Homeಕರ್ನಾಟಕಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ. ಕನ್ನಡ ಹೋರಾಟಗಾರರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಕುತಂತ್ರವಿದೆ ಎಂದು ನಮ್ಮ ಧ್ವನಿ ಬಳಗದ ಮಹೇಂದ್ರ ಕುಮಾರ್ ಆರೋಪಿಸಿದ್ದಾರೆ.

ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿ ಧರ್ಮದ ವಿಚಾರ ಮುನ್ನಲೆಗೆ ತರುವುದು ಸರಿಯಲ್ಲ. ಕರ್ನಾಟಕದಲ್ಲಿ ಎಲ್ಲಾ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿರುವವರು ಕನ್ನಡ ಕಲಿತು ವ್ಯವಹರಿಸಬೇಕು ಮತ್ತು ಕನ್ನಡಿಗರಿಗೆ ಸ್ಥಳೀಯ ಉದ್ಯೋಗ ಸಿಗಬೇಕು ಇವೇ ನಮ್ಮ ಪ್ರಮುಖ ಹಕ್ಕೊತ್ತಾಯಗಳಾಗಿವೆ ಎಂದರು.

ಕೇವಲ ಒಂದು ಬ್ಯಾನರ್ ಹರಿದ ವಿಚಾರವಾಗಿದ್ದರೆ ಬಿ.ಹರೀಶ್ ಕುಮಾರ್ ರವರ ಮನೆ ಮುಂದೆ 2 ಪೊಲೀಸ್ ಬಸ್ ಗಳನ್ನು ತಂದು ನಿಲ್ಲಿಸುವ ಅಗತ್ಯವಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಮಿತ್ ಶಾರವರ ಆದೇಶದ ಮೇರೆಗೆ ಈ ಬಂಧನ ನಡೆಸಿರುವುದು ಅಕ್ಷಮ್ಯ ಎಂದು ತಿಳಿಸಿದರು.

ಕನ್ನಡ ಚಳವಳಿಯ ಅಧ್ಯಕ್ಷ ನಾಗೇಶ್ ಮಾತನಾಡಿ “ನಾವು ಜಾತಿ ಧರ್ಮದ ಭೇದ ಮಾಡುವುದಿಲ್ಲ. ನಮಗೆ ಕನ್ನಡವೇ ಜಾತಿ, ಕನ್ನಡವೇ ಧರ್ಮ. ಕನ್ನಡ ಉಳಿಸಿ ಬೆಳೆಸಲು ಕನ್ನಡ ಸಂಘಟನೆಗಳು ಮಾತ್ರವಲ್ಲದೇ ನಾಡಿನ ಎಲ್ಲಾ ಜನರು ಸ್ಪಂದಿಸುತ್ತಿರುವುದು ಸಂತೋಷಕರ ವಿಷಯವಾಗಿದೆ. ನಾವು ಜೈಲುಗಳಿಗೆ ಹೆದರುವ ಪ್ರಮೇಯವೇ ಇಲ್ಲ ಬದಲಿಗೆ ಕನ್ನಡ ಚಳವಳಿ ಇನ್ನೂ ಜೋರಾಗಲಿದೆ ಎಂದರು.

ಪತ್ರಕರ್ತ ಲಕ್ಷ್ಮಣ್ ಹೂಗಾರ್ ಮಾತನಾಡಿ ಕನ್ನಡಪರ ಸಂಘಟನೆಗಳು ತಮ್ಮ ಮನೆಗಳಿಗಾಗಿ ಹೋರಾಟ ಮಾಡಿದವರಲ್ಲ. ಅವರು ಕನ್ನಡಕ್ಕಾಗಿ ಹೋರಾಟ ನಡೆಸಿದವರು. ಅಂತಹವರನ್ನು ಜೈಲಿಗೆ ಹಾಕಿರುವುದು ದುರಂತ. ಪ್ರತಿಯೊಬ್ಬ ಕನ್ನಡಿಗನೂ ಇದನ್ನು ಖಂಡಿಸಬೇಕು ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮಲತಾಯಿ ಮಕ್ಕಳಾಗುವ ಪರಿಸ್ಥಿತಿ ಉಂಟಾಗಿದೆ. ಕನ್ನಡಿಗರು ನಾವು ಭಾಷಾಂಧರಲ್ಲ. ನಾವು ಎಲ್ಲಾ ಜನರನ್ನು ಸಹೋದರರ ರೀತಿ ಪ್ರೀತಿಸುತ್ತಿದ್ದೇವೆ. ಆದರೆ ಅವರು ಇಲ್ಲಿಯ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿದ ಮೇಲೆ ಹಲವು ವರ್ಷಗಳಲ್ಲಿ ಕನ್ನಡ ಕಲಿಯಿರಿ ಎಂದು ಹೇಳುವುದು ತಪ್ಪೇ? ನಿಮ್ಮ ಮನೆಯಲ್ಲಿ ಖಾಸಗಿಯಾಗಿ ಯಾವ ಭಾಷೆ ಬೇಕಾದರೂ ಮಾತಾಡಿ ಆದರೆ ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಬಳಸಿ ಎಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದರು.

ನಾವು ಯಾವುದೇ ಧರ್ಮದ ವಿರುದ್ಧ ಹೋರಾಡುವುದಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ ಸಿಗಬೇಕು, ರೈತರಿಗೆ ಒಳ್ಳೆಯ ನೀರಾವರಿ ಯೋಜನೆ ಮತ್ತು ಬೆಲೆ ಸಿಗಬೇಕು ಎಂದು ಕೇಳುವುದು ತಪ್ಪೇ? ಇಲ್ಲ ನಾವು ಹೋರಾಟವನ್ನು ಮುಂದುವರೆಸೋಣ ಎಂದು ಒತ್ತಾಯಿಸಿದರು.

ಡಿ.ವೈ.ಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ, ಬಸವರಾಜ್ ಪೂಜಾರ್, ಕರ್ನಾಟಕ ರಣಧೀರ ಪಡೆಯ ರಮಾನಂದ್ ಅಂಕೋಲಾ, ಸುವರ್ಣ ಕರ್ನಾಟಕ ಜನಪರ ವೇದಿಕೆಯ ರಮೇಶ್ ಗೌಡ, ಎಸ್.ಎಫ್.ಐ ನ ಗುರುರಾಜ ದೇಸಾಯಿ, ಕನ್ನಡ ಮನಸ್ಸುಗಳ ಪ್ರತಿಷ್ಥಾನ, ನಿಕೇತ್ ರಾಜ್ ಮೌರ್ಯ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...