Homeಕರ್ನಾಟಕಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

ಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ಲೋಡಿಂಗ್ & ಅನ್‌ಲೋಡಿಂಗ್ ಕಾರ್ಮಿಕ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಹಮಾಲಿ ಕಾರ್ಮಿಕರು, ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಪಡಿತರ ಯೋಜನೆಗೆ ಅನ್ನಭಾಗ್ಯ ಎಂದು ಹೆಸರಿಟ್ಟು ಇಂದಿಗೆ 12 ವರ್ಷದ ಪೂರ್ಣಗೊಂಡಿದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ. ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆಯಡಿ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಮಾಡುವವರಿಗೆ ಕಾರ್ಮಿಕ ಕಾನೂನುಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಆದರೆ, ಸಾಗಾಣಿಕೆ ಗುತ್ತಿಗೆದಾರರಿಂದ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು- ಸಾಗಾಣಿಕೆ ಗುತ್ತಿಗೆದಾರರ ಜೊತೆ , ಇಎಸ್‌ಐ ಮತ್ತು ಪಿಎಫ್‌ ಕುರಿತು ಸಭೆ ನಡೆಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.

ಅಪರ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬಂದು ಕಾರ್ಮಿಕರ ಮನವಿ ಸ್ವೀಕರಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕ ಕಾನೂನು ಕನಿಷ್ಠ ವೇತನ ಕಾಯ್ದೆ ಪ್ರಕಾರ ಪ್ರತಿವರ್ಷ ಬೆಲೆ ಏರಿಕೆ, ತುಟ್ಟುಭತ್ಯೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿ ಮಾಡಿ ಏಪ್ರಿಲ್ 1ರಿಂದ ಜಾರಿ ಮಾಡುವುದು ಕಾನೂನು. ಆದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಯಾವುದೇ ಮಾನದಂಡವಿಲ್ಲದೆ ತನ್ನಿಚ್ಚೆ ಬಂದಾಗ ಕೂಲಿ ಹೆಚ್ಚಳ ಮಾಡುತ್ತಿದ್ದು, ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಕೂಲಿ ಹೆಚ್ಚಳಕ್ಕೆ ಹಾಗೂ ಕಾರ್ಮಿಕ ಕಾನೂನುಗಳ ಜಾರಿಗೆ ಒಂದು ಸಮಪರ್ಕಕ ನಿಯಮ ಬೇಕಾಗಿದೆ. ಅದನ್ನು ಜಾರಿ ಮಾಡಬೇಕು ಎಂದು ಕಾರ್ಮಿಕರು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಹೇಳಿದ್ದಾರೆ.

