Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...