Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...