Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...