Homeಕರ್ನಾಟಕಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

ಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ಲೋಡಿಂಗ್ & ಅನ್‌ಲೋಡಿಂಗ್ ಕಾರ್ಮಿಕ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಹಮಾಲಿ ಕಾರ್ಮಿಕರು, ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಪಡಿತರ ಯೋಜನೆಗೆ ಅನ್ನಭಾಗ್ಯ ಎಂದು ಹೆಸರಿಟ್ಟು ಇಂದಿಗೆ 12 ವರ್ಷದ ಪೂರ್ಣಗೊಂಡಿದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ. ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆಯಡಿ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಮಾಡುವವರಿಗೆ ಕಾರ್ಮಿಕ ಕಾನೂನುಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಆದರೆ, ಸಾಗಾಣಿಕೆ ಗುತ್ತಿಗೆದಾರರಿಂದ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು- ಸಾಗಾಣಿಕೆ ಗುತ್ತಿಗೆದಾರರ ಜೊತೆ , ಇಎಸ್‌ಐ ಮತ್ತು ಪಿಎಫ್‌ ಕುರಿತು ಸಭೆ ನಡೆಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.

ಅಪರ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬಂದು ಕಾರ್ಮಿಕರ ಮನವಿ ಸ್ವೀಕರಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕ ಕಾನೂನು ಕನಿಷ್ಠ ವೇತನ ಕಾಯ್ದೆ ಪ್ರಕಾರ ಪ್ರತಿವರ್ಷ ಬೆಲೆ ಏರಿಕೆ, ತುಟ್ಟುಭತ್ಯೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿ ಮಾಡಿ ಏಪ್ರಿಲ್ 1ರಿಂದ ಜಾರಿ ಮಾಡುವುದು ಕಾನೂನು. ಆದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಯಾವುದೇ ಮಾನದಂಡವಿಲ್ಲದೆ ತನ್ನಿಚ್ಚೆ ಬಂದಾಗ ಕೂಲಿ ಹೆಚ್ಚಳ ಮಾಡುತ್ತಿದ್ದು, ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಕೂಲಿ ಹೆಚ್ಚಳಕ್ಕೆ ಹಾಗೂ ಕಾರ್ಮಿಕ ಕಾನೂನುಗಳ ಜಾರಿಗೆ ಒಂದು ಸಮಪರ್ಕಕ ನಿಯಮ ಬೇಕಾಗಿದೆ. ಅದನ್ನು ಜಾರಿ ಮಾಡಬೇಕು ಎಂದು ಕಾರ್ಮಿಕರು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಹೇಳಿದ್ದಾರೆ.

