Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...