Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...