ಉದಾಹರಣೆಗೆ ಗೋದಾಮುಗಳಿಂದ ಪಡಿತರ ನ್ಯಾಯಬೆಲೆ ಅಂಗಡಿಗೆ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಚಿಲ್ಲರೆ ಸಾಗಾಣಿಕೆ ಕೂಲಿದರ ಹೆಚ್ಚಳ 2018 ನವೆಂಬರ್‌ನಲ್ಲಿ ಕ್ವಿಂಟಾಲ್‌ಗೆ 16 ರೂ. 2023ರ ಜೂನ್‌ನಲ್ಲಿ ಕ್ವಿಂಟಾಲ್‌ಗೆ 19 ರೂ. 2025ರ ಫೆಬ್ರವರಿಯಲ್ಲಿ ಟೆಂಡರ್ ಆಗಿರುವ ತಾಲೂಕುಗಳಿಗೆ ಮಾತ್ರ 23.62 ರೂ. ನಿಗದಿ ಮಾಡಲಾಗಿದೆ. 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ತಾಂತ್ರಿಕ ಕಾರಣಗಳಿಂದ ಟೆಂಡರ್ ಆಗದೆ ಉಳಿದಿದ್ದು, ಅಲ್ಲಿ ಹಳೆಯ ದರವೇ 19 ರೂ. ಇದೆ. ಕಾರ್ಮಿಕರಿಗೆ ಕ್ವಿಂಟ್ವಾಲ್‌ಗೆ 4.62 ರೂ. ಹಾಗೆಯೇ ಸಗಟು ಸಾಗಾಣಿಕೆ ಟೆಂಡರ್‌ ಆಗದೇ ಉಳಿದಿರುವ ತಾಲೂಕುಗಳಲ್ಲಿ 10ರೂ. ಇದೆ. ಟೆಂಡರ್ ಆಗಿರುವ ತಾಲೂಕುಗಳಿಗೆ 10.92 ರೂ. ಇದೆ. ಇದರಿಂದ ಪ್ರತಿ ಕ್ವಿಂಟ್ವಾಲ್‌ಗೆ ಕಾರ್ಮಿಕರಿಗೆ 5.54 ರೂ. ನಷ್ಟ ಉಂಟಾಗುತ್ತಿದೆ. ಕಾರ್ಮಿಕರು ಪ್ರತಿತಿಂಗಳು ಲಕ್ಷಾಂತರ ರೂ. ನಷ್ಟವಾಗುತ್ತಿದೆ ಎಂದಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ, ಕೆ.ಆರ್‌ ನಗರ ಕೆಎಫ್‌ಸಿಎಸ್‌ಸಿ, ಸರಗೂರು, ಹೆಚ್‌.ಡಿ ಕೋಟೆ, ಹುಣಸೂರು, ನಂಜನಗೂಡು ತಾಲೂಕುಗಳಿಗೆ ಟೆಂಡರ್ ಆಗದೇ ಉಳಿದಿದ್ದು, ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್‌ಗೆ 23.62 ರೂ. ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂ. ನಿಗದಿ ಮಾಡಿ ಆದೇಶ ಮಾಡಬೇಕು. ತಿಂಗಳಿಗೆ ಲಕ್ಷಾಂತರ ರೂ. ಕಾರ್ಮಿಕರಿಗೆ ನಷ್ಟ ಉಂಟಾಗುತ್ತಿದ್ದು, ಫೆಬ್ರವರಿ 2025ರಿಂದಲೇ ಜಾರಿಗೆ ಬರುವಂತೆ ಈ ಕೂಡಲೇ ಕೂಲಿ ಹೆಚ್ಚಳ ಮಾಡಿ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಂಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ &ಅನ್‌ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡರ್ ನಿಯಮಾವಳಿಯಲ್ಲಿ ಇಎಸ್‌ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಆದರೆ, ಇದು ಮೈಸೂರು ಜಿಲ್ಲೆಯಲ್ಲಿ ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ ಎಂದು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಆಗಸ್ಟ್ 30ರಂದು ನಡೆದ ದ್ವಿಪಕ್ಷೀಯ ಕರಾರಿನಲ್ಲಿ ಮೂರು ತಿಂಗಳು ಕಾಲವಕಾಶ ಕೋರಿ, ನಂತರ ಅದರ ಉಲ್ಲಂಘನೆ ಮಾಡಿ 2023ರ ಜುಲೈನಿಂದ ಚಿಲ್ಲರೆ ಸಾಗಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90ರೂ. ಕಡಿಮೆ ಪಾವತಿ ಮಾಡಿಲಾಗಿದೆ. ಇದರ ಬಗ್ಗೆ 2024ರ ಸೆಪ್ಟಂಬರ್ 20ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹಾಗಾಗಿ, ಮೈಸೂರು ಜಿಲ್ಲೆಯ ಕೆಲವು ತಾಲೂಕುಗಳಿಗೆ ಸಾಗಾಣಿಕೆ ಗುತ್ತಿಗೆದಾರರು ಬದಲಾಗಿದ್ದಾರೆ. ಈ ಗುತ್ತಿಗೆದಾರರ ಇಎಂಡಿ ಹಣ ಮತ್ತು ಸಾಗಾಣಿಕೆ ಬಿಲ್ ಹಣ ಪಾವತಿ ಮಾಡದೆ ಕಡ್ಡಾಯವಾಗಿ ತಡೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಆಗಸ್ಟ್ 15ರಂದು ಕರಾಳ ಸ್ವಾತಂತ್ರ್ಯ ದಿನ ಆಚರಿಸುವುದಾಗಿ ಕಾರ್ಮಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯ ಕ್ಷ ಕರಿನಾಯಕ, ಕಾರ್ಯದರ್ಶಿ ಮಹದೇವ ಹಾಗೂ ಮಂಡ್ಯ ಜಿಲ್ಲಾ ಮುಖಂಡರಾದ ಕೃಷ್ಣಪ್ಪ, ಪುಟ್ಟಸ್ವಾಮಿ ಸೇರಿದತೆ ಪ್ರಮುಖರು ಇದ್ದರು.

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...