Homeಚಳವಳಿಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ, ಕೊಲೆ ಮತ್ತು ಅದಕ್ಕೆ ಪ್ರತಿಯಾಗಿ ನಡೆಯುತ್ತಿರುವ ‘ಮರಣದಂಡನೆ’ಯ ಪ್ರಯೋಗಗಳನ್ನು, ಮಹಿಳಾ ಮತ್ತು ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ನಾವೆಲ್ಲರೂ ಖಂಡಿಸುತ್ತಿದ್ದೇವೆ ಎಂದು ಹಲವು ಮಹಿಳಾ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಲು ಆಗ್ರಹಿಸಿ ಡಿಸೆಂಬರ್‌ 09ರಂದು ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಜೆ 4.30ರಿಂದ 7.00ರವರೆಗೆ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದಿನ ಪಶುವೈದ್ಯೆ ಮೇಲೆ ನಡೆದ ಭೀಭತ್ಸವಾದ ಅತ್ಯಾಚಾರ ಮತ್ತು ಕೊಲೆ, ಇದೇ ವಾರದಲ್ಲಿ ನಡೆದ, ಛತ್ತೀಸಗಢದ ಅತ್ಯಾಚಾರದ ಘಟನೆ, ಮಹಾರಾಷ್ಟ್ರದ ಅತ್ಯಾಚಾರ ಮತ್ತು ಕೊಲೆ, ಕರ್ನಾಟಕದ ಚಾಮರಾಜನಗರ ಮತ್ತು ಕಲಬುರ್ಗಿಗಳಲ್ಲಿ ನಡೆದ ಬಾಲಕಿಯರ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಗಳು, ನಿಜಕ್ಕೂ ಭಾರತದಲ್ಲಿ ಹೆಣ್ಣುಜೀವ ಅಪಾಯದಲ್ಲಿದೆ ಎಂಬುದರ ಸ್ಪಷ್ಟವಾದ ಸೂಚನೆ ನೀಡಿವೆ. ಇವೆಲ್ಲವನ್ನೂ ಮೀರಿ, ಉತ್ತರಪ್ರದೇಶದ ಉನ್ನಾಂವ್‌ನ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಕೋರ್ಟಿಗೆ ಬರುವ ಹಾದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಅದೇ ಆರೋಪಿಗಳಿಂದ ಬೆಂಕಿಯಿಟ್ಟಿದ್ದಾರೆ. ಹಾಗಾಗಿ ಅತ್ಯಾಚಾರಗಳ ವಿರುದ್ಧ ದಿಟ್ಟ ದನಿಯೆತ್ತಬೇಕಾದ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಅತ್ಯಾಚಾರಗಳು ಕೇವಲ ಲೈಂಗಿಕ ವಾಂಛೆಯಿಂದ ನಡೆಯುವುದಿಲ್ಲ. ಹಿಂಸೆಯನ್ನು ಸಣ್ಣ ವಯಸ್ಸಿನಿಂದ ನೋಡಿ ಬೆಳೆದ ಅಥವಾ ಅನುಭವಿಸಿದ ಮಕ್ಕಳು ದೊಡ್ಡವರಾದಾಗ ಹಿಂಸೆಯ ಪ್ರವರ್ತಕರಾಗುವುದು ಶೇ. 70ರಷ್ಟು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಂಡಿರುವ ಸಂಗತಿ. ಮಹಿಳೆಯನ್ನು ದಮನಿಸಬಹುದು, ಅವಮಾನಿಸಬಹುದು, ಹಿಂಸಿಸಬಹುದು ಮತ್ತು ಕೊಲ್ಲಬಹುದು ಎಂಬ ಪರವಾನಿಗೆಯನ್ನು ಗಂಡಸರಿಗೆ ಧಾರಾಳವಾಗಿ ನೀಡುವ ಸಾಂಸ್ಕೃತಿಕ ಮೌಲ್ಯ ಇರುವ ತನಕ ಹಿಂಸೆಗಳು ನಡೆಯುತ್ತವೆ. ಇದನ್ನು ಬದಲಾಯಿಸಲು, ಹಿರಿಯರು ನಡೆಸುವ ಹಿಂಸೆಗಳನ್ನು ನಿಲ್ಲಿಸುವ ಮತ್ತು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಸಮಾನತೆಯ ಪಾಠವನ್ನು ಆಳವಾಗಿ ಕಲಿಸಬೇಕಾದ ಅಗತ್ಯವಿದೆ ಎಂದು ಮಹಿಳಾ ಮುನ್ನಡೆಯ ಮಲ್ಲಿಗೆಯವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ತಾರತಮ್ಯಗಳನ್ನು ನಿರಾಕರಿಸುವ, ಸಮಾನತೆಯ ಮನಸ್ಥಿತಿಯನ್ನು ಬೆಳೆಸುವಂತಹ ಪಠ್ಯಕ್ರಮವನ್ನು ಸರ್ಕಾರಗಳು ಶಾಲಾ ಶಿಕ್ಷಣದಲ್ಲಿಯೇ ಒಳಗೊಳ್ಳಬೇಕು.