ಉದಾಹರಣೆಗೆ ಗೋದಾಮುಗಳಿಂದ ಪಡಿತರ ನ್ಯಾಯಬೆಲೆ ಅಂಗಡಿಗೆ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಚಿಲ್ಲರೆ ಸಾಗಾಣಿಕೆ ಕೂಲಿದರ ಹೆಚ್ಚಳ 2018 ನವೆಂಬರ್‌ನಲ್ಲಿ ಕ್ವಿಂಟಾಲ್‌ಗೆ 16 ರೂ. 2023ರ ಜೂನ್‌ನಲ್ಲಿ ಕ್ವಿಂಟಾಲ್‌ಗೆ 19 ರೂ. 2025ರ ಫೆಬ್ರವರಿಯಲ್ಲಿ ಟೆಂಡರ್ ಆಗಿರುವ ತಾಲೂಕುಗಳಿಗೆ ಮಾತ್ರ 23.62 ರೂ. ನಿಗದಿ ಮಾಡಲಾಗಿದೆ. 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ತಾಂತ್ರಿಕ ಕಾರಣಗಳಿಂದ ಟೆಂಡರ್ ಆಗದೆ ಉಳಿದಿದ್ದು, ಅಲ್ಲಿ ಹಳೆಯ ದರವೇ 19 ರೂ. ಇದೆ. ಕಾರ್ಮಿಕರಿಗೆ ಕ್ವಿಂಟ್ವಾಲ್‌ಗೆ 4.62 ರೂ. ಹಾಗೆಯೇ ಸಗಟು ಸಾಗಾಣಿಕೆ ಟೆಂಡರ್‌ ಆಗದೇ ಉಳಿದಿರುವ ತಾಲೂಕುಗಳಲ್ಲಿ 10ರೂ. ಇದೆ. ಟೆಂಡರ್ ಆಗಿರುವ ತಾಲೂಕುಗಳಿಗೆ 10.92 ರೂ. ಇದೆ. ಇದರಿಂದ ಪ್ರತಿ ಕ್ವಿಂಟ್ವಾಲ್‌ಗೆ ಕಾರ್ಮಿಕರಿಗೆ 5.54 ರೂ. ನಷ್ಟ ಉಂಟಾಗುತ್ತಿದೆ. ಕಾರ್ಮಿಕರು ಪ್ರತಿತಿಂಗಳು ಲಕ್ಷಾಂತರ ರೂ. ನಷ್ಟವಾಗುತ್ತಿದೆ ಎಂದಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ, ಕೆ.ಆರ್‌ ನಗರ ಕೆಎಫ್‌ಸಿಎಸ್‌ಸಿ, ಸರಗೂರು, ಹೆಚ್‌.ಡಿ ಕೋಟೆ, ಹುಣಸೂರು, ನಂಜನಗೂಡು ತಾಲೂಕುಗಳಿಗೆ ಟೆಂಡರ್ ಆಗದೇ ಉಳಿದಿದ್ದು, ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್‌ಗೆ 23.62 ರೂ. ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂ. ನಿಗದಿ ಮಾಡಿ ಆದೇಶ ಮಾಡಬೇಕು. ತಿಂಗಳಿಗೆ ಲಕ್ಷಾಂತರ ರೂ. ಕಾರ್ಮಿಕರಿಗೆ ನಷ್ಟ ಉಂಟಾಗುತ್ತಿದ್ದು, ಫೆಬ್ರವರಿ 2025ರಿಂದಲೇ ಜಾರಿಗೆ ಬರುವಂತೆ ಈ ಕೂಡಲೇ ಕೂಲಿ ಹೆಚ್ಚಳ ಮಾಡಿ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಂಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ &ಅನ್‌ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡರ್ ನಿಯಮಾವಳಿಯಲ್ಲಿ ಇಎಸ್‌ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಆದರೆ, ಇದು ಮೈಸೂರು ಜಿಲ್ಲೆಯಲ್ಲಿ ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ ಎಂದು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಆಗಸ್ಟ್ 30ರಂದು ನಡೆದ ದ್ವಿಪಕ್ಷೀಯ ಕರಾರಿನಲ್ಲಿ ಮೂರು ತಿಂಗಳು ಕಾಲವಕಾಶ ಕೋರಿ, ನಂತರ ಅದರ ಉಲ್ಲಂಘನೆ ಮಾಡಿ 2023ರ ಜುಲೈನಿಂದ ಚಿಲ್ಲರೆ ಸಾಗಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90ರೂ. ಕಡಿಮೆ ಪಾವತಿ ಮಾಡಿಲಾಗಿದೆ. ಇದರ ಬಗ್ಗೆ 2024ರ ಸೆಪ್ಟಂಬರ್ 20ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹಾಗಾಗಿ, ಮೈಸೂರು ಜಿಲ್ಲೆಯ ಕೆಲವು ತಾಲೂಕುಗಳಿಗೆ ಸಾಗಾಣಿಕೆ ಗುತ್ತಿಗೆದಾರರು ಬದಲಾಗಿದ್ದಾರೆ. ಈ ಗುತ್ತಿಗೆದಾರರ ಇಎಂಡಿ ಹಣ ಮತ್ತು ಸಾಗಾಣಿಕೆ ಬಿಲ್ ಹಣ ಪಾವತಿ ಮಾಡದೆ ಕಡ್ಡಾಯವಾಗಿ ತಡೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಆಗಸ್ಟ್ 15ರಂದು ಕರಾಳ ಸ್ವಾತಂತ್ರ್ಯ ದಿನ ಆಚರಿಸುವುದಾಗಿ ಕಾರ್ಮಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯ ಕ್ಷ ಕರಿನಾಯಕ, ಕಾರ್ಯದರ್ಶಿ ಮಹದೇವ ಹಾಗೂ ಮಂಡ್ಯ ಜಿಲ್ಲಾ ಮುಖಂಡರಾದ ಕೃಷ್ಣಪ್ಪ, ಪುಟ್ಟಸ್ವಾಮಿ ಸೇರಿದತೆ ಪ್ರಮುಖರು ಇದ್ದರು.

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...