಕರ್ನಾಟಕಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ. ಕನ್ನಡ ಹೋರಾಟಗಾರರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಕುತಂತ್ರವಿದೆ ಎಂದು ನಮ್ಮ ಧ್ವನಿ ಬಳಗದ ಮಹೇಂದ್ರ ಕುಮಾರ್ ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿ ಧರ್ಮದ ವಿಚಾರ ಮುನ್ನಲೆಗೆ ತರುವುದು ಸರಿಯಲ್ಲ. ಕರ್ನಾಟಕದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿರುವವರು ಕನ್ನಡ ಕಲಿತು ವ್ಯವಹರಿಸಬೇಕು ಮತ್ತು ಕನ್ನಡಿಗರಿಗೆ ಸ್ಥಳೀಯ ಉದ್ಯೋಗ ಸಿಗಬೇಕು ಇವೇ ನಮ್ಮ ಪ್ರಮುಖ ಹಕ್ಕೊತ್ತಾಯಗಳಾಗಿವೆ ಎಂದರು.

ಕೇವಲ ಒಂದು ಬ್ಯಾನರ್ ಹರಿದ ವಿಚಾರವಾಗಿದ್ದರೆ ಬಿ.ಹರೀಶ್ ಕುಮಾರ್ ರವರ ಮನೆ ಮುಂದೆ 2 ಪೊಲೀಸ್ ಬಸ್ ಗಳನ್ನು ತಂದು ನಿಲ್ಲಿಸುವ ಅಗತ್ಯವಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಮಿತ್ ಶಾರವರ ಆದೇಶದ ಮೇರೆಗೆ ಈ ಬಂಧನ ನಡೆಸಿರುವುದು ಅಕ್ಷಮ್ಯ ಎಂದು ತಿಳಿಸಿದರು.

ಕನ್ನಡ ಚಳವಳಿಯ ಅಧ್ಯಕ್ಷ ನಾಗೇಶ್ ಮಾತನಾಡಿ “ನಾವು ಜಾತಿ ಧರ್ಮದ ಭೇದ ಮಾಡುವುದಿಲ್ಲ. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ. ಕನ್ನಡ ಉಳಿಸಿ ಬೆಳೆಸಲು ಕನ್ನಡ ಸಂಘಟನೆಗಳು ಮಾತ್ರವಲ್ಲದೇ ನಾಡಿನ ಎಲ್ಲಾ ಜನರು ಸ್ಪಂದಿಸುತ್ತಿರುವುದು ಸಂತೋಷಕರ ವಿಷಯವಾಗಿದೆ. ನಾವು ಜೈಲುಗಳಿಗೆ ಹೆದರುವ ಪ್ರಮೇಯವೇ ಇಲ್ಲ ಬದಲಿಗೆ ಕನ್ನಡ ಚಳವಳಿ ಇನ್ನೂ ಜೋರಾಗಲಿದೆ ಎಂದರು.

ಪತ್ರಕರ್ತ ಲಕ್ಷ್ಮಣ್ ಹೂಗಾರ್ ಮಾತನಾಡಿ ಕನ್ನಡಪರ ಸಂಘಟನೆಗಳು ತಮ್ಮ ಮನೆಗಳಿಗಾಗಿ ಹೋರಾಟ ಮಾಡಿದವರಲ್ಲ. ಅವರು ಕನ್ನಡಕ್ಕಾಗಿ ಹೋರಾಟ ನಡೆಸಿದವರು. ಅಂತಹವರನ್ನು ಜೈಲಿಗೆ ಹಾಕಿರುವುದು ದುರಂತ. ಪ್ರತಿಯೊಬ್ಬ ಕನ್ನಡಿಗನೂ ಇದನ್ನು ಖಂಡಿಸಬೇಕು ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮಲತಾಯಿ ಮಕ್ಕಳಾಗುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರು ನಾವು ಭಾಷಾಂಧರಲ್ಲ. ನಾವು ಎಲ್ಲಾ ಜನರನ್ನು ಸಹೋದರರ ರೀತಿ ಪ್ರೀತಿಸುತ್ತಿದ್ದೇವೆ. ಆದರೆ ಅವರು ಇಲ್ಲಿಯ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿದ ಮೇಲೆ ಹಲವು ವರ್ಷಗಳಲ್ಲಿ ಕನ್ನಡ ಕಲಿಯಿರಿ ಎಂದು ಹೇಳುವುದು ತಪ್ಪೇ? ನಿಮ್ಮ ಮನೆಯಲ್ಲಿ ಖಾಸಗಿಯಾಗಿ ಯಾವ ಭಾಷೆ ಬೇಕಾದರೂ ಮಾತಾಡಿ ಆದರೆ ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಬಳಸಿ ಎಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದರು.

ನಾವು ಯಾವುದೇ ಧರ್ಮದ ವಿರುದ್ಧ ಹೋರಾಡುವುದಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ ಸಿಗಬೇಕು, ರೈತರಿಗೆ ಒಳ್ಳೆಯ ನೀರಾವರಿ ಯೋಜನೆ ಮತ್ತು ಬೆಲೆ ಸಿಗಬೇಕು ಎಂದು ಕೇಳುವುದು ತಪ್ಪೇ? ಇಲ್ಲ ನಾವು ಹೋರಾಟವನ್ನು ಮುಂದುವರೆಸೋಣ ಎಂದು ಒತ್ತಾಯಿಸಿದರು.

ಡಿ.ವೈ.ಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ, ಬಸವರಾಜ್ ಪೂಜಾರ್, ಕರ್ನಾಟಕ ರಣಧೀರ ಪಡೆಯ ರಮಾನಂದ್ ಅಂಕೋಲಾ, ಸುವರ್ಣ ಕರ್ನಾಟಕ ಜನಪರ ವೇದಿಕೆಯ ರಮೇಶ್ ಗೌಡ, ಎಸ್.ಎಫ್.ಐ ನ ಗುರುರಾಜ ದೇಸಾಯಿ, ಕನ್ನಡ ಮನಸ್ಸುಗಳ ಪ್ರತಿಷ್ಥಾನ, ನಿಕೇತ್ ರಾಜ್ ಮೌರ್ಯ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...