ನಮ್ಮ ಸಮಾಜದಲ್ಲಿ ಪ್ರಚಲಿತವಾಗಿರುವ ‘ಪುರುಷ ಮೇಲಾಧಿಪತ್ಯ’ದ ಪರಿಕಲ್ಪನೆಯ ಪ್ರಕಾರ, ಹೆಣ್ಣನ್ನು ಬಲವಂತದಿಂದ ಮಣಿಸುವುದು ಗಂಡಿನ ಗೌರವವನ್ನು ಹೆಚ್ಚುಮಾಡುತ್ತದೆ; ಮಹಿಳೆಯನ್ನು ಅತ್ಯಾಚಾರ ಮಾಡುವ ಮೂಲಕ ಗಂಡಸು ತನ್ನ ‘ಪೌರುಷ’ವನ್ನು ಸಾಬೀತು ಮಾಡಬಹುದು! ಈ ಪೊಳ್ಳು ‘ಪೌರುಷ’ದ ಕಲ್ಪನೆಯು ತಪ್ಪೆಂಬುದನ್ನೂ, ಪರಸ್ಪರರನ್ನು ಗೌರವಿಸುವ ಮೂಲಕ ಮಾತ್ರವೇ ಗಂಡು-ಹೆಣ್ಣುಗಳಿಬ್ಬರೂ ಆರೋಗ್ಯಕರ ಜೀವನ ನಡೆಸಬಲ್ಲರೆಂಬುದನ್ನೂ ಸಮಾಜದಲ್ಲಿ ಸ್ಥಾಪಿಸಬೇಕು.

ಅತ್ಯಾಚಾರದ ಸಂದರ್ಭಗಳಲ್ಲಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು ಅಸಂಬದ್ಧವಾದ, ಉನ್ಮಾದವನ್ನು ತುಂಬುದ, ಯಾವುದೋ ಒಂದು ಸಮುದಾಯವನ್ನು ಗುರಿಮಾಡುವಂತಹ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೇಲೆ ಕ್ರಿಮಿನಲ್ ಕ್ರಮ ಜರುಗಿಸಬೇಕು.

ಹೆಣ್ಣುಮಕ್ಕಳ ಉಡುಪು, ಅವರ ಸ್ವತಂತ್ರವಾದ ಆಯ್ಕೆಗಳು ಮತ್ತು ಚಲನ-ವಲನಗಳಿಂದ ಅತ್ಯಾಚಾರಗಳಾಗುತ್ತವೆಂಬಂತಹ ತಪ್ಪುತಪ್ಪಾದ ಕಟ್ಟು ಕಥೆಗಳನ್ನು ಹರಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೀಗೆ, ಮಹಿಳೆಯರನ್ನೇ ಅತ್ಯಾಚಾರಗಳಿಗೆ ಹೊಣೆ ಮಾಡುವ ವಾದಗಳನ್ನು ಮುಂದಿಡುತ್ತಾ ಬಂದಿದ್ದರಿಂದಲೇ ಅತ್ಯಾಚಾರಿಗಳಿಗೆ ತಮ್ಮ ಕೃತ್ಯದ ಬಗ್ಗೆ ಪಶ್ಚಾತ್ತಾಪದ ಬದಲು ಹೆಮ್ಮೆ ಮೂಡುವಂತಾಗಿದೆ. ಹೀಗೆ ಪರೋಕ್ಷವಾಗಿ ಅತ್ಯಾಚಾರಗಳನ್ನು ಬೆಂಬಲಿಸುವುದನ್ನೂ ಕೂಡಾ ನಿಯಂತ್ರಿಸಬೇಕು.

