Homeಕರ್ನಾಟಕ'ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ

‘ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ

- Advertisement -
- Advertisement -

ನಮ್ಮ ಹಕ್ಕೊತ್ತಾಯಗಳು ಮತ್ತು ಬೇಡಿಕೆಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಪ್ರತಿಭಟನೆಯನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಒಳಮೀಸಲಾತಿ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಒಳಮೀಸಲಾತಿ ಜಾರಿ ವಿಳಂಬ ಖಂಡಿಸಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ರಾಜೀನಾಮೆಗೆ ಆಗ್ರಹಿಸಿದ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಮುಖಂಡರು, ಸಚಿವರ ಮನೆಗೆ ಮುತ್ತಿಗೆ ಹಾಕುವುದಕ್ಕೆ ಮುಂದಾದಾಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಒಕ್ಕೂಟ, “ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗಾಗಿ ಆಗ್ರಹಿಸಿ ಕಳೆದ 35 ವರ್ಷಗಳಿಂದ ನಿರಂತರವಾಗಿ ಬೀದಿ ಹೋರಾಟ ಹಾಗೂ ಕಾನೂನು ಹೋರಾಟದಿಂದಾಗಿ ಆಗಸ್ಟ್‌ 1 2024ರಂದು ಮಾನ್ಯ ಸರ್ವೋಚ್ಚ ನ್ಯಾಯಾಲಯದ 7 ಜನ ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಒಳಮೀಸಲಾತಿಯ ಪರವಾಗಿ ತೀರ್ಪು ನೀಡಿ, ರಾಜ್ಯ ಸರ್ಕಾರಗಳ ಹೆಗಲಿಗೆ ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ನೀಡಿ 14 ತಿಂಗಳುಗಳು ಕಳೆದರೂ ಒಳಮೀಸಲಾತಿ ಕುರಿತಂತೆ ತಾರ್ಕಿಕ ಅಂತ್ಯ ಕಂಡಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

“ಕರ್ನಾಟಕ ಸರ್ಕಾರ ತಡವಾಗಿ ಒಳಮೀಸಲಾತಿ ಜಾರಿ ಮಾಡಲು ನಿವೃತ್ತ ನ್ಯಾಯಾಧೀಶರಾದ ಹೆಚ್‌. ಎನ್‌ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸಂಗ್ರಹ ಮಾಡಿ, ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಯ ಕುರಿತು ನಿರ್ಣಯ ಮಾಡಲಾಗಿದೆ. ಇದು ಒಳಮೀಸಲಾತಿ ಹೋರಾಟಕ್ಕೆ ತಾತ್ವಿಕ ಗೆಲುವು ಸಿಕ್ಕಂತಾಗಿದೆ. ಆದರೆ, ಒಳಮೀಸಲಾತಿಯನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಕಳೆದ 2 ತಿಂಗಳಿನಿಂದ ರಾಜ್ಯ ಸರ್ಕಾರ ಮತ್ತು ಸಮಾಜ ಕಲ್ಯಾಣ ಇಲಾಖೆಯು ವಿಳಂಬ ಧೋರಣೆ ಅನುಸರಿಸುತ್ತಿರುವುದು ಒಳಮೀಸಲಾತಿ ಹೋರಾಟಗಾರರಲ್ಲಿ ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೇಲೆ ಹಾಗೂ ಕರ್ನಾಟಕ ಸರ್ಕಾರದ ಮೇಲೆ ವಿಶ್ವಾಸವಿಲ್ಲದಾಗಿದೆ” ಎಂದು ಹೇಳಿದ್ದಾರೆ.

ವಿಳಂಬ ಖಂಡಿಸಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ ಮನೆಗೆ ಒಳಮೀಸಲಾತಿ ಹೋರಾಟಗಾರರು ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಹೋರಾಟಗಾರರನ್ನು ಬಂಧಿಸಿದರು.

“ನಮ್ಮ ಹಕ್ಕೊತ್ತಾಯಗಳಿಗೆ ಸಂಬಂಧಿಸಿದಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳದಿದ್ದರೆ ಹೋರಾಟವನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಾಗುವುದು, ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಲಾಗುವುದು” ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯಗಳು

1. ಬಡ್ತಿ, ಬ್ಯಾಕ್ಲಾಗ್‌ ಹುದ್ದೆಗಳ ನೇಮಕಾತಿಗೆ ಒಳಮೀಸಲಾತಿಯನ್ನು ಅನ್ವಯಿಸಿ ಕೂಡಲೇ ಆದೇಶ ಹೊರಡಿಸಬೇಕು.

2. ಎಕೆ, ಎಡಿ, ಎಎ ಕುರಿತು ಈಗಾಗಲೇ ಹೊರಡಿಸಿರುವ ಆದೇಶದಲ್ಲಿ ಹಲವು ಗೊಂದಲಗಳಿರುವುದರಿಂದ ಪರಿಷ್ಕರಿಸಿ ಮರು ಆದೇಶವನ್ನು ತಕ್ಷಣವೇ ಹೊರಡಿಸಬೇಕು.

3. ಜಸ್ಟೀಸ್‌ ಎಚ್‌.ಎನ್‌. ನಾಗಮೋಹನ್‌ ದಾಸ್‌ ವರದಿಯಲ್ಲಿರುವ 4 ಲಕ್ಷ 73 ಸಾವಿರ ಜನರಲ್ಲಿ ನಕಲಿ ಜನರಿರುವ ಸಂಶಯ ಒಳಮೀಸಲಾತಿ ಹೋರಾಟಗಾರರಲ್ಲಿದೆ. ಹಾಗಾಗಿ, ಕೂಡಲೇ ಈ 4 ಲಕ್ಷ 73 ಸಾವಿರ ಜನರ ಮಾಹಿತಿಯನ್ನು ಬಹಿರಂಗಗೊಳಿಸಬೇಕು.

4. ತೆಲಂಗಾಣ ಮಾದರಿಯಂತೆ ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿಯನ್ನು ಅನ್ವಯಿಸಬೇಕು.

5. ಆರ್ಥಿಕ ಕ್ಷೇತ್ರಗಳಿಗೂ ಒಳಮೀಸಲಾತಿಯನ್ನು ಅನ್ವಯಿಸಿ ಆದೇಶ ಹೊರಡಿಸಬೇಕು.

6. ಶಾಶ್ವತ ಆಯೋಗ ರಚಿಸಿ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿಯನ್ನು ನೀಡಬೇಕು.

7. ಎಸ್‌ಸಿಎಸ್‌ಪಿ/ಟಿಎಸ್‌ಪಿ ಸಲಹೆಗಾರರ ಹುದ್ದೆಯನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡಬೇಕು.

8. ⁠ಒಳಮೀಸಲಾತಿ ಜಾರಿ ಕಾವಲು ಸಮಿತಿಯನ್ನು ರಚಿಸಬೇಕು.

ಒಳಮೀಸಲಾತಿ ಹೋರಾಟ: ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮುಖಂಡರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...