Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...