ವಿಕೃತ ಲೈಂಗಿಕತೆಯನ್ನು ಬಿಂಬಿಸುತ್ತಾ ಹದಿವಯಸ್ಸಿನ ಗೊಂದಲದಲ್ಲಿರುವ ಮಕ್ಕಳನ್ನು ತಪ್ಪುದಾರಿಗೆಳೆಯುವ ಜಾಲತಾಣಗಳನ್ನೂ, ಸಿನೆಮಾಗಳನ್ನೂ, ಜಾಹೀರಾತುಗಳನ್ನೂ ನಿರ್ಬಂಧಿಸಬೇಕು.

ಅತ್ಯಾಚಾರ ಮತ್ತು ಲೈಂಗಿಕ ಹಿಂಸಾಚಾರದ ಪ್ರಕರಣಗಳ ತನಿಖೆ, ಸಾಕ್ಷಿ ಸಂಗ್ರಹ ಮತ್ತು ವಿಚಾರಣೆಯ ಪ್ರತಿ ಹಂತವನ್ನೂ ಅತ್ಯಂತ ಗಂಭೀರತೆಯಿಂದ, ಸಂತ್ರಸ್ತ ಮಹಿಳೆಯ ಪರವಾದ ಸಹಾನುಭೂತಿಯಿಂದ ನಡೆಸಿದರೆ, ಆರೋಪಿಗಳು ಬಿಡುಗಡೆಯಾಗಿ ಮತ್ತೆ ಹೋಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರಯತ್ನ ಮಾಡಲು ಸಾಧ್ಯವಾಗುವುದಿಲ್ಲ. ನ್ಯಾಯದಾನ ಪ್ರಕ್ರಿಯೆಯನ್ನು ಬಿಗಿಗೊಳಿಸುವುದರಿಂದ ಅತ್ಯಾಚಾರದ ಮನಸ್ಥಿತಿ ಇರುವವರಲ್ಲಿ ಭಯ ಹುಟ್ಟಿಸಬಹುದೇ ಹೊರತು, ಕೆಲವರನ್ನು ಕೊಲ್ಲುವುದರಿಂದಲ್ಲ. ಅತ್ಯಾಚಾರಕ್ಕೆ ಮರಣದಂಡನೆ ಪರಿಹಾರವಲ್ಲ!

ಸಂತ್ರಸ್ತರಿಗೆ ಎಲ್ಲ ಬಗೆಯ ನೆರವನ್ನೂ ಒಂದೇ ಛಾವಣಿಯಡಿ ಒದಗಿಸುವ ‘ಏಕಗವಾಕ್ಷಿ’ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲೂ ಆರಂಭಿಸಬೇಕು.

ಲೈಂಗಿಕ ಹಿಂಸೆ ವಿರೋಧಿ ಜನಚಳವಳಿ, ಮಹಿಳಾ ಮುನ್ನಡೆ, ಗಮನ ಮಹಿಳಾ ಸಮೂಹ, ಅಲ್ ಇಂಡಿಯಾ ಪ್ರೊಗ್ರೆಸ್ಸಿವ್‌ ವುಮೆನ್ಸ್‌ ಅಸೋಸಿಯೇಶನ್, ಕರುಣ ಜೀವ ಕಲ್ಯಾಣ ಟ್ರಸ್ಟ್‌, ಜಿಐಎಚ್‌ ಮಲ್ಯಾಳಿ ವುಮೆನ್ಸ್ ವಿಂಗ್, ಕರ್ನಾಟಕ ಗಾರ್ಮೆಂಟ್ಸ್ ಅಲೈಡ್ ವರ್ಕರ್ ಯೂನಿಯನ್ ರಾಮನಗರ, ಇನ್ಸ್ಟಿಟೂಟ್‌ ಫಾರ್ ಅಲ್ಟರ್‌ನೇಟಿವ್ ರೀಸರ್ಚ್‌ ಅಂಡ್ ಡೆವೆಲಪ್‌ಮೆಂಟ್‌, ಗ್ರಾಮ ಸೇವಾ ಸಂಘಟನೆ, ಹ್ಯುಮನ್‌ ರೈಟ್ಸ್ ಎಂಪವರ್‌ಮೆಂಟ್ ಕೌನ್ಸಿಲ್ ಆಫ್‌ ಇಂಡಿಯಾ ಮುಂತಾದ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...