Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...